Homeಮುಖಪುಟ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

"ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, 'ಒಂದು ಮಾತ್ರ' ಎಂದು ಹೇಳುವುದು ದೊಡ್ಡ ಅನ್ಯಾಯ" - ಕಮಲ್ ಹಾಸನ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮೇಲೆ ತೀವ್ರ ದಾಳಿ ನಡೆಸಿರುವ ಮಕ್ಕಳ ನೀದಿ ಮಯ್ಯಂ ಸಂಸ್ಥಾಪಕ, ನಟ ಕಮಲ್ ಹಾಸನ್, ’ಒಂದು’ ಎಂಬ ಕಲ್ಪನೆಯು ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆಯಾಗಿ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’ ಎಂದು ಕಮಲ್ ಹಾಸನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜನರಿಗೆ ಪ್ರಯೋಜನ ಆಗುವುದಾದರೇ ರಜನಿಕಾಂತ್ ಜೊತೆಗೆ ಮೈತ್ರಿಗೆ ಸಿದ್ಧ- ಕಮಲ್ ಹಾಸನ್

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ” ಎಂದು ತಮ್ಮ ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

ಈ ’ಒಂದು’ ಎಂಬುದರ ಸಾಲಿನಲ್ಲಿ ಇನ್ನು ಕಾಣದಂದೆ ಮರೆಮಾಚಿರುವುದು ಏಕ ಪ್ರಧಾನಿ ಎಂಬುದು ಎಂದು ವಿಭಿನ್ನತೆಯ ದೇಶದಲ್ಲಿ ಒಂದು ಎಂಬ ಹೆಸರಲ್ಲಿ ಹೇರಿಕೆ ಮಾಡುತ್ತಿರುವ ಕುರಿತು ಆಕ್ರೋಶ ಹೊರಹಾಕಿದ್ದಾರೆ. ಇದಲ್ಲದೇ ಹಿಂದಿ ಹೇರಿಕೆಯ ಕುರಿತಾಗಿಯೂ ಚುನಾವಣಾ ಪ್ರಚಾರದಲ್ಲಿ ಕಮಲ್ ಹಾಸನ್ ತಿರುಗೇಟು ನೀಡಿದ್ದಾರೆ.

ತಮಿಳು ಭಾಷೆ ಮಾತನಾಡುವ ಮೂಲಕ ಅಧಿಕಾರ ಪಡೆದುಕೊಂಡವರು ಅಧಿಕಾರಕ್ಕೆ ಬಂದ ನಂತರ ತಮಿಳನ್ನು ಮರೆತಿದ್ದಾರೆ ಎಂದು ತಮ್ಮ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

“ತಮಿಳು ಮಾತನಾಡುವ ಮೂಲಕ ಅಧಿಕಾರಕ್ಕೆ ಬಂದವರು ಅಧಿಕಾರಕ್ಕೆ ಬಂದ ನಂತರ ತಮಿಳನ್ನು ಮರೆತಿದ್ದಾರೆ. ತಮಿಳು ಜನರು ಎಲ್ಲಾ ಭಾಷೆಗಳನ್ನು ಕಲಿಯಲು ಸಿದ್ಧರಾಗಿದ್ದು, ತಮಿಳು ಸಿಹಿಯಾದ ಭಾಷೆಯಾಗಿದೆ. ನನಗೆ ಹಿಂದಿ ಇಷ್ಟವಿಲ್ಲ ಎಂದು ನಾನು ಹೇಳಲಾರೆ. ಆದರೆ ನಮ್ಮ ಭಾಷೆ ಕೂಡ ಅದ್ಭುತವಾಗಿದೆ” ಎಂದು ಹೇಳಿದ್ದಾರೆ.

ಈ ಹಿಂದೆ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದ ಕಮಲ್ ಹಾಸನ್, ದೇಶದ ಆರ್ಥಿಕತೆ ತೀವ್ರ ಕುಸಿತ ಕಂಡಿರುವ ಈ ಸಮಯದಲ್ಲಿ ಇಂತಹ ಬೃಹತ್ ಮೊತ್ತದ ಹೊಸ ಸಂಸತ್ತು ನಿರ್ಮಾಣದ ಅರ್ಥವೇನು ಎಂದು  ಪ್ರಧಾನಿಯವರನ್ನು ಪ್ರಶ್ನಿಸಿದ್ದರು.

ತಮ್ಮ ಟ್ವಿಟರ್‌ ಖಾತೆಯಲ್ಲಿ ಕಮಲ್ ಹಾಸನ್, “ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಪ್ರಶ್ನಿಸಿದ್ದರು.

ಇತ್ತಿಚೆಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ, ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿವೆ. ಹಾಗಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಭಾರತದ ಅವಶ್ಯಕತೆ ಇದೆ ಎಂದು ಹೇಳಿದ್ದರು.

ಈ ನಟ ಕಮಲ್ ಹಾಸನ್ ಇಂತಹ ಒಂದು ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗುತ್ತದೆ ಎಂಬುದು ಇತಿಹಾಸ ತೋರಿಸಿದೆ ಎಂದು, ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗಳು 2021 ರ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿವೆ.


ಇದನ್ನೂ ಓದಿ: ದೇಶದ ಅರ್ಧದಷ್ಟು ಜನ ಹಸಿವಿನಲ್ಲಿರುವಾಗ ಹೊಸ ಸಂಸತ್ತು ಬೇಕೆ? ಮೋದಿಗೆ ಕಮಲ್ ಹಾಸನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...