Homeಮುಖಪುಟ'PM-CARES' ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಹಾಗೂ ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ, ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ “PM-CARES”‌(ಪಿಎಂ-ಕೇರ್ಸ್) ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ ಹಾಗೂ ಇದಕ್ಕೆ ಆರ್‌ಟಿಐ ಪರಿಶೀಲನೆಯಿಂದ ವಿನಾಯಿತಿ ನೀಡುತ್ತದೆ.

ಪ್ರಧಾನಮಂತ್ರಿ ಅಧ್ಯಕ್ಷರಾಗಿರುವ PM-CARES ಟ್ರಸ್ಟ್‌ನ ನಿಧಿಯನ್ನು ದೆಹಲಿಯ ಕಂದಾಯ ಇಲಾಖೆಯಲ್ಲಿ ನೋಂದಾಯಿಸಲಾಗಿದೆ. ಆದರೆ ಇದೀಗ ಸಾರ್ವಜನಿಕಗೊಂಡಿರುವ ಟ್ರಸ್ಟ್‌ನ ದಾಖಲೆ ಪತ್ರವು ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸುವುದಿಲ್ಲ.

ಟ್ರಸ್ಟ್‌ನ ದಾಖಲೆ ಪತ್ರದ ಅಂಶವಾದ 5.3 ರಲ್ಲಿ ಹೀಗೆ ಹೇಳುತ್ತದೆ:

“ಈ ಟ್ರಸ್ಟ್‌ ಸರ್ಕಾರದ ಮಾಲೀಕತ್ವಕ್ಕೆ ಒಳಪಟ್ಟಿಲ್ಲ ಅಥವಾ ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆದಿಲ್ಲ ಅಥವಾ ಸರ್ಕಾರದ ಯಾವುದೇ ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟಿಲ್ಲ ಅಥವಾ ಒಳಪಡುವ ಉದ್ದೇಶವಿಲ್ಲ. ಟ್ರಸ್ಟ್‌ನ ಯಾವುದೆ ರೀತಿಯ ಕಾರ್ಯದಲ್ಲಿ, ನೇರವಾಗಿ ಅಥವಾ ಪರೋಕ್ಷವಾಗಿ ಕೇಂದ್ರ ಸರ್ಕಾರ ಅಥವಾ ಯಾವುದೇ ರಾಜ್ಯ ಸರ್ಕಾರಗಳ ನಿಯಂತ್ರಣವಿರುವುದಿಲ್ಲ.”

ಇದನ್ನೂ ಓದಿ: ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಕೊರೊನಾ ವೈರಸ್ ಸಾಂಕ್ರಾಮಿಕದಂತಹ ತುರ್ತು ಅಥವಾ ತೊಂದರೆಯ ಸಂದರ್ಭಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು PM-CARES ಅನ್ನು ಮಾರ್ಚ್‌ನಲ್ಲಿ ಸ್ಥಾಪಿಸಲಾಗಿತ್ತು. ಇದಕ್ಕೆ ಪ್ರಧಾನಿ ಮೋದಿ ಅಧ್ಯಕ್ಷರಾಗಿ ಮತ್ತು ಹಿರಿಯ ಕ್ಯಾಬಿನೆಟ್ ಸದಸ್ಯರನ್ನು ಟ್ರಸ್ಟಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ.

ಮಾರ್ಚ್ 27 ರಂದು ಈ ಟ್ರಸ್ಟ್ ನೋಂದಾಯಿಸಲಾಗಿದೆ. ಮಾರ್ಚ್ 28 ರಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಕಾರ್ಪೊರೇಟ್ ದೇಣಿಗೆ ಸ್ವೀಕರಿಸಲು ”ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ” (CSR) ಉಪಕ್ರಮವಾಗಿ PM-CARES ‌ಗೆ ಅರ್ಹತೆ ಇರುವ ಜ್ಞಾಪಕ ಪತ್ರವನ್ನು ನೀಡಿತು.

ಕಾರ್ಪೊರೇಟ್ ದೇಣಿಗೆಗೆ ಅರ್ಹವಾದ ಚಟುವಟಿಕೆಗಳನ್ನು ವ್ಯಾಖ್ಯಾನಿಸುವ, ಕಂಪನಿಗಳ ಕಾಯ್ದೆ ಹೀಗಿದೆ:

“ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಗೆ ಅಥವಾ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಸ್ಥಾಪಿಸಿರುವ ಯಾವುದೇ ನಿಧಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ”

ಇದನ್ನೂ ಓದಿ: ಸಂಸದೀಯ ಸಮಿತಿಯಿಂದ ಪಿಎಂ ಕೇರ್ಸ್‌ ಪರಾಮರ್ಶೆಗೆ ಬಿಜೆಪಿ ವಿರೋಧ! 

ಸಾಮಾಜಿಕ ಕಾರ್ಯಕರ್ತ ಅಂಜಲಿ ಭರದ್ವಾಜ್ ಅವರಿಗೆ ಆರ್‌ಟಿಐ ಮೂಲಕ ಸಿಕ್ಕಿರುವ ಮಾಹಿತಿಯಂತೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಮಾರ್ಚ್ 28 ರ ಕಚೇರಿ ಜ್ಞಾಪಕ ಪತ್ರವನ್ನು ಹೊರಡಿಸುವಾಗ, ಟ್ರಸ್ಟ್‌‌ ಅನ್ನು “ಕೇಂದ್ರ ಸರ್ಕಾರ ಸ್ಥಾಪಿಸಿದ ನಿಧಿ” ಎಂದು ವ್ಯಾಖ್ಯಾನಿಸಿದೆ.

ಆದರೆ ನಿನ್ನೆ ಟ್ರಸ್ಟ್ ದಾಖಲೆ ಪತ್ರಗಳು ಇದು ಸರ್ಕಾರದಿಂದ ನಡೆಸಲ್ಪಡುವುದಿಲ್ಲ ಎಂದು ಹೇಳಿದೆ. ಆದ್ದರಿಂದ “ಕಂಪೆನಿ ಕಾಯ್ದೆ”ಯ ಪ್ರಕಾರ ಪಿಎಂ ಕೇರ್ಸ್ ಕಾರ್ಪೊರೇಟ್ ದೇಣಿಗೆಗೆ ಅರ್ಹರಾಗುವುದಿಲ್ಲ.

PM-CARES‌ ಟ್ರಸ್ಟ್‌ ಪ್ರಾರಂಭವಾಗಿ ಸುಮಾರು ಎರಡು ತಿಂಗಳ ನಂತರ (ಮೇ 26), ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ”ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ”ಗೆ ಹೆಚ್ಚುವರಿಯಾಗಿ ”PM-CARES” ನಿಧಿಯನ್ನು ಮಾರ್ಚ್ 28 ರಿಂದ ಅನ್ವಯವಾಗುವಂತೆ ಕಂಪೆನಿ ಕಾಯ್ದೆಗೆ ಸೇರಿಸಿತು. ಇದರರ್ಥ ಟ್ರಸ್ಟ್‌‌ ಪ್ರಾರಂಭದಿಂದಲೇ ಕಾರ್ಪೊರೇಟ್ ದೇಣಿಗೆ ಪಡೆಯುವ ಖಾಸಗಿ ಘಟಕವಾಗಿತ್ತು.

ಟ್ರಸ್ಟ್ ದಾಖಲೆ ಕೋರಿ ಎನ್‌ಡಿಟಿವಿ ಈ ಹಿಂದೆ ಪ್ರಧಾನ ಮಂತ್ರಿ ಕಚೇರಿಗೆ ಆರ್‌ಟಿಐ ಅರ್ಜಿಯನ್ನು ಸಲ್ಲಿಸಿತ್ತು, ಆದರೆ ಈ ನಿಧಿ ಸರ್ಕಾರಿ ಟ್ರಸ್ಟ್‌ ಅಲ್ಲ ಎಂಬ ಕಾರಣಕ್ಕೆ ಮನವಿಯನ್ನು ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘದ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ನಾಶ ಪಡಿಸಿ ಖಾಸಗಿ ಸಂಸ್ಥೆಗಳಿಗೆ ನೀಡುತ್ತಾ ಬಂದಿರುವ ಕೇಂದ್ರ ಸರ್ಕಾರ, ತನಗೆ ಶಕ್ತಿಯಿಲ್ಲ, ತಾನೊಂದು ಕೈಲಾಗದ ಸರ್ಕಾರ ಎಂದು ದಿನೇ ದಿನೇ ನಿರೂಪಿಸುತ್ತಾ ಇದೆ. PM-CARES ಸಾರ್ವಜನಿಕ ಸಂಸ್ಥೆಯಲ್ಲ ಎಂದು ಈ ಹಿಂದೆಯೆ ಹೇಳಿತ್ತು. ಕೊರೊನಾ ಸಂಕಷ್ಟದ ಕಾಲದಲ್ಲಿ ಪ್ರತಿಯೊಬ್ಬ ಭಾರತೀಯನೂ ಪಕ್ಷ ಬೇದವನ್ನು ಮರೆತು, ಸಂವಿಧಾನದ ಪೀಠಿಕೆಯಾದ ದೇಶದ ಐಕ್ಯತೆ ಮತ್ತು ಒಗ್ಗಟ್ಟನ್ನು ಎತ್ತಿ ಹಿಡಿದು ಅಲ್ಲಿ ಹಣವನ್ನು ಜಮೆ ಮಾಡಿದರು. ಆದರೆ ಜನರ ಇಂತಹ ನಂಬಿಕೆಗೆ ಪ್ರಧಾನ ಮಂತ್ರಿ ಮೋಸ ಮಾಡಿದ್ದಾರೆ” ಎಂದು ಹೇಳಿದರು.

ಸರೋವರ್‌ ಬೆಂಕಿಕೆರೆ

“ಪ್ರಧಾನ ಮಂತ್ರಿ ಭಾರತೀಯ ಜನರಿಗೆ ಉತ್ತರದಾಯಿಯಾಗಿರಬೇಕು, ಪ್ರಸ್ತುತ ಪಾದರ್ಶಕತೆಯಿಲ್ಲದ ಈ ಪ್ರಧಾನಿ ಜನರ ಹಣವನ್ನು ದುರ್ಬಳಕೆ ಮಾಡಿರುವುದು ಸ್ಪಷ್ಟವಾಗಿದೆ. ಈ ಪ್ರಕರಣದಲ್ಲಿ ಕೇವಲ PM-CARES ಮಾತ್ರ ದುರ್ಬಳಕೆ ಆಗಿರುವುದಲ್ಲ, ದೇಶದ ಘನತೆ ಮತ್ತು ಪ್ರಧಾನ ಮಂತ್ರಿ ಹುದ್ದೆ ಕೂಡಾ ದುರ್ಬಳಕೆ ಆಗಿದೆ. ಒಟ್ಟಿನಲ್ಲಿ ದೇಶದವನ್ನೇ ದುರ್ಬಳಕೆ ಮಾಡಿಕೊಂಡರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, “ಚೀನಾ, ಪಾಕಿಸ್ತಾನ ಮತ್ತು ಕತಾರ್‌ನಿಂದ PM Cares ನಿಧಿವರೆಗೆ “ವಿದೇಶಿ ದೇಣಿಗೆ” ಗಳ ಕುತೂಹಲಕಾರಿ ಪ್ರಕರಣ” ಎಂಬ ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನ ಮಂತ್ರಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳಲ್ಲಿ “ಭಾರತೀಯ ರಾಯಭಾರ ಕಚೇರಿಗಳು ಪಿಎಂ ಕೇರ್ಸ್ ಫಂಡ್‌ಗೆ ಪ್ರಚಾರವನ್ನು ಏಕೆ ನೀಡಿವೆ?, ನಿಷೇಧಿತ ಚೀನೀ ಅಪ್ಲಿಕೇಶನ್‌ಗಳಲ್ಲಿ ನಿಧಿಯನ್ನು ಏಕೆ ಪ್ರಚಾರ ಮಾಡಲಾಯಿತು? ಪಾಕಿಸ್ತಾನದಿಂದ ಎಷ್ಟು ಹಣವನ್ನು ಸ್ವೀಕರಿಸಲಾಗಿದೆ ಮತ್ತು ಯಾರು ದೇಣಿಗೆ ನೀಡಿದರು? ಕತಾರ್‌ನ ಎರಡು ಕಂಪನಿಗಳು ಯಾವುವು ನಿಧಿಗೆ ದೇಣಿಗೆ ನೀಡುತ್ತವೆ ಮತ್ತು ಎಷ್ಟು ಕೋಟಿಗಳನ್ನು ಸ್ವೀಕರಿಸಲಾಗಿದೆ? ನಿಧಿಯು ಯಾಕೆ ‘ಸಾರ್ವಜನಿಕ ಪ್ರಾಧಿಕಾರ’ ಅಲ್ಲ?” ಎಂಬ ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್‌, ಕಾರ್ಪೋರೇಟ್‌ ಜವಾಬ್ದಾರಿಯ CSR ಮತ್ತು ಖಾಸಗಿ ಲಾಬಿ: ನಾವು ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...