Homeಮುಖಪುಟಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಮಣಿಕರ್ಣಿಕಾ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

- Advertisement -
- Advertisement -

’ಮಣಿಕರ್ಣಿಕಾ: ದಿ ಕ್ವೀನ್ ಆಫ್ ಝೂನ್ಸಿ’ ಚಿತ್ರದ ನಿರ್ದೇಶನದ ಬಗ್ಗೆ ನಟಿ ಕಂಗನಾ ರಣಾವತ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ, ವಿವಾದದ ಬಗ್ಗೆ ಮಾತನಾಡಿದ ಕ್ರಿಶ್, ಕಂಗನಾರಿಂದ ತಾನು ಜಗತ್ತಿಗೆ ಅಪರಿಚಿತನಾಗಿರಬಹುದೆಂಬ ಭಯವಿದೆ ಎಂದು ಹೇಳಿದ್ದಾರೆ.

ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕೊನೆಯ ಬಾರಿಗೆ ವಿವಾದದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳುತ್ತಾ ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ನಟಿ ರಾಕುಲ್ ಪ್ರೀತ್ ಸಿಂಗ್ ಜೊತೆಗೆ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ಕಾಣಿಸಿಕೊಂಡರು.

ಡಿಸೆಂಬರ್ 18 ರಂದು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ನಲ್ಲಿ  ಪ್ರಸಾರವಾಗಲಿರುವ, ನಟಿ ಸಮಂತಾ ಅವರ ಟಾಕ್ ಶೋ ಸ್ಯಾಮ್ ಜಾಮ್‌ನಲ್ಲಿ ರಾಕುಲ್ ಪ್ರೀತ್ ಸಿಂಗ್ ಮತ್ತು ಕ್ರಿಶ್ ಜಗಾರ್ಲಮುಡಿ ಅವರು ಅತಿಥಿಗಳಾಗಿದ್ದಾರೆ. ಇತ್ತೀಚೆಗೆ, ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಇಬ್ಬರು ಕಲಾವಿದರು ತಮ್ಮ ಸುತ್ತಲು ಹರಡಿದ್ದ, ಕಾಡಿದ ವಿವಾದಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್

ಮಣಿಕರ್ಣಿಕಾ ಮತ್ತು ಕಂಗನಾ ರಣಾವತ್ ಅವರೊಂದಿಗೆ ಏನಾಯಿತು ಎಂದು ನಟಿ ಸಮಂತಾ ಕೇಳಿದಾಗ, “ನಾನು ಕೊನೆಯ ಬಾರಿಗೆ ಮಾತನಾಡಲು ಬಯಸುತ್ತೇನೆ. ಕಂಗನಾ ಮತ್ತು ಅವಳ ತಂಡವು ಚಿತ್ರವನ್ನು ವೀಕ್ಷಿಸಿತ್ತು. ಆದಾಗಿ ಎರಡು ದಿನಗಳ ನಂತರ ನನಗೆ ಕರೆ ಬಂತು ಎಂದಿದ್ದಾರೆ. ನನ್ನ ಏಕೈಕ ಭಯವೆಂದರೆ ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು. ಕಲಾವಿದರಾದ ನಾವು ಉತ್ತಮ ಅವಕಾಶಗಳನ್ನು ಪಡೆದಾಗ ಮಾತ್ರ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಬಹುದು” ಎಂದು ಕ್ರಿಶ್ ಹೇಳಿದ್ದಾರೆ.

ಮಣಿಕರ್ಣಿಕಾ ಚಿತ್ರ ವಿವಾದವೇನು…?

2019 ರಲ್ಲಿ ನಟಿ ಕಂಗನಾ ರಣಾವತ್ ಮಣಿಕರ್ಣಿಕಾ: ರಾಣಿ ಆಫ್ ಝಾನ್ಸಿ ಚಿತ್ರವನ್ನು ವಹಿಸಿಕೊಂಡು, ಚಿತ್ರದ ಬಹಳಷ್ಟು ಭಾಗಗಳನ್ನು ಮತ್ತೆ ಚಿತ್ರೀಕರಿಸಿದರು. ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಅವರೊಂದಿಗೆ ಸಹ-ನಿರ್ದೇಶಕರ ಕ್ರೆಡಿಟ್ ಕೂಡ ಹಂಚಿಕೊಂಡಿದ್ದರು. ನಂತರ ಚಿತ್ರದ 70 ಪ್ರತಿಶತವನ್ನು ತಾವೇ ನಿರ್ದೇಶಿಸಿದೆ ಎಂದು ಕಂಗನಾ ಹೇಳಿಕೊಂಡಿದ್ದರು. ಇದಕ್ಕೆ ಆಕೆಯ ಸಹೋದರಿ ರಂಗೋಲಿ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ಈ ಬಗ್ಗೆ ನಿರ್ದೇಶಕ ಕ್ರಿಶ್ ಜಗಾರ್ಲಮುಡಿ ಹಲವಾರು ಸಂದರ್ಶನಗಳಲ್ಲಿ, ಕಂಗನಾ ಅವರಿಂದ ಚಿತ್ರವನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಜೊತೆಗೆ ಚಿತ್ರದಲ್ಲಿ ಹಲವರ ಪಾತ್ರಗಳನ್ನು ಕಡಿತಗೊಳಿಸಿ, ಸಣ್ಣ ಪುಟ್ಟ ಬದಲಾವಣೆ ಮಾಡಬೇಕು ಎಂದು ಏನೇನೋ ಬದಲಾವಣೆ ಮಾಡಿದರು’ ಎಂದು ಆರೋಪಿಸಿದ್ದರು.

ವಿವಾದದಿಂದ ಬೇಸತ್ತ ಕ್ರಿಶ್, “ಕಂಗನಾ ಮತ್ತು ನಾನು ಇಬ್ಬರೂ ಈ ಉದ್ಯಮದಿಂದ ಬೇಗ ದೂರ  ಸರಿಯುವುದಿಲ್ಲ. ಭವಿಷ್ಯದಲ್ಲಿ ನಾನು ಇನ್ನೂ ಅನೇಕ ಚಿತ್ರಗಳನ್ನು ನಿರ್ದೇಶಿಸುತ್ತೇನೆ ಮತ್ತು ಅವರು ಕೂಡ ಚಿತ್ರರಂಗದಲ್ಲಿರುತ್ತಾರೆ. ಯಾರು ಎಲ್ಲಿ ನಿಲ್ಲುತ್ತಾರೆ ಎಂದು ಜನರಿಗೆ ತಿಳಿಯುತ್ತದೆ. ನಾನು ಕಂಗನಾ ಮತ್ತು ಇಡೀ ವಿವಾದದಿಂದ ದಣಿದಿದ್ದೇನೆ” ಎಂದು ಹೇಳಿದ್ದರು.

ಈಗ ಈ ಟಾಕ್ ಶೋನಿಂದ ಮತ್ತೊಮ್ಮೆ ಮಣಿಕರ್ಣಿಕಾ ಚಿತ್ರ ವಿವಾದ ಜನರ ನೆನಪಿಗೆ ಬಂದಿದೆ. ಬರೀ ಪ್ರೋಮೋ ಇಷ್ಟೊಂದು ವೈರಲ್ ಆಗಿದೆ. ಡಿಸೆಂಬರ್‌ 18 ರಂದು ಪೂರ್ತಿ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕ್ರಿಶ್ ವಿವಾದದ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹೊರಬರಲಿದೆ.

ನಟಿ ಕಂಗನಾ ರಣಾವತ್ ಇತ್ತಿಚೆಗೆ ಹೆಚ್ಚು ಹೆಚ್ಚು ಟ್ರೋಲ್ ಮತ್ತು ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲೇ ಮತ್ತೆ ಮಣಿಕರ್ಣಿಕಾ ವಿವಾದ ಹೊರ ಬಿದ್ದಿದೆ.


ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...