Homeಮುಖಪುಟಅಯೋಧ್ಯೆ: ಗಣರಾಜ್ಯೋತ್ಸವದಂದು ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು

ಅಯೋಧ್ಯೆ: ಗಣರಾಜ್ಯೋತ್ಸವದಂದು ಮಸೀದಿ ನಿರ್ಮಾಣಕ್ಕೆ ಅಡಿಗಲ್ಲು

ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆಮನೆ ಮತ್ತು ಗ್ರಂಥಾಲಯವನ್ನು ಒಳಗೊಂಡಿರುವ ಮಸೀದಿ ಸಂಕೀರ್ಣದ ನೀಲನಕ್ಷೆಯನ್ನು ಐಐಸಿಎಫ್ ಡಿಸೆಂಬರ್ 19 ರಂದು ಅನಾವರಣಗೊಳಿಸಲಿದೆ.

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನಂತೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಪರ್ಯಾಯವಾಗಿ ಮಸೀದಿಯ ನಿರ್ಮಾಣಕ್ಕೆ ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರ ನೀಡಿರುವ ಐದು ಎಕರೆ ಭೂಮಿಯಲ್ಲಿ ಮಸೀದಿಗೆ ಅಡಿಗಲ್ಲು ಹಾಕಲಾಗುವುದು ಎಂದು ಐಐಸಿಎಫ್ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.

ಮಸೀದಿಯ ನೀಲನಕ್ಷೆಯನ್ನು ಈ ಶನಿವಾರ (ಡಿ.19) ಅನಾವರಣಗೊಳಿಸಲಾಗುವುದು ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಮಾಹಿತಿ ನೀಡಿದೆ.

“ಏಳು ದಶಕಗಳ ಹಿಂದೆ ನಮ್ಮ ಸಂವಿಧಾನವು ಜಾರಿಗೆ ಬಂದಿದ್ದು ಅಯೋಧ್ಯೆ ಮಸೀದಿಗೆ ಅಡಿಪಾಯ ಹಾಕಲು ಟ್ರಸ್ಟ್ ಜನವರಿ 26 ರನ್ನು ಆಯ್ಕೆ ಮಾಡಿದೆ. ನಮ್ಮ ಸಂವಿಧಾನವು ಬಹುತ್ವವನ್ನು ಆಧರಿಸಿದೆ, ಇದು ನಮ್ಮ ಮಸೀದಿ ಯೋಜನೆಯ ಪ್ರಮುಖ ಅಂಶವಾಗಿದೆ ”ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಕಾರ್ಯದರ್ಶಿ ಅಥರ್ ಹುಸೇನ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಮಸೀದಿ ನಿರ್ಮಿಸಲು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಅನ್ನು ಆರು ತಿಂಗಳ ಹಿಂದೆ ಸುನ್ನಿ ವಕ್ಫ್ ಬೋರ್ಡ್ ಸ್ಥಾಪಿಸಿತ್ತು.

ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆಮನೆ ಮತ್ತು ಗ್ರಂಥಾಲಯವನ್ನು ಒಳಗೊಂಡಿರುವ ಮಸೀದಿ ಸಂಕೀರ್ಣದ ನೀಲನಕ್ಷೆಯನ್ನು ಐಐಸಿಎಫ್ ಡಿಸೆಂಬರ್ 19 ರಂದು ಅನಾವರಣಗೊಳಿಸಲಿದೆ. ಈ ಮಸೀದಿ ನಿರ್ಮಾಣದ ಯೋಜನೆಯನ್ನು ಅದರ ಮುಖ್ಯ ವಾಸ್ತುಶಿಲ್ಪಿ ಪ್ರೊಫೆಸರ್ ಎಸ್.ಎಂ.ಅಖ್ತರ್ ಈಗಾಗಲೇ ಅಂತಿಮಗೊಳಿಸಿದ್ದಾರೆ.

“ಹೊಸ ಮಸೀದಿಯಲ್ಲಿ ಒಂದು ಬಾರಿಗೆ 2,000 ಜನರು ನಮಾಜ್ ಮಾಡಬಹುದು. ಮಸೀದಿಯ ರಚನೆಯು ವೃತ್ತಾಕಾರದಲ್ಲಿರುತ್ತದೆ” ಎಂದು ಅಖ್ತರ್ ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂಕೋರ್ಟ್ ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ-ಬಾಬರಿ ಮಸೀದಿ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಾಂದಿ ಹಾಡಿತ್ತು. ಬಾಬರಿ ಮಸೀದಿ ಪರವಿದ್ದ ಸುನ್ನಿ ವಕ್ಫ್ ಬೋರ್ಡ್‌ಗೆ ಕಟ್ಟಡ ನಿರ್ಮಿಸಲು ಪರ್ಯಾಯವಾಗಿ ಐದು ಎಕರೆ ಜಾಗವನ್ನು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತು.

ಸದ್ಯ ಅಯೋಧ್ಯೆಯ ಸೊಹವಾಲ್ ತಹಸಿಲ್‌ನ ಧನ್ನಿಪುರ ಗ್ರಾಮದಲ್ಲಿ ರಾಜ್ಯ ಸರ್ಕಾರವು ಐದು ಎಕರೆ ಭೂಮಿಯನ್ನು ಮಸೀದಿಗಾಗಿ ಮಂಜೂರು ಮಾಡಿದೆ.

“ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. ಕಟ್ಟಡದಲ್ಲಿ ಆಸ್ಪತ್ರೆಯು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇಸ್ಲಾಂ ಧರ್ಮದ ನಿಜವಾದ ಮಾನವೀಯತೆಯ ಸೇವೆ ಸಲ್ಲಿಸುತ್ತದೆ ”ಎಂದು ಅಖ್ತರ್ ಹೇಳಿದ್ದಾರೆ.


ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...