Homeಚಳವಳಿರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

"ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ" ಎಂದು ಆತ್ಮಹತ್ಯಾ ಟಿಪ್ಪಣಿಯಲ್ಲಿ ಬರೆಯಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನಗಳನ್ನು ಹಿಂಪಡೆಯುವಂತೆ ದೇಶದ ರೈತರು ಪ್ರತಿಭಟನೆ ಮಾಡುತ್ತಿದ್ದು, ಇಲ್ಲಿ ಅಘಾತಕಾರಿಯಾದ ಘಟನೆಯೊಂದು ನಡೆದಿದೆ. ರೈತರ ಹೋರಾಟಕ್ಕೆ ಬೆಂಬಲ ನೀಡಲು ತಮ್ಮ ಪ್ರಾಣವನ್ನು ಕಳೆದುಕೊಂಡ ಸಿಖ್ ಧರ್ಮಗುರುವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆದಿದೆ. ಅವರು ಆತ್ಮಹತ್ಯಾ ಟಿಪ್ಪಣಿಯನ್ನೂ ಬರೆದಿದ್ದಾರೆ.

ಅತ್ಮಹತ್ಯಾ ಟಿಪ್ಪಣಿಯಲ್ಲಿ, “ಸರ್ಕಾರದ ವಿರುದ್ಧ ಕೋಪ ಮತ್ತು ನೋವನ್ನು ವ್ಯಕ್ತಪಡಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿದ್ದೇನೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ಸಮಯ ವ್ಯರ್ಥ ಎಂದು ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಹೊರನಡೆದ ರಾಹುಲ್

ಈ ಕುರಿತು ಟ್ವೀಟ್ ಮಾಡಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್‌ಬೀರ್ ಸಿಂಗ್ “ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿನ ರೈತರ ಸಂಕಟವನ್ನು ನೋಡುತ್ತಿದ್ದ ಸಂತ ಬಾಬಾ ರಾಮ್ ಸಿಂಗ್ ಜಿ ನಾನಕ್ಸರ್ ಸಿಂಗ್ರಾ ವಾಲೆ, ಸ್ವತಃ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸಂತ ಜಿ ಅವರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪರಿಸ್ಥಿತಿ ಹದಗೆಡುವ ಮುನ್ನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…

ಇದನ್ನೂ ಓದಿ: ’ಒಂದು’ ಎಂಬ ಕಲ್ಪನೆ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣ- ಕಮಲ್ ಹಾಸನ್

ಆತ್ಮಹತ್ಯಾ ಟಿಪ್ಪಣಿಯಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದಿದ್ದಾರೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

 


ಇದನ್ನೂ ಓದಿ: ಕೇರಳದ ಜನರು ಮೋದಿಯ ಕಲ್ಯಾಣ ಕ್ರಮಗಳನ್ನು ಒಪ್ಪಿಕೊಂಡಿದ್ದಾರೆ: ರಾಜ್ಯ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...