Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...