Homeಚಳವಳಿರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಕಾರ್ಖಾನೆ ಲಾಕೌಟ್ ಘೋಷಿಸಿದ ಆಡಳಿತ ಮಂಡಳಿ, ಅದೇ ಸಮಯದಲ್ಲಿ ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಕಾರ್ಖಾನೆಯ ಹೊಸ ಘಟಕ ಆರಂಭಿಸಿದೆ.

- Advertisement -
- Advertisement -

ರಾಮನಗರದ ಅರವಿಂದ್ ಕಾರ್ಖಾನೆ ಕಾರ್ಮಿಕರು ಆಡಳಿತ ಮಂಡಳಿಯ ನಡೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಅರವಿಂದ್ ಲೈಫ್‌ಸ್ಟೈಲ್‌ ಬ್ರಾಂಡ್‌ ಲಿಮಿಟೆಡ್ ಕಂಪನಿ ಶಾಶ್ವತ ಲಾಕೌಟ್ ಘೋಷಿಸಿದ್ದರ ಪರಿಣಾಮ ಗಾರ್ಮೆಂಟ್ಸ್ ಕಾರ್ಮಿಕರು ಕಾರ್ಖಾನೆಯ ಮುಖ್ಯದ್ವಾರದಲ್ಲಿ ಕೂತು ತಮ್ಮ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಏಕಾಏಕಿ ಕೆಲಸ ಕಳೆದುಕೊಂಡು ಏನು ಮಾಡಬೇಕೆಂದು ದಿಕ್ಕುತೋಚದೆ ಕಾರ್ಖಾನೆಯ ಹೊರಗೆ ಧರಣಿ ಆರಂಭಿಸಿದ್ದಾರೆ. 12-13 ವರ್ಷಗಳಿಂದ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಬೀದಿಗೆ ತಳ್ಳಿದೆ ಎಂದು ಕಾರ್ಖಾನೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನವೆಂಬರ್‌ 30 ರಂದು ಶುರುವಾದ ಪ್ರತಿಭಟನೆ ಇಂದಿಗೆ 17ನೇ ದಿನಕ್ಕೆ ಕಾಲಿಟ್ಟಿದೆ. ಘಟಕದ ಲಾಕೌಟ್‌ಗೆ ನಷ್ಟದ ಕಾರಣ ನೀಡಿ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುತ್ತಿರುವ ಕಾರ್ಖಾನೆ, ಸಂಸ್ಥೆ ಲಾಭದಾಯಕವಾಗಿದ್ದಾಗ ಕಾರ್ಮಿಕರಿಗೆ ಕನಿಷ್ಠ ಪರಿಹಾರವನ್ನು ಕೊಡದೇ ಇರುವುದು ಅಮಾನವೀಯ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

12-13 ವರ್ಷಗಳಿಂದ ದುಡಿಯುತ್ತಿದ್ದ ಕಾರ್ಮಿಕರು, ತಮಗೆ ಬೇರೆ ಘಟಕದಲ್ಲಿ ಕೆಲಸ ನೀಡಬೇಕೆಂದು ಇಲ್ಲವೇ ವಾರ್ಷಿಕ ಆರು ತಿಂಗಳ  ವೇತನದ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ಪ್ರತಿಭಟನಾ ಹೋರಾಟವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಕಾರ್ಖಾನೆ ಲಾಕೌಟ್ ಘೋಷಿಸಿದ ಆಡಳಿತ ಮಂಡಳಿ, ಅದೇ ಸಮಯದಲ್ಲಿ ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಕಾರ್ಖಾನೆಯ ಹೊಸ ಘಟಕ ಆರಂಭಿಸಿದೆ. ಅಲ್ಲಿಯಾದರೂ ಕೆಲಸ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆ ಕುರಿತು ಕಾರ್ಮಿಕ ಇಲಾಖೆಯಲ್ಲಿ ರಾಜೀ ಸಂಧಾನ ಸಭೆ ನಡೆಯುತ್ತಿದ್ದು, ಯಥಾಸ್ಥಿತಿ ಕಾಪಾಡುವಂತೆ ಕಾರ್ಮಿಕ ಇಲಾಖೆ ಸೂಚನೆಯನ್ನು ನೀಡಿದೆ. ಆದರೆ, ಆಡಳಿತ ಮಂಡಳಿ ಅದನ್ನು ಪಾಲಿಸದೇ ಈ ಘಟಕದಲ್ಲಿರುವ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿದೆ ಎನ್ನಲಾಗಿದೆ.

ಅರವಿಂದ್ ಕಾರ್ಖಾನೆಯ ಕಾರ್ಮಿಕರ ಹೋರಾಟಕ್ಕೆ ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್ (GATWU) ಕೈಜೋಡಿಸಿದೆ.

ಕಾರ್ಮಿಕ ಇಲಾಖೆಯ ಅಪರ ಕಾರ್ಮಿಕ ಆಯುಕ್ತರ ಬಳಿ ಪ್ರಕರಣ ದಾಖಲಾಗಿದ್ದು, ಡಿಸೆಂಬರ್‌ 4 ರಂದು ನಡೆದ  ಸಂಧಾನ ಸಭೆ ವಿಫಲವಾದ ಕಾರಣ ಕಾರ್ಮಿಕರು ಮುಷ್ಕರವನ್ನು ಮುಂದುವರಿಸಿದ್ದಾರೆ. ಜೊತೆಗೆ ಶೀಘ್ರವೇ ಪ್ರಕರಣವನ್ನು ಕಾರ್ಮಿಕ ಇಲಾಖೆ ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ‘ಬಿಜೆಪಿ’ ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...