Homeಮುಖಪುಟನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

ನಡ್ಡಾ ಕಾರಿಗೆ ಕಲ್ಲು ಪ್ರಕರಣ: 3 ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಮಾಡಿದ ಕೇಂದ್ರ

ಪಶ್ಚಿಮ ಬಂಗಾಳವು ವಿಸ್ತರಣಾವಾದಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ಮುಂದೆ ಎಂದಿಗೂ ತಲೆ ಬಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪಶ್ಚಿಮ ಬಂಗಾಳ ಮತ್ತು ಕೇಂದ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮತ್ತಷ್ಟು ತೀವ್ರವಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂದು 2 ಬಾರಿ ನೋಟಿಸ್ ನೀಡಿತ್ತು. ಈಗ ಮೂವರು ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಆದರೆ, ಪಶ್ಚಿಮ ಬಂಗಳ ಸರ್ಕಾರ ಯಾವುದೇ ಅಧಿಕಾರಿ ದೆಹಲಿಗೆ ತೆರಳಿ ಗೃಹ ಸಚಿವಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಈಗ ಮತ್ತೆ ಗೃಹ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಡಿಜಿಪಿಗೆ ಹೊಸ ಪತ್ರವನ್ನು ಕಳುಹಿಸಿದ್ದು,  ಅವರು ನಿಯಮಗಳನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದಿದೆ. ಜೊತೆಗೆ ಐಪಿಎಸ್ ಕೇಡರ್ ನಿಯಮಗಳ ಸೆಕ್ಷನ್ 6 (1) ಪ್ರಕಾರ – “ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ , ಕೇಂದ್ರದ ನಿರ್ಧಾರವು ಮೇಲುಗೈ ಸಾಧಿಸುತ್ತದೆ” ಎಂಬ ಎಚ್ಚರಿಕೆ ನೀಡಿದೆ.

ಜೊತೆಗೆ ಐಪಿಎಸ್​ ಅಧಿಕಾರಿಗಳನ್ನ ಕೇಂದ್ರ ಸರ್ಕಾರ ದೆಹಲಿಗೆ ವರ್ಗಾವಣೆ ಮಾಡಿದೆ. ರಾಜೀವ್ ಮಿಶ್ರಾ ಮತ್ತು ಪ್ರವೀಣ್ ತ್ರಿಪಾಠಿ ಎಂಬುವರಿಗೆ 5 ವರ್ಷಗಳ ಕಾಲಾವಧಿಗೆ, ಭೋಲನಾಥ್ ಪಾಂಡೆಯವರಿಗೆ 4 ವರ್ಷಗಳ ಕಾಲಾವಧಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಇದಕ್ಕೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರ್ಬಳಕೆಯಾಗಿದೆ ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಮಮತಾ ಬ್ಯಾನರ್ಜಿ, “ರಾಜ್ಯದ ಆಕ್ಷೇಪಣೆಯ ಹೊರತಾಗಿಯೂ ಪಶ್ಚಿಮ ಬಂಗಾಳದಲ್ಲಿ 3 ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿಗಳಿಗೆ ಕೇಂದ್ರದ ಡೆಪ್ಯುಟೇಷನ್‌ನ ಆದೇಶವು ಅಧಿಕಾರ ಮತ್ತು ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರುಪಯೋಗವಾಗಿದೆ.” ಎಂದು ಕಿಡಿಕಾರಿದ್ದಾರೆ.

’ಪ್ರಾಕ್ಸಿ ಮೂಲಕ ರಾಜ್ಯ ಆಡಳಿತಯಂತ್ರ ನಿಯಂತ್ರಿಸಲು ಕೇಂದ್ರದ ಈ ಲಜ್ಜೆಗೆಟ್ಟ ಪ್ರಯತ್ನವನ್ನು ನಾವು ಅನುಮತಿಸುವುದಿಲ್ಲ ಎಂದಿದ್ದಾರೆ. ಪಶ್ಚಿಮ ಬಂಗಾಳವು ವಿಸ್ತರಣಾವಾದಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳ ಮುಂದೆ ಎಂದಿಗೂ ತಲೆ ಬಾಗುವುದಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ…

 

ಈಗಾಗಲೇ 3 ಐಪಿಎಸ್ ಅಧಿಕಾರಿಗಳಿಗೆ, ಬಿಪಿಆರ್‌ಡಿ ಎಸ್‌ಪಿ ಆಗಿ ಭೋಲನಾಥ್ ಪಾಂಡೆ, ಎಸ್‌ಎಸ್‌ಬಿ ಡಿಐಜಿಯಾಗಿ ಪ್ರವೀಣ್ ತ್ರಿಪಾಠಿ, ಐಟಿಬಿಪಿ ಐಜಿಯಾಗಿ ರಾಜೀವ್ ಮಿಶ್ರಾ ಅವರಿಗೆ ವರ್ಗಾವಣೆ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈಗಾಗಲೇ ಘಟನೆ ಸಂಬಂಧ ಕೇಂದ್ರಕ್ಕೆ ವರದಿ ಸಲ್ಲಿಸಿರುವ ಬಂಗಾಳ ಸರ್ಕಾರ, ’ಜೆ.ಪಿ ನಡ್ಡಾ ಅವರಿಗೆ ಝಡ್‌ ಕ್ಯಾಟಗರಿ ಭದ್ರತೆ, ಬುಲೆಟ್‌ಫ್ರೂಫ್ ಕಾರ್, ಬೆಂಗಾವಲು ಮತ್ತು ಭದ್ರತಾ ಅಧಿಕಾರಿಗಳನ್ನೂ ನೇಮಕ ಮಾಡಲಾಗಿತ್ತು. ಅವರು ಚಲಿಸುವ ಮಾರ್ಗದಲ್ಲಿ 4 ಎಸ್ಪಿಗಳು, 8 ಡೆಪ್ಯೂಟಿ ಎಸ್ಪಿಗಳು, 14 ಇನ್ಸ್ಪೆಕ್ಟರ್‌ಗಳು, 70 ಸಬ್ಇನ್ಸ್ಪೆಕ್ಟರ್‌‌ಗಳು, 40 ಆರ್‌‌ಎಎಫ್ ಸಿಬ್ಬಂದಿ, 259 ಕಾನ್ಸ್ಟೆಬಲ್‌‌ಗಳು ಮತ್ತು 350 ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಭದ್ರತೆಯ ಮೇಲ್ವಿಚಾರಣೆಗೆ ಡಿಐಜಿಯನ್ನು ನಿಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜೆ.ಪಿ ನಡ್ಡಾ ವಾಹನಗಳ ಜೊತೆಗೆ ಇತರೆ ವಾಹನಗಳನ್ನೂ ನಿಯೋಜಿಸಿದ ಕಾರಣ ಪರಿಸ್ಥಿತಿ ಬಿಗಡಾಯಿಸಿತು’ ಎಂದು ತಿಳಿಸಿದೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...