Homeಮುಖಪುಟಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

”2014, 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..?’

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಕಳ್ಳರ ಪಕ್ಷವಾಗಿದ್ದು, ಸಮಾಜದಲ್ಲಿ ವಿವಿಧ ಗುಂಪುಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

“ನಾವು ರಾಜ್ಯದ ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಯಾವಾಗಲೂ ನಮ್ಮನ್ನು ಕಳ್ಳರು ಎಂದು ಆರೋಪಿಸುತ್ತಾರೆ. ಆದರೆ, ಬಿಜೆಪಿಗಿಂತ ದೊಡ್ಡ ಕಳ್ಳ ಯಾರು ಇಲ್ಲ. ಅವರು ದೊಡ್ಡ ದರೋಡೆಕೋರರು. ಇಡೀ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಅವರು ‘ದಂಗಾ’ ಎಂಬ ಹೊಸ ಧರ್ಮವನ್ನು ಪ್ರಾರಂಭಿಸಿದರು. ಇದು  ಸ್ವಾಮಿ ವಿವೇಕಾನಂದ ಅಥವಾ ರಾಮಕೃಷ್ಣ ಪರಮಹಂಸ ಸೂಚಿಸಿದಂತೆ ಹಿಂದೂ ಧರ್ಮವಲ್ಲ” ಎಂದು ಜಲ್ಪೈಗುರಿಯಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಬಿಜೆಪಿಯವರು ಹಿಂದೂ, ಮುಸ್ಲಿಂ, ಸಿಖ್ಖರು ಮತ್ತು ಕ್ರಿಶ್ಚಿಯನ್ನರ ನಡುವೆ ದ್ವೇಷವನರ್‍ನು ಎತ್ತಿಕಟ್ಟುತ್ತಾರೆ.  ಬಂಗಾಳಿ-ರಾಜ್‌ಬೋನ್ಶಿ, ಬಂಗಾಳಿ-ಬೋಡೋ ಜನರ ನಡುವೆ, ಬೋಡಿ ಮತ್ತು ಮುಸ್ಲಿಮರ ನಡುವೆ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವೆ ಅಥವಾ ಕ್ರಿಶ್ಚಿಯನ್ನರು ಮತ್ತು ಆದಿವಾಸಿಗಳ ನಡುವೆ ದ್ವೇಷ ಬಿತ್ತುವುದೇ ಅವರ ಕೆಲಸವಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಬಿಜೆಪಿಗಿಂತ ದೊಡ್ಡ ಕಳ್ಳರ ಪಕ್ಷ ಯಾವುದು ಇಲ್ಲ. ಅವರು ಚಂಬಲ್‌ನ ದರೋಡೆಕೋರರು ಎಂದಿರುವ ಮಮತಾ ಬ್ಯಾನರ್ಜಿ, ಬಿಜೆಪಿಗರು 2014, 2016, 2019 ರ ಚುನಾವಣೆಗಳಲ್ಲಿ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಏಳು ಚಹಾ ತೋಟಗಳನ್ನು ಮತ್ತೆ ತೆರೆಯಲಾಗುವುದು, ಕೇಂದ್ರವು ಅವುಗಳನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದ್ದರು. ಅವರು ತಮ್ಮ ಭರವಸೆಯನ್ನು ಪೂರೈಸಿದ್ದಾರೆಯೇ?’ ಎಂದು ಪ್ರಶ್ನೆಸಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, ಆದರೆ ಅವರು ಕೇವಲ 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..? ಇನ್ನೂ, 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಪ್ರತಿ ಖಾತೆಯಲ್ಲೂ 15 ಲಕ್ಷ ರೂ. ಹಾಕುವ ಭರವಸೆ ನೀಡಿದರು. ಅವರು ಆ ಭರವಸೆಯನ್ನಾದರೂ ಉಳಿಸಿಕೊಂಡಿದ್ದಾರೆಯೇ? ಅವರು ಬರೀ ಸುಳ್ಳು ಭರವಸೆಗಳನ್ನು ಮಾತ್ರ ನೀಡುತ್ತಾರೆ” ಎಂದು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಗೂರ್ಖಾಲ್ಯಾಂಡ್ ವಿಷಯದ ಕುರಿತು ಮಾತನಾಡಿದ ಮುಖ್ಯಮಂತ್ರಿ, “ಪ್ರತಿ ಚುನಾವಣೆಯಲ್ಲೂ ಅವರು ಗೂರ್ಖಾಲ್ಯಾಂಡ್‌ ಭರವಸೆ ನೀಡುತ್ತಾರೆ. ಆದರೆ ಈಡೇರಿಸುವುದಿಲ್ಲ. ಈ ವಿಷಯವನ್ನು ಡಾರ್ಜಿಲಿಂಗ್‌ನ ಜನರು ಈಗ ಅರಿತುಕೊಂಡಿದ್ದಾರೆ. ನಾವು ಮಾತ್ರ ಡಾರ್ಜಿಲಿಂಗ್‌ಗೆ ಶಾಶ್ವತ ಪರಿಹಾರವನ್ನು ನೀಡಬಲ್ಲೆವು’ ಎಂದು ಭರವಸೆ ನೀಡಿದ್ದಾರೆ.

ಗೂರ್ಖಾ ಜನಮುಕ್ತಿ ಮೋರ್ಚಾದ (GJM) ಹಿರಿಯ ನಾಯಕ ಬಿಮಲ್ ಗುರುಂಗ್ ಬಣದ ರೋಶನ್ ಗಿರಿ ಕೂಡ ಮುಂದಿನ ವರ್ಷದ ಪಶ್ಚಿಮ ಬಂಗಾಳ ವಿಧಾನಸಭ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

“ನಾವು ಬಿಜೆಪಿಯನ್ನು ನಂಬುವುದಿಲ್ಲ ಆದರೆ ತೃಣಮೂಲ ಕಾಂಗ್ರೆಸ್ ಮೇಲೆ ನಮಗೆ ನಂಬಿಕೆ ಇದೆ” ಎಂದು ಗೂರ್ಖಾ ಜನಮುಕ್ತಿ ಮೋರ್ಚಾದ  ರೋಶನ್ ಗಿರಿ ಹೇಳಿದ್ದರು.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...