Homeಕರ್ನಾಟಕಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

ಬಳ್ಳಾರಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಆತನ ಪತ್ನಿಯಿಂದಲೇ ಪ್ರಚಾರ

- Advertisement -
- Advertisement -

ಹೌದು ನಿಮಗೆ ಆಶ್ಚರ್ಯವಾದರು ಸಹ ಇದು ಸತ್ಯ. ಇಂತಹದೊಂದು ಅಪರೂಪದ ಪ್ರಕ್ರಿಯೆಗೆ ಬಳ್ಳಾರಿ ಚುನಾವಣಾ ಕಣ ಸಾಕ್ಷಿಯಾಗಿದೆ. ಕೇವಲ ಆರು ತಿಂಗಳ ಹಿಂದೆ ನಡೆದ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪನವರು ಪ್ರಚಂಡ ಬಹುಮತದೊಂದಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗಿನ ಸಾರ್ವತ್ರಿಕ ಚುನಾವಣೆಯ ಕಣದಲ್ಲಿಯೂ ಅವರೇ ಕಾಂಗ್ರೆಸ್ ನ ಅಭ್ಯರ್ಥಿ. ಇವರ ವಿರುದ್ಧದ ಪ್ರತಿಸ್ಪರ್ಧಿ ಬಿಜೆಪಿಯಿಂದ ದೇವೆಂದ್ರಪ್ಪನವರು ಕಣಕ್ಕಿಳಿದಿದ್ದಾರೆ.

ವಿಶೇಷವೆನೆಂದರೆ ಬಳ್ಳಾರಿಯ ಹಾಲಿ ಜಿ.ಪಂ ಸದಸ್ಯೆ ಸುಶೀಲಮ್ಮನವರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದವರು. ಅವರ ಪತಿಯೇ ಬಿಜೆಪಿಯಿಂದ ಸ್ಪರ್ಧಿಸಿರುವ ದೇವೆಂದ್ರಪ್ಪನವರಾಗಿದ್ದಾರೆ. ಈ ಮುಂಚೆ ದೇವೆಂದ್ರಪ್ಪನವರು ಸಹ ಕಾಂಗ್ರೆಸ್ ನಲ್ಲಿದ್ದರು. ಕಳೆದ ಉಪಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಕೊರತೆ ಕಾಡಿತ್ತು. ಹರಕೆಯ ಕುರಿಯಾಗಲು ಯಾರು ಸಿಗದಿದ್ದಾಗ ಮುಂದೆ ಬಂದವರೆ ದೇವೆಂದ್ರಪ್ಪ.

ಹಾಗೆ ನೋಡಿದರೆ ಹರಪನಹಳ್ಳಿಯ ನಿವಾಸಿಗಳಾದ ದೇವೆಂದ್ರಪ್ಪ ಮತ್ತು ಸುಶೀಲಮ್ಮ ದಂಪತಿಗಳು ಕಾಂಗ್ರೆಸ್ ನಲ್ಲಿದ್ದರೂ ಕೂಡ ಬಿಜೆಪಿ ಬಿ.ಶ್ರೀರಾಮುಲುರವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದವರಾಗಿದ್ದರು. ಹರಪನಹಳ್ಳಿ ತಾಲ್ಲೂಕಿನ ಜಿ.ಪಂ ಸ್ಥಾನಕ್ಕೆ ಸುಶೀಲಮ್ಮನವರು ಕಾಂಗೈನಿಂದ ಆಯ್ಕೆಯಾಗಿದ್ದರು. ಆದರೆ ಅವರ ಪತಿ ದೇವೆಂದ್ರಪ್ಪನವರು ಖಾಲಿ ಇದ್ದರು. ಈಗ ಬಿಜೆಪಿಗೆ ಅಭ್ಯರ್ಥಿಗಳಿಲ್ಲದ ಸಂದರ್ಭವನ್ನು ಬಳಸಿಕೊಂಡು ಬಿಜೆಪಿ ಹಾರಿದ್ದಾರೆ. ಆದರೆ ಅವರ ಪತ್ನಿ ಸುಶೀಲಮ್ಮನವರು ಈಗಲು ಸಹ ಕಾಂಗ್ರೆಸ್ ನ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಪರ ಪ್ರಚಾರ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಎಂ.ಎಲ್.ಸಿ ಅಲ್ಲಂ ವೀರಭದ್ರಪ್ಪ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಪ್ರತಿ ಲೋಕಸಭಾ ಚುನಾವಣೆಯಲ್ಲಿಯೂ ರಣರಂಗವಾಗುತ್ತಿತ್ತು. ಅಷ್ಟು ಸುಲಭಕ್ಕೆ ಸೋಲಪ್ಪಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ದರಿರಲಿಲ್ಲ. ಕಳೆದ ಐದು ವರ್ಷಗಳ ಹಿಂದೆ ರೆಡ್ಡಿ ಸಹೋದರರ ರಿಪಬ್ಲಿಕ್ ಆಗಿದ್ದ ಬಳ್ಳಾರಿಯಲ್ಲಿ ಇಂದು ಚುನಾವಣೆಗೂ ಮುನ್ನವೇ ಬಿಜೆಪಿ ಸೋಲಪ್ಪಿಕೊಂಡಿರುವುದು ನೋಡಿದರ ಅವರ ಮಹಾನ್ ತಪ್ಪುಗಳಿಗೆ ತಕ್ಕ ಶಿಕ್ಷೆ ಸಿಕ್ಕಿದ ಹಾಗೆ ಆಗಿದೆ. ಹಣದಿಂದ ಜನರನ್ನು ಕೊಂಡುಕೊಳ್ಳುತ್ತೇವೆಂಬ ಅವರ ಅಹಂಕಾರಕ್ಕೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. 2018ರ ವಿಧಾನಸಭಾ ಚುನಾಚಣೆಗುವರೆಗೂ ಸದ್ದು ಮಾಡುತ್ತಿದ್ದ ಬಿ.ಶ್ರೀರಾಮುಲು ಈಗ ಸೋತು ಸುಣ್ಣವಾಗಿದ್ದಾರೆ.

ಶ್ರೀರಾಮುರವರ ಸಹೋದರಿ ಶಾಂತರವರು 2009ರಲ್ಲಿ ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಕಣಕ್ಕಿಳಿದು ಸಂಸದರಾಗಿದ್ದರೆ, 2014ರಲ್ಲಿ ಬಿ ಶ್ರೀರಾಮು ಜಯಶಾಲಿಯಾಗಿ ಸಂಸತ್ ಪ್ರವೇಶಿಸಿದ್ದರು. 2ಸಾವಿರ ಮತಗಳ ಅಂತರದಲ್ಲಿ 2009ರಲ್ಲಿ ಕಾಂಗ್ರೆಸ್ ಅಲ್ಲಿ ಸೋತಿದ್ದರೆ 2014ರಲ್ಲಿ ಸೋಲಿನ ಅಂತರ ಒಂದು ಲಕ್ಷಕ್ಕೆ ಏರಿಕೆಯಾಗಿತ್ತು. ಆದರೆ 2018ರಲ್ಲಿ ಬಿ.ಶ್ರೀರಾಮು ವಿಧಾನಸಭೆಗೆ ಆಯ್ಕೆ ಆದ ಕಾರಣ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಚಿಂತಕ ವಿ.ಎಸ್ ಉಗ್ರಪ್ಪ ಕಣಕ್ಕಿಳಿದಿದ್ದರು. ಮತ್ತೆ ರಾಮುಲು ಸಹೋದರಿ ಜೆ ಶಾಂತ ಬಿಜೆಪಿಯಿಂದ ಪ್ರತಿಸ್ಪರ್ಧಿಯಾಗಿದ್ದರು. ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಜಿದ್ದಾಜಿದ್ದಿನ ಕಾಳಗದಲ್ಲಿ ಕಾಂಗ್ರೆಸ್ ನ ವಿ.ಎಸ್ ಉಗ್ರಪ್ಪ 2,43,161 ಮತಗಳ ಭಾರೀ ಅಂತರದಿಂದ ಗೆದ್ದು ಬಿಜೆಪಿಯನ್ನು ಧೂಳಿಪಟ ಮಾಡಿದ್ದರು.

Chief Minister BS Yeddyurappa and Opposition leader Siddaramaiah seen in an argument during Assembly Session at Vidhana Soudha in Bangalore on Friday. -KPN

ಗಣಿರೆಡ್ಡಿಗಳ ಮಿತಿಮೀರಿದ ಹಾವಳಿ ವಿರುದ್ಧ ತೊಡೆ ತಟ್ಟಿದ್ದ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿ ಇತಿಹಾಸ ಸೃಷ್ಟಿಸಿದ್ದರು. ನಂತರ ಅಲ್ಲಿನ ವಾತವಾರಣ ನಿಧಾನವಾಗಿ ಬದಲಾಗಲು ಆರಂಭವಾಯಿತು. ಈಗ ಅಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಪಾರಮ್ಯ ಮೆರೆದಿದೆ. ಹಾಗಾಗಿ ಬಿಜೆಪಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿತ್ತು. ಹಾಗಾಗಿ ಯಾರು ಕಣಕ್ಕಿಳಿಯಲು ಮನಸ್ಸ ಮಾಡಲಿಲ್ಲ. ಕೊನೆಗೆ ರಾಮುಲು ಹರಕೆಯ ಕುರಿ ದೇವೆಂದ್ರಪ್ಪನನ್ನು ತಂದು ಕಣಕ್ಕೆ ಕಟ್ಟಿದ್ದಾರೆ. ದೇವೆಂದ್ರಪ್ಪನೂ ಕಾಟಚಾರದ ಪ್ರಚಾರ ಮಾಡಿದರೆ ಕಾಂಗ್ರೆಸ್ ಪರ ಆತನ ಪತ್ನಿಯೂ ಸಹ ಕಾಟಚಾರದ ಪ್ರಚಾರವನ್ನಷ್ಟೇ ಮಾಡಲಿದ್ದಾರೆ. ಒಟ್ಟಿನಲ್ಲಿ ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್ ಹಬ್ಬ ಆಚರಿಸುತ್ತಿದೆ ಅಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...