Homeಮುಖಪುಟ'PM-CARES' ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಹಾಗೂ ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ, ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ “PM-CARES”‌(ಪಿಎಂ-ಕೇರ್ಸ್) ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ ಹಾಗೂ ಇದಕ್ಕೆ ಆರ್‌ಟಿಐ ಪರಿಶೀಲನೆಯಿಂದ ವಿನಾಯಿತಿ ನೀಡುತ್ತದೆ.

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಇದೀಗ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸುವುದಿಲ್ಲ.

ಟ್ರಸ್ಟ್‌ನ ದಾಖಲೆ ಪತ್ರದ ಅಂಶವಾದ 5.3 ರಲ್ಲಿ ಹೀಗೆ ಹೇಳುತ್ತದೆ:

“ಈ ಟ್ರಸ್ಟ್‌ ಸರ್ಕಾರದ ಮಾಲೀಕತ್ವಕ್ಕೆ ಒಳಪಟ್ಟಿಲ್ಲ ಅಥವಾ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆದಿಲ್ಲ ಅಥವಾ ಸರ್ಕಾರದ ಯಾವುದೇ ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟಿಲ್ಲ ಅಥವಾ ಒಳಪಡುವ ಉದ್ದೇಶವಿಲ್ಲ. ಟ್ರಸ್ಟ್‌ನ ಯಾವುದೆ ರೀತಿಯ ಕಾರ್ಯದಲ್ಲಿ, ನೇರವಾಗಿ ಅಥವಾ ಪರೋಕ್ಷವಾಗಿ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರಗಳ ನಿಯಂತ್ರಣವಿರುವುದಿಲ್ಲ.”

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಕೊರೊನಾ ವೈರಸ್ ಸಾಂಕ್ರಾಮಿಕದಂತಹ ತುರ್ತು ಅಥವಾ ತೊಂದರೆಯ ಸಂದರ್ಭಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು PM-CARES ಅನ್ನು ಮಾರ್ಚ್‌ನಲ್ಲಿ ಸ್ಥಾಪಿಸಲಾಗಿತ್ತು. ಇದಕ್ಕೆ ಪ್ರಧಾನಿ ಮೋದಿ ಅಧ್ಯಕ್ಷರಾಗಿ ಮತ್ತು ಹಿರಿಯ ಕ್ಯಾಬಿನೆಟ್ ಸದಸ್ಯರನ್ನು ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದೆ. ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR) ಉಪಕ್ರಮವಾಗಿ PM-CARES ‌ಗೆ ಅರ್ಹತೆ ಇರುವ ಜ್ಞಾಪಕ ಪತ್ರವನ್ನು ನೀಡಿತು.

ಕಾರ್ಪೊರೇಟ್ ದೇಣಿಗೆಗೆ ಅರ್ಹವಾದ ಚಟುವಟಿಕೆಗಳನ್ನು ವ್ಯಾಖ್ಯಾನಿಸುವ, ಕಂಪನಿಗಳ ಕಾಯ್ದೆ ಹೀಗಿದೆ:

“ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಗೆ ಅಥವಾ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಸ್ಥಾಪಿಸಿರುವ ಯಾವುದೇ ನಿಧಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ”

ಇದನ್ನೂ ಓದಿ: ಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ! 

ಸಾಮಾಜಿಕ ಕಾರ್ಯಕರ್ತ ಅಂಜಲಿ ಭರದ್ವಾಜ್ ಅವರಿಗೆ ಆರ್‌ಟಿಐ ಮೂಲಕ ಸಿಕ್ಕಿರುವ ಮಾಹಿತಿಯಂತೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಮಾರ್ಚ್ 28 ರ ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸುವಾಗ, ಟ್ರಸ್ಟ್‌‌ ಅನ್ನು “ಕೇಂದ್ರ ಸರ್ಕಾರ ಸ್ಥಾಪಿಸಿದ ನಿಧಿ” ಎಂದು ವ್ಯಾಖ್ಯಾನಿಸಿದೆ.

ಆದರೆ ನಿನ್ನೆ ಟ್ರಸ್ಟ್ ದಾಖಲೆ ಪತ್ರಗಳು ಇದು ಸರ್ಕಾರದಿಂದ ನಡೆಸಲ್ಪಡುವುದಿಲ್ಲ ಎಂದು ಹೇಳಿದೆ. ಆದ್ದರಿಂದ “ಕಂಪೆನಿ ಕಾಯ್ದೆ”ಯ ಪ್ರಕಾರ ಪಿಎಂ ಕೇರ್ಸ್ ಕಾರ್ಪೊರೇಟ್ ದೇಣಿಗೆಗೆ ಅರ್ಹರಾಗುವುದಿಲ್ಲ.

PM-CARES‌ ಟ್ರಸ್ಟ್‌ ಪ್ರಾರಂಭವಾಗಿ ಸುಮಾರು ಎರಡು ತಿಂಗಳ ನಂತರ (ಮೇ 26), ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ”ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ”ಗೆ ಹೆಚ್ಚುವರಿಯಾಗಿ ”PM-CARES” ನಿಧಿಯನ್ನು ಮಾರ್ಚ್ 28 ರಿಂದ ಅನ್ವಯವಾಗುವಂತೆ ಕಂಪೆನಿ ಕಾಯ್ದೆಗೆ ಸೇರಿಸಿತು. ಇದರರ್ಥ ಟ್ರಸ್ಟ್‌‌ ಪ್ರಾರಂಭದಿಂದಲೇ ಕಾರ್ಪೊರೇಟ್ ದೇಣಿಗೆ ಪಡೆಯುವ ಖಾಸಗಿ ಘಟಕವಾಗಿತ್ತು.

ಟ್ರಸ್ಟ್ ದಾಖಲೆ ಕೋರಿ ಎನ್‌ಡಿಟಿವಿ ಈ ಹಿಂದೆ ಪ್ರಧಾನ ಮಂತ್ರಿ ಕಚೇರಿಗೆ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿತ್ತು, ಆದರೆ ಈ ನಿಧಿ ಸರ್ಕಾರಿ ಟ್ರಸ್ಟ್‌ ಅಲ್ಲ ಎಂಬ ಕಾರಣಕ್ಕೆ ಮನವಿಯನ್ನು ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘದ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ನಾಶ ಪಡಿಸಿ ಖಾಸಗಿ ಸಂಸ್ಥೆಗಳಿಗೆ ನೀಡುತ್ತಾ ಬಂದಿರುವ ಕೇಂದ್ರ ಸರ್ಕಾರ, ತನಗೆ ಶಕ್ತಿಯಿಲ್ಲ, ತಾನೊಂದು ಕೈಲಾಗದ ಸರ್ಕಾರ ಎಂದು ದಿನೇ ದಿನೇ ನಿರೂಪಿಸುತ್ತಾ ಇದೆ. PM-CARES ಸಾರ್ವಜನಿಕ ಸಂಸ್ಥೆಯಲ್ಲ ಎಂದು ಈ ಹಿಂದೆಯೆ ಹೇಳಿತ್ತು. ಕೊರೊನಾ ಸಂಕಷ್ಟದ ಕಾಲದಲ್ಲಿ ಪ್ರತಿಯೊಬ್ಬ ಭಾರತೀಯನೂ ಪಕ್ಷ ಬೇದವನ್ನು ಮರೆತು, ಸಂವಿಧಾನದ ಪೀಠಿಕೆಯಾದ ದೇಶದ ಐಕ್ಯತೆ ಮತ್ತು ಒಗ್ಗಟ್ಟನ್ನು ಎತ್ತಿ ಹಿಡಿದು ಅಲ್ಲಿ ಹಣವನ್ನು ಜಮೆ ಮಾಡಿದರು. ಆದರೆ ಜನರ ಇಂತಹ ನಂಬಿಕೆಗೆ ಪ್ರಧಾನ ಮಂತ್ರಿ ಮೋಸ ಮಾಡಿದ್ದಾರೆ” ಎಂದು ಹೇಳಿದರು.

ಸರೋವರ್‌ ಬೆಂಕಿಕೆರೆ

“ಪ್ರಧಾನ ಮಂತ್ರಿ ಭಾರತೀಯ ಜನರಿಗೆ ಉತ್ತರದಾಯಿಯಾಗಿರಬೇಕು, ಪ್ರಸ್ತುತ ಪಾದರ್ಶಕತೆಯಿಲ್ಲದ ಈ ಪ್ರಧಾನಿ ಜನರ ಹಣವನ್ನು ದುರ್ಬಳಕೆ ಮಾಡಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದಲ್ಲಿ ಕೇವಲ PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಮತ್ತು ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ. ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, “ಚೀನಾ, ಪಾಕಿಸ್ತಾನ ಮತ್ತು ಕತಾರ್‌ನಿಂದ PM Cares ನಿಧಿವರೆಗೆ “ವಿದೇಶಿ ದೇಣಿಗೆ” ಗಳ ಕುತೂಹಲಕಾರಿ ಪ್ರಕರಣ” ಎಂಬ ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನ ಮಂತ್ರಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳಲ್ಲಿ “ಭಾರತೀಯ ರಾಯಭಾರ ಕಚೇರಿಗಳು ಪಿಎಂ ಕೇರ್ಸ್ ಫಂಡ್‌ಗೆ ಪ್ರಚಾರವನ್ನು ಏಕೆ ನೀಡಿವೆ?, ನಿಷೇಧಿತ ಚೀನೀ ಅಪ್ಲಿಕೇಶನ್‌ಗಳಲ್ಲಿ ನಿಧಿಯನ್ನು ಏಕೆ ಪ್ರಚಾರ ಮಾಡಲಾಯಿತು? ಪಾಕಿಸ್ತಾನದಿಂದ ಎಷ್ಟು ಹಣವನ್ನು ಸ್ವೀಕರಿಸಲಾಗಿದೆ ಮತ್ತು ಯಾರು ದೇಣಿಗೆ ನೀಡಿದರು? ಕತಾರ್‌ನ ಎರಡು ಕಂಪನಿಗಳು ಯಾವುವು ನಿಧಿಗೆ ದೇಣಿಗೆ ನೀಡುತ್ತವೆ ಮತ್ತು ಎಷ್ಟು ಕೋಟಿಗಳನ್ನು ಸ್ವೀಕರಿಸಲಾಗಿದೆ? ನಿಧಿಯು ಯಾಕೆ ‘ಸಾರ್ವಜನಿಕ ಪ್ರಾಧಿಕಾರ’ ಅಲ್ಲ?” ಎಂಬ ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...