Homeಅಂಕಣಗಳುಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಗೋಹತ್ಯೆ ನಿಷೇಧ ವಿಧೇಯಕ ಮತ್ತು ರೈತರ ಹೋರಾಟದ ಕುರಿತು ಗುರುಪ್ರಸಾದ್ ಡಿ.ಎನ್ ರವರ ಲೇಖನ ಓದಿ.

- Advertisement -
- Advertisement -

ಯಾವುದೇ ಬಹು ಸಂಸ್ಕೃತಿಯ ಪ್ರಜಾಪ್ರಭುತ್ವ ದೇಶದಲ್ಲಿ ನಂಬಿಕೆ ಆಚರಣೆಗಳ ವಿಚಾರಕ್ಕೆ ಬಂದಾಗ, ಹಲವು ವರ್ಗಗಳ ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ವಿವಿಧ ಸಮುದಾಯಗಳ ನಡುವೆ ಸಂಧಾನಕ್ಕೆ, ಚೌಕಾಶಿಗೆ ಅವಕಾಶ ಇರಬೇಕು. ಅದಕ್ಕೆ ಪ್ರಭುತ್ವಗಳು-ಆಡಳಿತ ವ್ಯವಸ್ಥೆಗಳು ಸಹಾಯ ಮಾಡಬೇಕು. ಯಾವುದೋ ಒಂದು ಬಲಿಷ್ಟ ಸಂಸ್ಕೃತಿಯು ಮತ್ತೊಂದು ಸಂಸ್ಕೃತಿಯ ಮೇಲೆ ದಬ್ಬಾಳಿಕೆ ಮಾಡುವುದಕ್ಕೆ ಸಹಕರಿಸುವುದನ್ನಾಗಲೀ, ಸಾಂವಿಧಾನಿಕ ತತ್ವಗಳನ್ನು ಗಾಳಿಗೆ ತೂರಿ ಯಾವದೇ ಒಂದು ವರ್ಗದ-ಸಮುದಾಯದ ಹಿತಾಸಕ್ತಿಗೆ ಮಣೆ ಹಾಕಿ ಸಾಮಾನ್ಯ ಹಿತವನ್ನು, ಜನಸಾಮಾನ್ಯರ ಒಟ್ಟಾರೆ ಹಿತಾಸಕ್ತಿಯನ್ನು ಕಡೆಗಣಿಸುವುದನ್ನಾಗಲೀ ಸರ್ಕಾರಗಳು ಮಾಡಲೇಬಾರದು.

ಸ್ವಾತಂತ್ರ್ಯಪೂರ್ವದಿಂದಲೂ ಗೋಹತ್ಯೆ ಈ ದೇಶದಲ್ಲಿ ವಿವಾದಾಸ್ಪದ ಸಂಗತಿಯೇ. ಒಂದು ಸಣ್ಣ ಸಮುದಾಯದ ನಂಬಿಕೆಯಾಗಿ ಯಾವುದೋ ಒಂದು ಕಾಲಘಟ್ಟದಲ್ಲಿ ಹಸುಗಳ ಬಗ್ಗೆ ಪೂಜ್ಯ ಭಾವನೆ ಬೆಳೆದಿರಬಹುದು. ಈ ದೇಶದಲ್ಲಿ ಹಲವು ಸಮುದಾಯಗಳು ತಮ್ಮ ಮಾಂಸಾಹಾರದ ಜೊತೆಗೆ ಗೋಮಾಂಸ ತಿನ್ನುವುದೂ ಕೂಡ ವಾಸ್ತವ. ಹಸುಗಳನ್ನು ಪೂಜಿಸುವ ಆದರೆ ತಮ್ಮ ಮಾಂಸಾಹಾರದಲ್ಲಿ ಗೋವನ್ನು ಹೊಂದಿರದ ಮತ್ತು ಗೋಮಾಂಸ ತಿನ್ನುವವರ ಬಗ್ಗೆ ಯಾವುದೇ ಅಸಹನೆ ತೋರದ ಸಮುದಾಯಗಳೂ ಇವೆ. ಮೊದಲನೆಯ ಸಮುದಾಯದ ಅವೈಚಾರಿಕತೆಯನ್ನು ಮತ್ತು ಗೋಮಾಂಸ ತಿನ್ನುವ ಸಮುದಾಯಗಳ ಅಗತ್ಯಗಳು-ಕಾರಣಗಳನ್ನು ಸದ್ಯಕ್ಕೆ ಬದಿಗಿಟ್ಟರೂ, ಯಾವುದೇ ಆಡಳಿತ ವ್ಯವಸ್ಥೆಯ ಕೆಲಸ ಎರಡೂ ಸಮುದಾಯಗಳ ನಡುವಿನ ಸಂಘರ್ಷಕ್ಕೆ ವೈಚಾರಿಕ ತಳಹದಿಯಲ್ಲಿ, ಸಂವಿಧಾನದ ಆಶಯಗಳಲ್ಲಿ ಸಂಧಾನಕ್ಕೆ ಪ್ರಯತ್ನಿಸಿ, ಪರಿಹಾರಗಳನ್ನು ಸೂಚಿಸುವುದು. ಅಂದರೆ ಅಂತಹ ಚೌಕಾಶಿಗೆ ಇರುವ ಸ್ಪೇಸ್‌ಅನ್ನು ಉಳಿಸಿಕೊಳ್ಳಬೇಕು. ಇಂತಹ ಸಂದರ್ಭವನ್ನು ಊಹಿಸಿಯೇ, ಸಂವಿಧಾನ ರಚನೆಯಲ್ಲಿ, ಗೋರಕ್ಷಣೆಯನ್ನು ರಾಜ್ಯ ನಿರ್ದೇಶಕ ತತ್ವಗಳನ್ನಾಗಿಸಿ, ಆಯಾ ನಾಡಿನ ಸಾಂಸ್ಕೃತಿಕ-ಸಾಮಾಜಿಕ ಸಂದರ್ಭಕ್ಕೆ, ಎಲ್ಲ ಸಮುದಾಯಗಳ ಬೇಡಿಕೆಗಳಿಗೂ ಜಾಗ ನೀಡುವ ಕಾನೂನನ್ನು ರಚಿಸಲು ಸಾಧ್ಯವಾಗುವಂತೆ ಅವಕಾಶ ಒದಗಿಸಿತ್ತು.

ಹಲವು ರಾಜ್ಯ ಸರ್ಕಾರಗಳು ಇಂತಹ ಸಮತೋಲನದ ಕಾನೂನುಗಳನ್ನು ರಚಿಸಿದ್ದವು ಕೂಡ. ಗೋವುಗಳನ್ನು ವಧೆ ಮಾಡದಂತೆ, ಉಳಿದ ಜಾನುವಾರುಗಳ ಭಕ್ಷಣೆಗೆ ಅವಕಾಶ ಮಾಡಿಕೊಡುವ ಕಾನೂನುಗಳು ಬಹುಸಂಸ್ಕೃತಿಯ ಪ್ರಜಾಸತ್ತೆಯಲ್ಲಿ ಚೌಕಾಶಿ ಮಾಡುವ ಪ್ರಕ್ರಿಯೆಯನ್ನು ಎತ್ತಿ ಹಿಡಿದಿತ್ತು. ಆದರೆ, ಈಗ ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಹೊಸ ಜಾನುವಾರು ಹತ್ಯೆ ಕಾನೂನುಗಳನ್ನು ರಚಿಸಿ ಅದರಲ್ಲಿ, ಹಸುಗಳು, ಎತ್ತುಗಳು, ಗೊಡ್ಡು ದನಗಳು ಎಲ್ಲವನ್ನು ಹತ್ಯೆ ಮಾಡದಂತೆ ತಡೆದಿವೆ. ಕರ್ನಾಟಕ ಸರ್ಕಾರವೂ ಇಂತಹ ಕರಾಳ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೇವಲ ಒಂದು ಸಮುದಾಯದ ಹಿತಾಸಕ್ತಿಯನ್ನು ಕಾಯುವ, ಉಳಿದ ಸಮುದಾಯಗಳ ಸಂಧಾನಕ್ಕೆ ಕದ ಮುಚ್ಚಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನತತ್ವಕ್ಕೆ ಬದ್ಧವಾಗಿಲ್ಲ. (ವೈಚಾರಿಕವಾಗಿ, ಕಾನೂನಿನ ಅನುಷ್ಠಾನದ ದೃಷ್ಟಿಯಿಂದಲೂ ಈ ಹೊಸ ಕಾಯ್ದೆ ಸರಿಯಲ್ಲ ಎನ್ನುವ ಚರ್ಚೆಯನ್ನು ಹೊರತುಪಡಿಸಿದರೂ)

ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾರ್ಪೊರೆಟ್ ಹಿತಾಸಕ್ತಿಯನ್ನು ಮಾತ್ರ ಕಾಪಾಡಲು, ರೈತರ ಜೊತೆಗೆ, ರಾಜ್ಯ ಸರ್ಕಾರಗಳ ಜೊತೆಗೆ ಯಾವುದೇ ಸಂಧಾನ-ಚೌಕಾಶಿ ನಡೆಸದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕಾನೂನುಗಳು ಈಗ ತನ್ನ ಕೊರಳಿಗೇ ಸುತ್ತಿಕೊಳ್ಳುತ್ತಿವೆ. ಕಾನೂನು ಜಾರಿ ಮಾಡುವಾಗ ಯಾವುದೇ ಮಾತುಕತೆ ನಡೆಸದೆ, ಈಗ ದೊಡ್ಡ ಮಟ್ಟದ ಪ್ರತಿರೋಧ ಬರುತ್ತಿರುವ ಹೊತ್ತಿನಲ್ಲಿ ರೈತರ ಜೊತೆಗೆ ಚೌಕಾಶಿಗೆ ಇಳಿದಿದೆ. ಆದರೆ ಅಲ್ಲೂ ಪ್ರಾಮಾಣಿಕತೆಯಿಲ್ಲ. ಕಾರ್ಪೊರೆಟ್ ಶಕ್ತಿಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಬಹುತೇಕ ಬೆದರಿಕೆ ರೀತಿಯಲ್ಲಿಯೇ ರೈತರನ್ನು ಮಣಿಸಲು ಪ್ರಯತ್ನ ಮಾಡುತ್ತಿರುವುದು ಇಲ್ಲಿಯವರೆಗೂ ಫಲ ಕೊಟ್ಟಿಲ್ಲ.

ಯಾವುದೇ ಕಾನೂನು-ಕಾಯ್ದೆ ಜಾರಿಗೊಳಿಸುವಾಗ ಹಲವು ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ ಜನ ಸಾಮಾನ್ಯರೆಲ್ಲರ ಹಿತವನ್ನು ಕಾಯುವುದನ್ನು ಸರ್ಕಾರಗಳು ಮನಗಾಣಬೇಕಲ್ಲವೇ?


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...