Homeಮುಖಪುಟಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ.

- Advertisement -
- Advertisement -

ಈ ವರ್ಷದ ಮಾರ್ಚ್‌ನಲ್ಲಿ ದೇಶ ಕೋವಿಡ್ ಭಯದಲ್ಲಿದ್ದಾಗ ಮಧ್ಯಪ್ರದೇಶದಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿ 22 ಕಾಂಗ್ರೆಸ್ ಶಾಸಕರನ್ನು ರಾಜೀನಾಮೆ ಕೊಡಿಸಿ ಕಾಂಗ್ರೆಸ್ ಸರ್ಕಾರ ಬೀಳಿಸಿ, ತಾನು ಅಧಿಕಾರದ ಗದ್ದುಗೆಯೇರಿತ್ತು. ಈ ರೀತಿಯಾಗಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

‘ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಿ ಸಿಎಂ ಕಮಲ್ ನಾಥ್ ಅವರನ್ನು ಪದಚ್ಯುತಗೊಳಿಸುವಲ್ಲಿ ಪ್ರಧಾನಿ ಮೋದಿಯವರು ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಇಂದೋರ್‌ನಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕೈಲಾಸ್ ವಿಜಯವರ್ಗಿಯಾ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಷ್ಟು ದಿನ ಕಾಂಗ್ರೆಸ್ ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದೊಂದಿಗೆ ಮುನಿಸಿಕೊಂಡು ತನ್ನ ಬೆಂಬಲಿಗ 22 ಶಾಸಕರ ಜೊತೆಗೆ ರಾಜೀನಾಮೆ ನೀಡಿದ್ದರು. ಆ ನಂತರವಷ್ಟೇ ಅವರು ಬಿಜೆಪಿ ಸೇರಿದ್ದರು ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಕಮಲ್‌ ನಾಥ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿನ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಪ್ರಧಾನಿ ಮೋದಿಯನ್ನು ದೂರಿದ್ದರು.

ಆದರೆ ನಿನ್ನೆಯ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹಾಜರಿದ್ದ ಸಂದರ್ಭದಲ್ಲಿಯೇ ಮಾತನಾಡಿರುವ ವಿಜಯ ವರ್ಗಿಯಾ “ಈ ವಿಚಾರವನ್ನು ನಾನು ಮೊದಲ ಬಾರಿಗೆ ಸಾರ್ವಜನಿಕಗೊಳಿಸುತ್ತಿದ್ದೇನೆ. ಹೀಗಾಗಿ ನೀವೂ ಸಹ ಯಾರಿಗೂ ಹೇಳಬೇಡಿ. ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರವಹಿಸಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯೇ ಹೊರತು ಧರ್ಮೇಂದ್ರ ಪ್ರಧಾನ್ ಅಲ್ಲ” ಎಂದು ಹೇಳಿದ್ದಾರೆ.

ಈ ವರ್ಷದ ಜೂನ್‌ನಲ್ಲಿಯೂ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ “ಕಮಲ್ ನಾಥ್ ಸರ್ಕಾರವನ್ನು ಬಿಳೀಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಕೆಲಸ ಮಾಡಿದ್ದರು” ಎಂದು ಹೇಳಿದ್ದರು. ಆದರೆ ಅವರು ನಿರ್ಧಿಷ್ಟ ಹೆಸರುಗಳನ್ನು ಬಹಿರಂಗಪಡಿಸಿರಲಿಲ್ಲ.

“ಸಾಂವಿಧಾನಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಂವಿಧಾನಿಕ ರೀತಿಯಲ್ಲಿ ಕೆಳಗಿಳಿಸುವವರು ಪ್ರಧಾನಿ ನರೇಂದ್ರ ಮೋದಿ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. “ಕಾಂಗ್ರೆಸ್ ಸರ್ಕಾರ ಉರುಳಲು ಪ್ರಧಾನಿ ಮೋದಿಯೇ ಕಾರಣ ಎಂದು ಮೊದಲ ದಿನದಿಂದಲೇ ನಾವು ಹೇಳುತ್ತಿದ್ದೇವೆ. ಆದರೆ, ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾಂಗ್ರೆಸ್‌ನ ಆಂತರಿಕ ಜಗಳವೇ ಕಾರಣ ಎಂದು ಬಿಜೆಪಿ ಹೇಳುತ್ತಿತ್ತು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸತ್ಯವನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ” ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ನರೇಂದ್ರ ಸಲೂಜಾ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬೆಲ್ಲವನ್ನು ಹೇಗೆ ತಯಾರಿಸುತ್ತಾರೆ ಎಂಬುದೂ ರಾಹುಲ್ ಗಾಂಧಿಗೆ ಗೊತ್ತಿಲ್ಲ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...