Homeಮುಖಪುಟಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

”2014, 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..?’

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಕಳ್ಳರ ಪಕ್ಷವಾಗಿದ್ದು, ಸಮಾಜದಲ್ಲಿ ವಿವಿಧ ಗುಂಪುಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

“ನಾವು ರಾಜ್ಯದ ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಯಾವಾಗಲೂ ನಮ್ಮನ್ನು ಕಳ್ಳರು ಎಂದು ಆರೋಪಿಸುತ್ತಾರೆ. ಆದರೆ, ಬಿಜೆಪಿಗಿಂತ ದೊಡ್ಡ ಕಳ್ಳ ಯಾರು ಇಲ್ಲ. ಅವರು ದೊಡ್ಡ ದರೋಡೆಕೋರರು. ಇಡೀ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಅವರು ‘ದಂಗಾ’ ಎಂಬ ಹೊಸ ಧರ್ಮವನ್ನು ಪ್ರಾರಂಭಿಸಿದರು. ಇದು  ಸ್ವಾಮಿ ವಿವೇಕಾನಂದ ಅಥವಾ ರಾಮಕೃಷ್ಣ ಪರಮಹಂಸ ಸೂಚಿಸಿದಂತೆ ಹಿಂದೂ ಧರ್ಮವಲ್ಲ” ಎಂದು ಜಲ್ಪೈಗುರಿಯಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಬಿಜೆಪಿಯವರು ಹಿಂದೂ, ಮುಸ್ಲಿಂ, ಸಿಖ್ಖರು ಮತ್ತು ಕ್ರಿಶ್ಚಿಯನ್ನರ ನಡುವೆ ದ್ವೇಷವನರ್‍ನು ಎತ್ತಿಕಟ್ಟುತ್ತಾರೆ.  ಬಂಗಾಳಿ-ರಾಜ್‌ಬೋನ್ಶಿ, ಬಂಗಾಳಿ-ಬೋಡೋ ಜನರ ನಡುವೆ, ಬೋಡಿ ಮತ್ತು ಮುಸ್ಲಿಮರ ನಡುವೆ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ನಡುವೆ ಅಥವಾ ಕ್ರಿಶ್ಚಿಯನ್ನರು ಮತ್ತು ಆದಿವಾಸಿಗಳ ನಡುವೆ ದ್ವೇಷ ಬಿತ್ತುವುದೇ ಅವರ ಕೆಲಸವಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಂಗಾಳವನ್ನು’ಗಲಭೆ ಪೀಡಿತ ಗುಜರಾತ್’ ಮಾಡಲು ಎಂದಿಗೂ ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

’ಬಿಜೆಪಿಗಿಂತ ದೊಡ್ಡ ಕಳ್ಳರ ಪಕ್ಷ ಯಾವುದು ಇಲ್ಲ. ಅವರು ಚಂಬಲ್‌ನ ದರೋಡೆಕೋರರು ಎಂದಿರುವ ಮಮತಾ ಬ್ಯಾನರ್ಜಿ, ಬಿಜೆಪಿಗರು 2014, 2016, 2019 ರ ಚುನಾವಣೆಗಳಲ್ಲಿ ಜಲ್ಪೈಗುರಿ-ಅಲಿಪುರ್ದಾರ್ ಪ್ರದೇಶದಲ್ಲಿ ಏಳು ಚಹಾ ತೋಟಗಳನ್ನು ಮತ್ತೆ ತೆರೆಯಲಾಗುವುದು, ಕೇಂದ್ರವು ಅವುಗಳನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದ್ದರು. ಅವರು ತಮ್ಮ ಭರವಸೆಯನ್ನು ಪೂರೈಸಿದ್ದಾರೆಯೇ?’ ಎಂದು ಪ್ರಶ್ನೆಸಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದ್ದರು, ಆದರೆ ಅವರು ಕೇವಲ 2 ಲಕ್ಷ ಉದ್ಯೋಗಗಳನ್ನಾದರೂ ನೀಡಿದ್ದಾರೆಯೇ..? ಇನ್ನೂ, 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಪ್ರತಿ ಖಾತೆಯಲ್ಲೂ 15 ಲಕ್ಷ ರೂ. ಹಾಕುವ ಭರವಸೆ ನೀಡಿದರು. ಅವರು ಆ ಭರವಸೆಯನ್ನಾದರೂ ಉಳಿಸಿಕೊಂಡಿದ್ದಾರೆಯೇ? ಅವರು ಬರೀ ಸುಳ್ಳು ಭರವಸೆಗಳನ್ನು ಮಾತ್ರ ನೀಡುತ್ತಾರೆ” ಎಂದು ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

ಗೂರ್ಖಾಲ್ಯಾಂಡ್ ವಿಷಯದ ಕುರಿತು ಮಾತನಾಡಿದ ಮುಖ್ಯಮಂತ್ರಿ, “ಪ್ರತಿ ಚುನಾವಣೆಯಲ್ಲೂ ಅವರು ಗೂರ್ಖಾಲ್ಯಾಂಡ್‌ ಭರವಸೆ ನೀಡುತ್ತಾರೆ. ಆದರೆ ಈಡೇರಿಸುವುದಿಲ್ಲ. ಈ ವಿಷಯವನ್ನು ಡಾರ್ಜಿಲಿಂಗ್‌ನ ಜನರು ಈಗ ಅರಿತುಕೊಂಡಿದ್ದಾರೆ. ನಾವು ಮಾತ್ರ ಡಾರ್ಜಿಲಿಂಗ್‌ಗೆ ಶಾಶ್ವತ ಪರಿಹಾರವನ್ನು ನೀಡಬಲ್ಲೆವು’ ಎಂದು ಭರವಸೆ ನೀಡಿದ್ದಾರೆ.

ಗೂರ್ಖಾ ಜನಮುಕ್ತಿ ಮೋರ್ಚಾದ (GJM) ಹಿರಿಯ ನಾಯಕ ಬಿಮಲ್ ಗುರುಂಗ್ ಬಣದ ರೋಶನ್ ಗಿರಿ ಕೂಡ ಮುಂದಿನ ವರ್ಷದ ಪಶ್ಚಿಮ ಬಂಗಾಳ ವಿಧಾನಸಭ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

“ನಾವು ಬಿಜೆಪಿಯನ್ನು ನಂಬುವುದಿಲ್ಲ ಆದರೆ ತೃಣಮೂಲ ಕಾಂಗ್ರೆಸ್ ಮೇಲೆ ನಮಗೆ ನಂಬಿಕೆ ಇದೆ” ಎಂದು ಗೂರ್ಖಾ ಜನಮುಕ್ತಿ ಮೋರ್ಚಾದ  ರೋಶನ್ ಗಿರಿ ಹೇಳಿದ್ದರು.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....