Homeಮುಖಪುಟತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದಕ್ಕೆ ದೆಹಲಿ ಪೊಲೀಸರು ಸುಮಾರು 955 ವಿದೇಶಿಗರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾರ್ಚ್‌ನಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ಆರೋಪದಲ್ಲಿ ನೂರಾರು ವಿದೇಶಿಯರ ಮೇಲೆ ಪ್ರಕರಣ ದಾಖಲಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇವರಲ್ಲಿ 36 ವಿದೇಶಿಯರು ವಿಚಾರಣೆ ಎದುರಿಸುತ್ತಿದ್ದರು. ಈಗ ದೆಹಲಿ ಹೈಕೋರ್ಟ್ ಇವರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿ ದೋಷಮುಕ್ತರನ್ನಾಗಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಲೈವ್ ಲಾ, “ಕೊರೊನಾ ಸಾಂಕ್ರಾಮಿಕ ರೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಬ್ಲೀಘಿ ಜಮಾತ್ ಸಭೆಗೆ ಹಾಜರಾಗಿದ್ದ ಆರೋಪದಡಿ 36 ವಿದೇಶಿಯರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

 

ಇದನ್ನೂ ಓದಿ: ತಬ್ಲೀಘಿ ಜಮಾತ್ ಕ್ಷಮೆಯಾಚಿಸಿದರೆ ಭಾರತವನ್ನು ತೊರೆಯಬಹುದು: ಕೇಂದ್ರ

ಕಳೆದ ಮಾರ್ಚ್‌ನಲ್ಲಿ ನಿಝಾಮುದ್ದೀನ್ ಮರ್ಕಝ್ ಕೋವಿಡ್-19 ಹಾಟ್‌ಸ್ಪಾಟ್ ಆಗಿ ಹೊರಹೊಮ್ಮಿದ್ದಾಗ ಭಾರೀ ಸುದ್ದಿಯಾಗಿತ್ತು. ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದಕ್ಕೆ ದೆಹಲಿ ಪೊಲೀಸರು ಸುಮಾರು 955 ವಿದೇಶಿಗರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಬಹುಪಾಲು ವಿದೇಶಿ ತಬ್ಲೀಘಿ ಜಮಾತ್ ಸದಸ್ಯರು ಮನವಿಯ ಮೇರೆಗೆ ತಮ್ಮ ದೇಶಗಳಿಗೆ ಮರಳಿದ್ದರೆ, 44 ಮಂದಿ ದೆಹಲಿಯಲ್ಲಿ ವಿಚಾರಣೆ ಎದುರಿಸಲು ನಿರ್ಧರಿಸಿದ್ದರು. ಇವರ ಪೈಕಿ ಮೊದಲು 8 ಸದಸ್ಯರುಗಳನ್ನು ಬಿಡುಗಡೆ ಮಾಡಲಾಗಿತ್ತು. ಅವರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷಧಾರಗಳಿರಲಿಲ್ಲ.

ಇದನ್ನೂ ಓದಿ: ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ಇದೀಗ ಎಲ್ಲಾ ಸದಸ್ಯರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿದೆ.

ಜುಲೈನಲ್ಲಿ ದೆಹಲಿಯ ನ್ಯಾಯಾಲಯವು ಈ ಕಾರ್ಯಕ್ರಮಕ್ಕೆ ಹಾಜರಾದ 82 ಬಾಂಗ್ಲಾದೇಶಿಗಳಿಗೆ ಜಾಮೀನು ನೀಡಿತ್ತು. ಮತ್ತೊಂದು ಸ್ಥಳೀಯ ನ್ಯಾಯಾಲಯವು ದಂಡ ಪಾವತಿಸಿದ ನಂತರ ಅರವತ್ತೆರಡು ಮಲೇಷಿಯನ್ನರು ಮತ್ತು 11 ಸೌದಿ ಅರೇಬಿಯನ್ನರನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರವು ಜೂನ್‌ನಲ್ಲಿ 2,500 ಕ್ಕೂ ಹೆಚ್ಚು ತಬ್ಲೀಘಿ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಿ, 10 ವರ್ಷಗಳ ಕಾಲ ದೇಶಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿತ್ತು.

ಇದನ್ನೂ ಓದಿ: ತಬ್ಲಿಘಿದು ಬೇಜವಾಬ್ದಾರಿ, ಸರ್ಕಾರದ್ದು ಹೊಣೆಗೇಡಿತನ : ಅದಕ್ಕಿಂತಲೂ ಭೀಕರ ಕಮ್ಯುನಲ್ ವೈರಸ್

ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಆರಂಭಿಕ ವಾರಗಳಲ್ಲಿ ದೇಶಾದ್ಯಂತ  ಕೊರೊನಾ ವೈರಸ್ ಸೋಂಕು ಹರಡಿದ್ದಕ್ಕೆ ತಬ್ಲೀಘಿ ಜಮಾತ್ ಸಭೆಯನ್ನು ದೂಷಿಸಲಾಗಿತ್ತು.

ಈ ಸಭೆಯಲ್ಲಿ ಅನೇಕ ವಿದೇಶಿಯರು ಭಾಗವಹಿಸಿದ್ದರು. ತಬ್ಲೀಘಿ ಜಮಾತ್ ಸುನ್ನಿ ಮುಸ್ಲಿಂ ಪಂಥವಾಗಿದ್ದು, 80 ಕ್ಕೂ ಹೆಚ್ಚು ದೇಶಗಳಲ್ಲಿ ಅನುಯಾಯಿಗಳನ್ನು ಹೊಂದಿದೆ.


ಇದನ್ನೂ ಓದಿ: ಮತ್ತೇ 12 ತಬ್ಲೀಘಿಗಳನ್ನು ದೋಷಮುಕ್ತ ಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...