Homeಮುಖಪುಟರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ...

ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ ಸಚಿವ ಆರೋಪ

"ಸಬೆಗೆ ಹಾಜರಾಗದಿರುವುದು. ಚರ್ಚೆ ಮಾಡ ಬಯಸಿದ ವಿಷಯವನ್ನು ಪ್ರಸ್ತಾಪಿಸದಿರುವುದು, ನಂತರ 'ಪ್ರಮುಖ ವಿಷಯಗಳ' ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು"

- Advertisement -
- Advertisement -

‘ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಗಹಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ. ನಿನ್ನೆ ನಡೆದ ರಕ್ಷಣಾ ಸಂಸದೀಯ ಸಮಿತಿ ಸಭೆಯ ನಡುವೆಯೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎದ್ದು ಹೊರ ನಡೆದಿದ್ದರು.

“ರಕ್ಷಣಾ ಸಂಸದೀಯ ಸಮಿತಿ ಸಭೆಯಲ್ಲಿ ಸೈನಿಕರನ್ನು ಹೇಗೆ ಉತ್ತಮವಾಗಿ ಸಜ್ಜುಗೊಳಿಸಬೇಕು ಎಂಬುದರ ಕುರಿತು ಚರ್ಚಿಸುವ ಬದಲು, ಸಶಸ್ತ್ರ ಪಡೆಗಳ ಸಮವಸ್ತ್ರಗಳ ಬಗ್ಗೆ ಚರ್ಚೆ ನಡೆಸುತ್ತಾ ಸಮಯವನ್ನು ವ್ಯರ್ಥ ಮಾಡಲಾಯಿತು” ಎಂದು ನಿನ್ನೆ ರಾಹುಲ್ ಗಾಂಧಿ ಆರೋಪಿಸಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, “ಕಳೆದ ಒಂದೂವರೆ ವರ್ಷಗಳಲ್ಲಿ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ ಕೇವಲ 2 ರಲ್ಲಿ ಮಾತ್ರ ರಾಹುಲ್ ಗಾಂಧಿ ಭಾಗವಹಿಸಿದ್ದರು. ಸ್ವತಃ ಅವರೇ ಗೈರುಹಾಜರಾಗಿ ನಂತರ ಸರ್ಕಾರ ಎಲ್ಲಾ ಕಾರ್ಯವಿಧಾನಗಳನ್ನು ದೂಷಿಸುತ್ತಾರೆ. ಸಭೆಯನ್ನೂ ಪ್ರತಿಭಟಿಸಿ ಹೊರನಡೆಯುತ್ತಾರೆ. ಸ್ಥಾಯಿ ಸಮಿತಿ ಪ್ರತಿಭಟನಾ ಸ್ಥಳವಲ್ಲ” ಎಂದು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

“ಸಭೆಗೆ ಗೈರಾಗುವುದು, ಅವರು ಚರ್ಚೆ ಮಾಡ ಬಯಸಿದ ವಿಷಯವನ್ನು ಬಹಿರಂಗಪಡಿಸದಿರುವುದು, ನಂತರ ‘ಪ್ರಮುಖ ವಿಷಯಗಳ’ ಚರ್ಚೆ ಮಾಡುತ್ತಿಲ್ಲ ಎಂದು ದೂಷಿಸುವುದು. ಇವು ಸಂಸತ್ತಿನ ಕಾರ್ಯವಿಧಾನಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ಮಾಡಿದ ಅವಮಾನ. ಈ ಮನೋಭಾವವನ್ನು ನಾವು ಖಂಡಿಸುತ್ತೇವೆ” ಎಂದು ಆರೋಪಿಸಿದರು.

ಸಭೆಯಲ್ಲಿ ಭೂ ಸೇನೆ, ಜಲಸೇನೆ ಮತ್ತು ವಾಯುಸೇನೆಯ ಸಮವಸ್ತ್ರದ ಬಗ್ಗೆ ಸಮಿತಿ ಚರ್ಚಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ, ಇದನ್ನು ಸಶಸ್ತ್ರ ಪಡೆಗಳ ಹಿರಿಯ ರಕ್ಷಣಾ ಅಧಿಕಾರಿಗಳು ನಿರ್ಧರಿಸಬಹುದು ಎಂದು ಹೇಳಿದ ನಂತರ ಎಲ್‌ಎಸಿ (ಲಡಾಖ್ ಗಡಿ)ಯಲ್ಲಿ ಹೋರಾಡುತ್ತಿರುವ ಸೈನಿಕರ ವಿಷಯವನ್ನು ಚರ್ಚಿಸಲು ಮುಂದಾದರು.

ಇದನ್ನೂ ಓದಿ: 189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ಈ ಸಮಯದಲ್ಲಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ಜುವಾಲ್ ಓರಮ್, ರಾಹುಲ್ ಗಾಂಧಿಯವರಿಗೆ ಮಾತನಾಡಲು ಅನುಮತಿಸಲಿಲ್ಲ ಹಾಗಾಗಿ ಅವರು ಸಭೆಯಿಂದ ಹೊರನಡೆದರು ಎಂದು ಮೂಲಗಳು ಮಾಹಿತಿ ನೀಡಿವೆ.

ರಾಹುಲ್ ಗಾಂಧಿ ಸಭೆಯನ್ನು ಸಮಯ ವ್ಯರ್ಥ ಎಂದು ಹೇಳಿ ಹೊರ ನಡೆಯುತ್ತಿದ್ದಂತೆ, ಅವರ ಹಿಂದೆಯೇ ಕಾಂಗ್ರೆಸ್ ಸದಸ್ಯ ರಾಜೀವ್ ಸತವ್ ಮತ್ತು ರೇವಂತ್ ರೆಡ್ಡಿ ಕೂಡ ಹೊರನಡೆದಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಶಾಲಾ ಪಠ್ಯಪುಸ್ತಕದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ರಮಕ್ಕೆ ಸೂಚಿಸಿದ ಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...