Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...