Homeಮುಖಪುಟ'PM-CARES' ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಹಾಗೂ ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ, ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ “PM-CARES”‌(ಪಿಎಂ-ಕೇರ್ಸ್) ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ ಹಾಗೂ ಇದಕ್ಕೆ ಆರ್‌ಟಿಐ ಪರಿಶೀಲನೆಯಿಂದ ವಿನಾಯಿತಿ ನೀಡುತ್ತದೆ.

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಇದೀಗ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸುವುದಿಲ್ಲ.

ಟ್ರಸ್ಟ್‌ನ ದಾಖಲೆ ಪತ್ರದ ಅಂಶವಾದ 5.3 ರಲ್ಲಿ ಹೀಗೆ ಹೇಳುತ್ತದೆ:

“ಈ ಟ್ರಸ್ಟ್‌ ಸರ್ಕಾರದ ಮಾಲೀಕತ್ವಕ್ಕೆ ಒಳಪಟ್ಟಿಲ್ಲ ಅಥವಾ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆದಿಲ್ಲ ಅಥವಾ ಸರ್ಕಾರದ ಯಾವುದೇ ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟಿಲ್ಲ ಅಥವಾ ಒಳಪಡುವ ಉದ್ದೇಶವಿಲ್ಲ. ಟ್ರಸ್ಟ್‌ನ ಯಾವುದೆ ರೀತಿಯ ಕಾರ್ಯದಲ್ಲಿ, ನೇರವಾಗಿ ಅಥವಾ ಪರೋಕ್ಷವಾಗಿ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರಗಳ ನಿಯಂತ್ರಣವಿರುವುದಿಲ್ಲ.”

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಕೊರೊನಾ ವೈರಸ್ ಸಾಂಕ್ರಾಮಿಕದಂತಹ ತುರ್ತು ಅಥವಾ ತೊಂದರೆಯ ಸಂದರ್ಭಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು PM-CARES ಅನ್ನು ಮಾರ್ಚ್‌ನಲ್ಲಿ ಸ್ಥಾಪಿಸಲಾಗಿತ್ತು. ಇದಕ್ಕೆ ಪ್ರಧಾನಿ ಮೋದಿ ಅಧ್ಯಕ್ಷರಾಗಿ ಮತ್ತು ಹಿರಿಯ ಕ್ಯಾಬಿನೆಟ್ ಸದಸ್ಯರನ್ನು ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದೆ. ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR) ಉಪಕ್ರಮವಾಗಿ PM-CARES ‌ಗೆ ಅರ್ಹತೆ ಇರುವ ಜ್ಞಾಪಕ ಪತ್ರವನ್ನು ನೀಡಿತು.

ಕಾರ್ಪೊರೇಟ್ ದೇಣಿಗೆಗೆ ಅರ್ಹವಾದ ಚಟುವಟಿಕೆಗಳನ್ನು ವ್ಯಾಖ್ಯಾನಿಸುವ, ಕಂಪನಿಗಳ ಕಾಯ್ದೆ ಹೀಗಿದೆ:

“ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಗೆ ಅಥವಾ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಸ್ಥಾಪಿಸಿರುವ ಯಾವುದೇ ನಿಧಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ”

ಇದನ್ನೂ ಓದಿ: ಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ! 

ಸಾಮಾಜಿಕ ಕಾರ್ಯಕರ್ತ ಅಂಜಲಿ ಭರದ್ವಾಜ್ ಅವರಿಗೆ ಆರ್‌ಟಿಐ ಮೂಲಕ ಸಿಕ್ಕಿರುವ ಮಾಹಿತಿಯಂತೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಮಾರ್ಚ್ 28 ರ ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸುವಾಗ, ಟ್ರಸ್ಟ್‌‌ ಅನ್ನು “ಕೇಂದ್ರ ಸರ್ಕಾರ ಸ್ಥಾಪಿಸಿದ ನಿಧಿ” ಎಂದು ವ್ಯಾಖ್ಯಾನಿಸಿದೆ.

ಆದರೆ ನಿನ್ನೆ ಟ್ರಸ್ಟ್ ದಾಖಲೆ ಪತ್ರಗಳು ಇದು ಸರ್ಕಾರದಿಂದ ನಡೆಸಲ್ಪಡುವುದಿಲ್ಲ ಎಂದು ಹೇಳಿದೆ. ಆದ್ದರಿಂದ “ಕಂಪೆನಿ ಕಾಯ್ದೆ”ಯ ಪ್ರಕಾರ ಪಿಎಂ ಕೇರ್ಸ್ ಕಾರ್ಪೊರೇಟ್ ದೇಣಿಗೆಗೆ ಅರ್ಹರಾಗುವುದಿಲ್ಲ.

PM-CARES‌ ಟ್ರಸ್ಟ್‌ ಪ್ರಾರಂಭವಾಗಿ ಸುಮಾರು ಎರಡು ತಿಂಗಳ ನಂತರ (ಮೇ 26), ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ”ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ”ಗೆ ಹೆಚ್ಚುವರಿಯಾಗಿ ”PM-CARES” ನಿಧಿಯನ್ನು ಮಾರ್ಚ್ 28 ರಿಂದ ಅನ್ವಯವಾಗುವಂತೆ ಕಂಪೆನಿ ಕಾಯ್ದೆಗೆ ಸೇರಿಸಿತು. ಇದರರ್ಥ ಟ್ರಸ್ಟ್‌‌ ಪ್ರಾರಂಭದಿಂದಲೇ ಕಾರ್ಪೊರೇಟ್ ದೇಣಿಗೆ ಪಡೆಯುವ ಖಾಸಗಿ ಘಟಕವಾಗಿತ್ತು.

ಟ್ರಸ್ಟ್ ದಾಖಲೆ ಕೋರಿ ಎನ್‌ಡಿಟಿವಿ ಈ ಹಿಂದೆ ಪ್ರಧಾನ ಮಂತ್ರಿ ಕಚೇರಿಗೆ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿತ್ತು, ಆದರೆ ಈ ನಿಧಿ ಸರ್ಕಾರಿ ಟ್ರಸ್ಟ್‌ ಅಲ್ಲ ಎಂಬ ಕಾರಣಕ್ಕೆ ಮನವಿಯನ್ನು ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘದ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ನಾಶ ಪಡಿಸಿ ಖಾಸಗಿ ಸಂಸ್ಥೆಗಳಿಗೆ ನೀಡುತ್ತಾ ಬಂದಿರುವ ಕೇಂದ್ರ ಸರ್ಕಾರ, ತನಗೆ ಶಕ್ತಿಯಿಲ್ಲ, ತಾನೊಂದು ಕೈಲಾಗದ ಸರ್ಕಾರ ಎಂದು ದಿನೇ ದಿನೇ ನಿರೂಪಿಸುತ್ತಾ ಇದೆ. PM-CARES ಸಾರ್ವಜನಿಕ ಸಂಸ್ಥೆಯಲ್ಲ ಎಂದು ಈ ಹಿಂದೆಯೆ ಹೇಳಿತ್ತು. ಕೊರೊನಾ ಸಂಕಷ್ಟದ ಕಾಲದಲ್ಲಿ ಪ್ರತಿಯೊಬ್ಬ ಭಾರತೀಯನೂ ಪಕ್ಷ ಬೇದವನ್ನು ಮರೆತು, ಸಂವಿಧಾನದ ಪೀಠಿಕೆಯಾದ ದೇಶದ ಐಕ್ಯತೆ ಮತ್ತು ಒಗ್ಗಟ್ಟನ್ನು ಎತ್ತಿ ಹಿಡಿದು ಅಲ್ಲಿ ಹಣವನ್ನು ಜಮೆ ಮಾಡಿದರು. ಆದರೆ ಜನರ ಇಂತಹ ನಂಬಿಕೆಗೆ ಪ್ರಧಾನ ಮಂತ್ರಿ ಮೋಸ ಮಾಡಿದ್ದಾರೆ” ಎಂದು ಹೇಳಿದರು.

ಸರೋವರ್‌ ಬೆಂಕಿಕೆರೆ

“ಪ್ರಧಾನ ಮಂತ್ರಿ ಭಾರತೀಯ ಜನರಿಗೆ ಉತ್ತರದಾಯಿಯಾಗಿರಬೇಕು, ಪ್ರಸ್ತುತ ಪಾದರ್ಶಕತೆಯಿಲ್ಲದ ಈ ಪ್ರಧಾನಿ ಜನರ ಹಣವನ್ನು ದುರ್ಬಳಕೆ ಮಾಡಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದಲ್ಲಿ ಕೇವಲ PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಮತ್ತು ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ. ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, “ಚೀನಾ, ಪಾಕಿಸ್ತಾನ ಮತ್ತು ಕತಾರ್‌ನಿಂದ PM Cares ನಿಧಿವರೆಗೆ “ವಿದೇಶಿ ದೇಣಿಗೆ” ಗಳ ಕುತೂಹಲಕಾರಿ ಪ್ರಕರಣ” ಎಂಬ ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನ ಮಂತ್ರಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳಲ್ಲಿ “ಭಾರತೀಯ ರಾಯಭಾರ ಕಚೇರಿಗಳು ಪಿಎಂ ಕೇರ್ಸ್ ಫಂಡ್‌ಗೆ ಪ್ರಚಾರವನ್ನು ಏಕೆ ನೀಡಿವೆ?, ನಿಷೇಧಿತ ಚೀನೀ ಅಪ್ಲಿಕೇಶನ್‌ಗಳಲ್ಲಿ ನಿಧಿಯನ್ನು ಏಕೆ ಪ್ರಚಾರ ಮಾಡಲಾಯಿತು? ಪಾಕಿಸ್ತಾನದಿಂದ ಎಷ್ಟು ಹಣವನ್ನು ಸ್ವೀಕರಿಸಲಾಗಿದೆ ಮತ್ತು ಯಾರು ದೇಣಿಗೆ ನೀಡಿದರು? ಕತಾರ್‌ನ ಎರಡು ಕಂಪನಿಗಳು ಯಾವುವು ನಿಧಿಗೆ ದೇಣಿಗೆ ನೀಡುತ್ತವೆ ಮತ್ತು ಎಷ್ಟು ಕೋಟಿಗಳನ್ನು ಸ್ವೀಕರಿಸಲಾಗಿದೆ? ನಿಧಿಯು ಯಾಕೆ ‘ಸಾರ್ವಜನಿಕ ಪ್ರಾಧಿಕಾರ’ ಅಲ್ಲ?” ಎಂಬ ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...