Homeಅಂಕಣಗಳುರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಈ ಆಂದೋಲನದ ಆಳ ಅವಿವೇಕಿಗಳಿಗೆ ತಿಳಿದಂತಿಲ್ಲ. ಪಂಜಾಬಿನ ಇಡೀ ಸಾಮಾಜಿಕ-ರಾಜಕೀಯ-ಸಾಹಿತ್ಯ-ಸಾಂಸ್ಕೃತಿಕ-ವೈಚಾರಿಕ ಬದುಕು ಈ ಪ್ರತಿಭಟನೆಗೆ ಧುಮುಕಿದೆ. ಹಳ್ಳಿ ಹಳ್ಳಿಗಳ ಮನೆ ಮನೆಗಳಲ್ಲಿ ಈ ಆಂದೋಲನದ ಬೇರುಗಳಿವೆ.

- Advertisement -
- Advertisement -

ಸುಮಾರು ಎರಡು ಲಕ್ಷ ಮಂದಿ ಪಾಲ್ಗೊಂಡಿರುವ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆ ಐತಿಹಾಸಿಕ ಸ್ವರೂಪದ್ದು. ಪಕ್ಷ ರಾಜಕಾರಣವನ್ನು ದೂರವಿಟ್ಟು ನಡೆಯುತ್ತಿರುವ ಅನನ್ಯ ಶಾಂತಿಯುತ ಆಂದೋಲನ. ವಿಶ್ವವೇ ಗಮನಿಸುತ್ತಿರುವ ವಿದ್ಯಮಾನ.

ಈ ಆಂದೋಲನದ ಆಳ ಅವಿವೇಕಿಗಳಿಗೆ ತಿಳಿದಂತಿಲ್ಲ. ಪಂಜಾಬಿನ ಇಡೀ ಸಾಮಾಜಿಕ-ರಾಜಕೀಯ-ಸಾಹಿತ್ಯ-ಸಾಂಸ್ಕೃತಿಕ-ವೈಚಾರಿಕ ಬದುಕು ಈ ಪ್ರತಿಭಟನೆಗೆ ಧುಮುಕಿದೆ. ಹಳ್ಳಿ ಹಳ್ಳಿಗಳ ಮನೆ ಮನೆಗಳಲ್ಲಿ ಈ ಆಂದೋಲನದ ಬೇರುಗಳಿವೆ. ದೆಹಲಿಯ ಗಡಿಗಳತ್ತ ಸಾಗುವ ಮುನ್ನ ಐವತ್ತೈದು ದಿನಗಳ ಕಾಲ ಕಿಚ್ಚಿನಂತೆ ವ್ಯಾಪಿಸಿದ್ದ ಪ್ರತಿಭಟನೆಯಿದು. ಹಳ್ಳಿ ಹಳ್ಳಿಗಳು ಆಹಾರ ಧಾನ್ಯ, ತರಕಾರಿ, ಹಾಲು, ಹಣ್ಣು, ಹಣವನ್ನು ಸಂಗ್ರಹಿಸಿ ದೆಹಲಿ ಗಡಿಯ ಪ್ರತಿಭಟನೆಗೆ ರವಾನಿಸುತ್ತಿದೆ. ಖಾಸಗಿ ಬಸ್ಸುಗಳು ಕ್ವಿಂಟಾಲ್‌ಗಟ್ಟಲೆ ದಿನಸಿಗಳು ಹಾಲು ಹೈನನ್ನು ಉಚಿತವಾಗಿ ಸಾಗಿಸುತ್ತಿವೆ. ಪಂಜಾಬಿನ ಮದುವೆಗಳಲ್ಲಿ ಉಡುಗೊರೆಗಳ ಬದಲಿಗೆ ವಂತಿಗೆ ಸಂಗ್ರಹಿಸಿ ಕಳಿಸಲಾಗುತ್ತಿದೆ. ಈ ಸತ್ಯಾಗ್ರಹದ ಬೇರುಗಳ ಜನಪದದಲ್ಲಿವೆ. ಅವುಗಳನ್ನು ಕತ್ತರಿಸುವುದು ಸುಲಭವಲ್ಲ. ಸಿಡಿದೆದ್ದಿರುವ ಈ ಭುಗಿಲನ್ನು ಸದ್ಯಕ್ಕಾದರೂ ಶಾಂತಗೊಳಿಸುವ ಏಕೈಕ ಸುಲಭದ ದಾರಿಯೆಂದರೆ ರೈತರ ಬೇಡಿಕೆಗಳನ್ನು ಒಪ್ಪುವುದು.

ಬ್ಲಾಕ್
PC: PTI

ದೆಹಲಿ-ಹರಿಯಾಣದ ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರು ಮೊನ್ನೆ ಬಹಾದೂರ್‌ಗಢ ಬೈಪಾಸ್ ಹೆದ್ದಾರಿಯುದ್ದದ ವಿಭಜಕದಲ್ಲಿ (ಡಿವೈಡರ್) ಉಳುಮೆ ಮಾಡತೊಡಗಿದರು. ತಮ್ಮ ಅಡುಗೆಗೆ ನಿತ್ಯ ಬೇಕಿರುವ ತರಕಾರಿಗಳು ಮತ್ತು ಸೊಪ್ಪು ಬೆಳೆಯುವುದು ಅವರ ವಿನೂತನ ಪ್ರತಿಭಟನೆಯ ಪರಿ.

ರಾಜಸ್ತಾನ, ಹರಿಯಾಣ, ಪಶ್ಚಿಮೀ ಉತ್ತರಪ್ರದೇಶ, ಮಹಾರಾಷ್ಟ್ರ ಮಾತ್ರವಲ್ಲದೆ ದಕ್ಷಿಣ ರಾಜ್ಯಗಳ ರೈತರೂ ಈ ಪ್ರತಿಭಟನೆಯನ್ನು ಕೂಡಿಕೊಳ್ಳತೊಡಗಿದ್ದಾರೆ. ಮುಂಬರುವ ದಿನಗಳು ಉಬ್ಬರವನ್ನು ಕಾಣುವುವೇ ವಿನಾ ಇಳಿತವನ್ನಲ್ಲ. ಅರ್ಥಾತ್ ’ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು’.

ಕೇಂದ್ರ ಸರ್ಕಾರ ಮಾತ್ರವಲ್ಲದೆ, ಅಂಬಾನಿ-ಅದಾನಿಯಂತಹ ಭಾರಿ ಲಾಭಬಡುಕ ಕಾರ್ಪೊರೇಟ್‌ಗಳು ಹಾಗೂ ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟುಗಳ ತುತ್ತೂರಿಗಳಾಗಿರುವ ಸಮೂಹ ಮಾಧ್ಯಮಗಳನ್ನು ಈ ಆಂದೋಲನ ಕಟಕಟೆಯಲ್ಲಿ ನಿಲ್ಲಿಸಿದೆ. ರಾಜ್ಯ ಸರ್ಕಾರಗಳು ಮತ್ತು ರೈತ ಸಮುದಾಯಗಳೊಂದಿಗೆ ಸಮಾಲೋಚನೆಯನ್ನೇ ನಡೆಸದೆ ಏಕಪಕ್ಷೀಯವಾಗಿ ಕೃಷಿ ಕಾಯಿದೆಗಳನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರ, ಒಕ್ಕೂಟ ಗಣತಂತ್ರದ ತಿರುಳು ಮತ್ತು ಸತ್ವವನ್ನೇ ಗಾಳಿಗೆ ತೂರಿರುವ ನಡೆಯನ್ನು ಪ್ರಶ್ನಿಸಿರುವ ಚಳವಳಿಯಿದು.

ಜೈ ಜವಾನ್-ಜೈ ಕಿಸಾನ್ ಎಂಬುದು ಭಕ್ತಗಣ ಮತ್ತು ಆಳುವವರ ಪರ ನಿಂತಿರುವ ಜನವಿರೋಧಿ ತಮಟೆ-ತುತ್ತೂರಿ ಮೀಡಿಯಾ ಇತ್ತೀಚಿನವರೆಗೆ ಜಪಿಸುತ್ತಿದ್ದ ಮಂತ್ರ. ಆದರೆ ಕುರುಡುಭಕ್ತಿಗೆ ಇತಿಮಿತಿಗಳು ಹದ್ದುಬಸ್ತುಗಳು ಉಂಟೇನು? ತಮ್ಮ ಚಂಡಪ್ರಚಂಡ ನಾಯಕನಿಗೆ ಎದುರಾಗಿ ನಿಂತರೆಂದು ರೈತರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗಿದೆ. ಖಾಲಿಸ್ತಾನಿಗಳೆಂದು ಸಾರಲಾಗಿದೆ. ದೇಶ ರಕ್ಷಣೆಗೆ ಒರೆಯಿಂದ ಹಿರಿದ ಖಡ್ಗವೆಂದೇ ಪಂಜಾಬನ್ನು ಬಣ್ಣಿಸುವುದುಂಟು. ಅದಕ್ಕೆ ಐತಿಹಾಸಿಕ ಕಾರಣಗಳಿವೆ. ಸೇನೆಯಿಂದ ನಿವೃತ್ತಿಯ ನಂತರ ರೈತಾಪಿಗಳಾಗಿರುವ ಸಾವಿರಾರು ಮಾಜಿ ಯೋಧರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

PC : Singhstation

ಖಾಲಿಸ್ತಾನಿಗಳ ವಿರುದ್ಧ ಹೋರಾಡಿ ಹುತಾತ್ಮರಾದ ದೇಶಪ್ರೇಮಿಗಳ ರೈತ ಕೂಲಿ ಸಂಘಟನೆ ಇದೆ. ಅದರ ಹೆಸರು ಕೀರ್ತಿ ಕಿಸಾನ್ ಯೂನಿಯನ್. ಖಾಲಿಸ್ತಾನಿಗಳ ಭಯೋತ್ಪಾದನೆಯನ್ನು ಮಾತ್ರವಲ್ಲ, ಅಮಾಯಕರನ್ನು ಭಯೋತ್ಪಾದರೆಂದು ಘೋಷಿಸಿ ಕೊಂದ ಪ್ರಭುತ್ವದ ಭಯೋತ್ಪಾದನೆ, ಸಿಖ್ ಧರ್ಮದ ಸಂಪ್ರದಾಯವಾದವನ್ನೂ ವಿರೋಧಿಸಿದ ಸಂಘಟನೆಯಿದು. ’ಅತಿ ಅಪಾಯಕಾರಿ ವಾರ್ತೆಯೆಂದರೆ ನಮ್ಮ ಕನಸುಗಳು ಕೊನೆಯುಸಿರೆಳೆವುದು…’ ಎಂಬ ಪಂಜಾಬಿನ ಕ್ರಾಂತಿಕಾರಿ ಕವಿ ಅವತಾರ್ ಸಿಂಗ್ ಪಾಶ್ ಅವರ ಕವಿತೆ ಜನಜನಿತ. ಖಾಲಿಸ್ತಾನಿಗಳನ್ನು ವಿರೋಧಿಸಿದ ಅವರು ಅವರಿಂದಲೇ ಹತರಾಗುತ್ತಾರೆ. ಅವರ ಜಮೀನನ್ನು ಯಾರೂ ಉಳುಮೆ ಮಾಡಕೂಡದೆಂದು ಖಾಲಿಸ್ತಾನಿಗಳು ಬೆದರಿಕೆ ಹಾಕಿರುತ್ತಾರೆ. ಆದರೆ ಈ ಬೆದರಿಕೆಗೆ ಬಗ್ಗದೆ ಅದನ್ನು ಸವಾಲಾಗಿ ಸ್ವೀಕರಿಸಿ ಪಾಶ್ ಅವರ ಜಮೀನನ್ನು ಉಳುಮೆ ಮಾಡಿ ಬೆಳೆ ಬೆಳೆಯಿತು ಕೀರ್ತಿ ಕಿಸಾನ್ ಯೂನಿಯನ್ ಸಂಘಟನೆ. ಈ ಸಂಘಟನೆಯ ಹದಿಮೂರು ಮಂದಿ ಕಾರ್ಯಕರ್ತರು ಮತ್ತು ಮೂವರು ಅಧ್ಯಕ್ಷರನ್ನು ಕೊಂದು ಹಾಕಿದ್ದರು ಖಾಲಿಸ್ತಾನಿಗಳು. ಈ ಸಂಘಟನೆಯ ಅಧ್ಯಕ್ಷ ರಾಜೇಂದ್ರಸಿಂಗ್ ದೀಪ್ ಸಿಂಗ್ ವಾಲಾ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿರುವ ರೈತ ನಿಯೋಗದ ಅತ್ಯಂತ ಕಿರಿಯ ವಯಸ್ಸಿನ ಸದಸ್ಯ. ಹತ್ತೆಕರೆಗೂ ಕಮ್ಮಿ ಹೊಲಗದ್ದೆಗಳ ರೈತರು ಮತ್ತು ಕೂಲಿಕಾರರ ಕೊರಳ ದನಿಯಾಗಿರುವ ಸಂಘಟನೆಯಿದು. ಅಪಪ್ರಚಾರಕ್ಕೆಂದೇ ನೇಮಕಗೊಂಡಿರುವ ಸೇನೆಯ ಕುರುಡು ಕಣ್ಣುಗಳಿಗೆ ಈ ಸತ್ಯ ಕಾಣುವುದಾದರೂ ಎಂತು?

ಪ್ರತಿಭಟನೆಯನ್ನು ಸೇರಿಕೊಳ್ಳುತ್ತಿರುವ ರೈತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತೊಡಗಿದೆ. ಊಟ ತಿಂಡಿ ಮುಂತಾದ ಅನುಕೂಲಗಳು ಹೇರಳ. ಆದರೆ ಸ್ನಾನ ಶೌಚದ ಸಮಸ್ಯೆ ಬಿಗಡಾಯಿಸಿದೆ. ರೈತ ಮಹಿಳೆಯರ ಪಾಡು ಹೇಳತೀರದು. ಹರಿಯಾಣ ಮತ್ತು ಉತ್ತರಪ್ರದೇಶ ಸರ್ಕಾರಗಳು ಮಾಡಿರುವ ಸಂಚಾರಿ ಶೌಚಾಲಯಗಳ ಸಂಖ್ಯೆ ಸಾಲದೇ ಸಾಲದು. ಈ ಶೌಚಾಲಯಗಳು ಕೂಡ ಬಳಸಲಾರದಷ್ಟು ಕೊಳಕಾಗಿವೆ. ಸಮೀಪದ ಹೊಲಗದ್ದೆಗಳು, ಕಾಲುದಾರಿಗಳೇ ಗತಿ. ಹೋಟೆಲುಗಳನ್ನು ಹುಡುಕಿಕೊಂಡು ಹೋಗಬೇಕೆಂದರೆ ಹತ್ತು ಕಿ.ಮೀ.ದೂರ ಕ್ರಮಿಸಬೇಕು. ಉತ್ತರಪ್ರದೇಶ-ದೆಹಲಿಯ ಘಾಜೀಪುರ ಗಡಿಯಲ್ಲಿ ಮುಗಿಲೆತ್ತರ ನಿಂತ ಕಸದ ಹೊಲಸಿನ ಬೆಟ್ಟವೇ ಪ್ರತಿಭಟನಾ ನಿರತ ರೈತರ ನೆರೆಹೊರೆ. ದುರ್ವಾಸನೆಯ ಜೊತೆಗೆ ಸೊಳ್ಳೆಗಳ ಕಾಟ. ದೆಹಲಿಯ ಸಿಖ್ ಗುರುದ್ವಾರ ಪ್ರಬಂಧಕ ಸಮಿತಿಯು ಸೊಳ್ಳೆ ನಿರೋಧಕ ಬತ್ತಿ- ಮುಲಾಮುಗಳು, ಟೂತ್ ಪೇಸ್ಟ್, ಬ್ರಶ್, ಸೋಪು ಹಾಗೂ ಶಾಂಪೂ ಹೊಂದಿದ ಸಾವಿರಾರು ’ಕಿಟ್’ ಗಳನ್ನು ರೈತರಿಗೆ ಹಂಚತೊಡಗಿದೆ. ಕಳೆದ ಎರಡು ವಾರಗಳಲ್ಲಿ ವಿಪರೀತ ಚಳಿಯ ವಾತಾವರಣ ಮತ್ತು ಅಪಘಾತಗಳ ಕಾರಣ ಒಟ್ಟು 14 ಮಂದಿ ಪ್ರತಿಭಟನಕಾರರು ಸಾವಿಗೀಡಾಗಿದ್ದಾರೆ. ಥರಗುಟ್ಟಿಸುವ ಥಂಡಿ ಕೊರೆದು ಕಾಡುವ ಬಯಲಿನಲ್ಲಿ ವಾರಗಟ್ಟಲೆ ಬದುಕುವುದು ಸುಲಭವಲ್ಲ. ಸಾವು ನೋವುಗಳಿಗೆ ನೀಡುವ ಆಹ್ವಾನವದು.

ಏನನ್ನು ಬೇಕಾದರೂ ಜಗಿದು ನುಂಗಿ ಅರಗಿಸಿಕೊಂಡೇವು ಎನ್ನುವ ಪ್ರಚಂಡ ಜೋಡಿಗೆ ಎದುರಾದಂತಿದೆ ಕಬ್ಬಿಣದ ಕಡಲೆ.


ಇದನ್ನೂ ಓದಿ: ರೈತ ಹೋರಾಟ ರಾಷ್ಟ್ರೀಯ ಸಮಸ್ಯೆಯಾಗುವ ಮುನ್ನ ಬಗೆಹರಿಸಿ: ಕೇಂದ್ರಕ್ಕೆ ಸುಪ್ರೀಂ ಸಲಹೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...