Homeಮುಖಪುಟಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

ಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

’ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯ ವ್ಯರ್ಥ ಮಾಡಲಾಯಿತು’

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಇತರ ಇಬ್ಬರು ಕಾಂಗ್ರೆಸ್ ಸದಸ್ಯರಾದ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಅವರು ಇಂದು ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಎದ್ದು ಹೊರ ನಡೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದು, ಚರ್ಚೆ ನಡುವೆ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ್ದಾರೆ. ಜೊತೆಗೆ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಮಾತಾಡಲು ಮುಂದಾಗಿದ್ದರು.

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಬಂಡವಾಳಶಾಹಿಗಳೇ ಆಪ್ತ ಸ್ನೇಹಿತರು: ರಾಹುಲ್ ಗಾಂಧಿ

’ರಾಜಕೀಯ ನಾಯಕತ್ವವು ರಾಷ್ಟ್ರೀಯ ಭದ್ರತೆಯ ವಿಷಯಗಳು ಮತ್ತು ಲಡಾಖ್‌ನಲ್ಲಿ ಚೀನಿಯರ ವಿರುದ್ಧ ಹೋರಾಡುತ್ತಿರುವ ರಕ್ಷಣಾ ಪಡೆಗಳನ್ನು ಹೇಗೆ ಬಲಪಡಿಸುವುದು ಎಂಬುದರ ಕುರಿತು ಚರ್ಚಿಸಬೇಕು’ ಎಂದು ರಾಹುಲ್ ಗಾಂಧಿ ಹೇಳಿದರು. ಇದರ ನಂತರ ಅವರಿಗೆ ತಮ್ಮ ಮಾತು ಮುಂದುವರಿಸಲು ಅವಕಾಶ ನೀಡಿಲ್ಲ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಕಾಂಗ್ರೆಸ್ ಮುಖಂಡ ಹಲವಾರು ಭಾರಿ ದೇಶದ ಗಡಿಯನ್ನು ಕಾಪಾಡುವ ಸೈನಿಕರ ದುಃಸ್ಥಿತಿಯ ವಿಷಯ, ಶೀತದಲ್ಲಿ ಸೈನಿಕರು ಪರದಾಡುವ ಕುರಿತು ಧ್ವನಿ ಎತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆಂದು ಸುಮಾರು 8,400 ಕೋಟಿ ವ್ಯಯಿಸಿ ಐಷಾರಾಮಿ ವಿಮಾನದ ವ್ಯವಸ್ಥೆ ಮಾಡಿರುವ ಸರ್ಕಾರ, ನಮ್ಮ ದೇಶದ ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ಟ್ರಕ್ ಒದಗಿಸಲು ನಿರಾಕರಿಸಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಸರ್ಕಾರವನ್ನು ಟೀಕಿಸಿದ್ದರು.

ಪ್ರಧಾನಮಂತ್ರಿ ತನಗಾಗಿ 8,400 ಕೋಟಿ ಮೌಲ್ಯದ ವಿಮಾನವನ್ನು ಖರೀದಿಸಿದ್ದಾರೆ. ಈ ದುಡ್ಡಿನಲ್ಲಿ ಸಿಯಾಚಿನ್-ಲಡಾಕ್ ಗಡಿಯಲ್ಲಿರುವ ನಮ್ಮ ಸೈನಿಕರಿಗೆ ಏನೆಲ್ಲಾ ಖರೀದಿಸಬಹುದು? ಪ್ರಧಾನಿಯವರು ಕೇವಲ ತನ್ನ ಬಗ್ಗೆ ಮಾತ್ರ ಯೋಚಿಸುತ್ತಾರೆ” ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದರು.


ಇದನ್ನೂ ಓದಿ: 17 ದಿನದಲ್ಲಿ 11 ರೈತರು ಬಲಿ: ಇನ್ನೆಷ್ಟು ಬಲಿಯಾಗಬೇಕು..? ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...