Homeಅಂತರಾಷ್ಟ್ರೀಯಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

’ಟ್ವಿಟರ್ ಕಿಲ್ಲರ್’ ಒಂಬತ್ತು ಮಂದಿಯನ್ನು ಕೊಲೆ ಮಾಡಿ, ಅವರ ದೇಹದ ಅಂಗಾಂಗಗಳನ್ನು ಬೇರ್ಪಡಿಸಿ ತನ್ನ ಅಪಾರ್ಟ್‌ಮೆಂಟ್‌ನ ಶೀತಲೀಕರಣ ಘಟಕದಲ್ಲಿ ಸಂಗ್ರಹಿಸಿಟ್ಟಿದ್ದ. 

- Advertisement -
- Advertisement -

ಆನ್‌ಲೈನ್‌ನಲ್ಲಿ ಭೇಟಿಯಾದ ಒಂಬತ್ತು ಜನರನ್ನು ಕೊಲೆ ಮಾಡಿ ತುಂಡು ತುಂಡು ಮಾಡಿದ್ದ ಜಪಾನಿನ ’ಟ್ವಿಟರ್ ಕಿಲ್ಲರ್’ ಎಂದು ಖ್ಯಾತನಾಗಿದ್ದ ವ್ಯಕ್ತಿಗೆ ಟೋಕಿಯೊ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.

30 ವರ್ಷದ ಅಪರಾಧಿ ತಕಾಹಿರೋ ಶಿರೈಶಿ ಯುವ ಸಂತ್ರಸ್ತರನ್ನು ಕೊಂದು ತುಂಡು ತುಂಡು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಹತರಾದವರಲ್ಲಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಅಪರಾಧಿಗೆ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾಗಿದ್ದವರು.

15 ರಿಂದ 26 ವರ್ಷದೊಳಗಿನ ಮೃತ ಸಂತ್ರಸ್ತರು ಸಾಮಾಜಿಕ ಮಾಧ್ಯಮದಲ್ಲಿ ಆತ್ಮಹತ್ಯಾ ಆಲೋಚನೆಗಳನ್ನು ವ್ಯಕ್ತಪಡಿಸಿದ್ದರು. ತಮ್ಮ ಸಾವಿಗೆ ಒಪ್ಪಿಗೆ ಸೂಚಿಸಿದ್ದರು ಎಂದು ವಾದಿಸಿದ ಆರೋಪಿ ಪರ ವಕೀಲ ಜೈಲು ಶಿಕ್ಷೆ ನೀಡುವಂತೆ ಮನವಿ ಮಾಡಿದ್ದರು.

ಆದರೆ, ಮಂಗಳವಾರ ಅಪರಾಧಿ ತಕಾಹಿರೋ ಶಿರೈಶಿಗೆ ನ್ಯಾಯಾಧೀಶ ನೌಕುನಿ ಯಾನೊ ಮರಣದಂಡನೆ ವಿಧಿಸಿದ್ದಾರೆ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

’ಟ್ವಿಟರ್ ಕಿಲ್ಲರ್’ ಒಂಬತ್ತು ಮಂದಿಯನ್ನು ಕೊಲೆ ಮಾಡಿ, ಅವರ ದೇಹದಿಂದ ಅಂಗಾಂಗಗಳನ್ನು ಬೇರ್ಪಡಿಸಿ ಅವುಗಳನ್ನು ತನ್ನ ಅಪಾರ್ಟ್‌ಮೆಂಟ್‌ನ ಶೀತಲೀಕರಣ ಘಟಕದಲ್ಲಿ ಸಂಗ್ರಹಿಸಿಟ್ಟಿದ್ದ.

“ಒಂಬತ್ತು ಯುವಕರ ಪ್ರಾಣವನ್ನು ಕಸಿದುಕೊಳ್ಳುವುದು ಅತ್ಯಂತ ಗಂಭೀರವಾಗಿದೆ. ಈ ಕೊಲೆಗಳಿಗೆಲ್ಲ ಆರೋಪಿಯೇ ನೇರ ಹೊಣೆ. ಹತರಾದವರ್‍ಯಾರೂ ಕೊಲೆಯಾಗಲು ಒಪ್ಪಿರಲಿಲ್ಲ. ಈತನ ಕೃತ್ಯದಿಂದ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾವು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದರು. ಅಂತಹವರನ್ನು ಸಂಪರ್ಕಿಸಲು ಶಿರೈಶಿ ಟ್ವಿಟ್ಟರ್ ಅನ್ನು ಬಳಸಿದ್ದಾರೆ. ಟ್ವಿಟರ್‌ನಲ್ಲಿ ‘ಹ್ಯಾಂಗ್‌ ಮ್ಯಾನ್‌’ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿ, ತಾನು ಅವರಿಗೆ ಸಹಾಯ ಮಾಡುವುದಾಗಿ ತಿಳಿಸಿ, ತನ್ನ ಅಪಾರ್ಟ್‌ಮೆಂಟ್‌ಗೆ ಕರೆಸಿಕೊಂಡು ಕೊಲೆ ಮಾಡುತ್ತಿದ್ದ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಚಾರಣೆ ವೀಕ್ಷಣೆಗೆ ನ್ಯಾಯಾಲಯವು ಸಾರ್ವಜನಿಕರಿಗಾಗಿ ಕೇವಲ 16 ಸ್ಥಾನಗಳನ್ನು ಮಾತ್ರ ಹೊಂದಿತ್ತು. ಆದರೆ, ಈ ಪ್ರಕರಣದ ವಿಚಾರಣೆಯನ್ನು ಖುದ್ದಾಗಿ ನೋಡಲು ಸುಮಾರು 435 ಜನರು ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...