Homeಮುಖಪುಟಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಅದಾನಿ ಗ್ರೂಪ್ಸ್‌ನ ರಹಸ್ಯ ಕಾರ್ಯಾಚರಣೆಗಳ ಕುರಿತು ಅನ್ವೇಷಣೆ ಮಾಡಿದ ಇವರು ಈಗ ಐಸಿಯುನಲ್ಲಿದ್ದಾರೆ. ಇವರ ಮೇಲೆ ಕಬ್ಬಿಣದ ರಾಡ್ ಮತ್ತು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ.

- Advertisement -
- Advertisement -

“ಅದಾನಿ ಕಂಪನಿಯು ನೂರಾರು ಎಕರೆ ಭೂಮಿಯನ್ನು ಖರೀದಿಸಿ, ಅಲ್ಲಿ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸಲು ಕೋಲ್ಡ್‌ ಸ್ಟೋರೇಜ್ ಮತ್ತು ಮೂಲ ಸೌಕರ್ಯಗಳನ್ನು ನಿರ್ಮಿಸಿದೆ” ಎಂಬ ವಿಷಯವನ್ನು ಬಹಿರಂಗಪಡಿಸಿದ ‘IBN24’ನ ಪತ್ರಕರ್ತ ಆಕರ್ಷನ್ ಉಪ್ಪಲ್ ಮೇಲೆ ಹರಿಯಾಣದಲ್ಲಿ ಇತ್ತೀಚೆಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಹೊಸ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೊದಲು ನೂರಾರು ಎಕರೆ ಭೂಮಿಯನ್ನು ಖರೀದಿಸಿರುವ ಅದಾನಿ ಗುಂಪಿನ ರಹಸ್ಯ ಮಾರ್ಗಗಳನ್ನು ಪತ್ರಕರ್ತ ಆಕರ್ಷನ್ ಉಪ್ಪಲ್ ಬಹಿರಂಗಪಡಿಸಿದ್ದರು. ಕೇಂದ್ರ ಸರ್ಕಾರ ಈಗ ಜಾರಿಗೆ ತಂದಿರುವ ಕೃಷಿ ಕಾನೂನುಗಳು ನಿಜಕ್ಕೂ ಅಂಬಾನಿ-ಅದಾನಿಯ ಪರವಾಗಿವೆ ಎಂಬುದಕ್ಕೆ ಇದು ಬಲವಾದ ಸಾಕ್ಷ್ಯವಾಗಿತ್ತು. ಈ ಸಾಕ್ಷ್ಯವನ್ನು ಬಹಿರಂಗಪಡಿಸಿದ ಪತ್ರಕರ್ತನ ಮೇಲೆ ಹರಿಯಾಣದ ಕರ್ನಾಲ್‌ನಲ್ಲಿ ಅಪರಿಚಿತರು ಹಲ್ಲೆ ನಡೆಸಿದ್ದು, ಪ್ರಸ್ತುತ ಪತ್ರಕರ್ತರ ಸ್ಥಿತಿ ಗಂಭೀರವಾಗಿದೆ ಎಂದು ಇನ್‌ಫೀಡ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ವಿರೋಧಿ ಶಾಸನಗಳು ಮತ್ತು ಬಿಜೆಪಿಯ ಹತ್ತು ಸುಳ್ಳುಗಳು: ಶಿವಸುಂದರ್

ಅದಾನಿ ಗ್ರೂಪ್ಸ್‌ನ ರಹಸ್ಯ ಕಾರ್ಯಾಚರಣೆಗಳ ಕುರಿತು ಅನ್ವೇಷಣೆ ಮಾಡಿದ ಇವರು ಈಗ ಐಸಿಯುನಲ್ಲಿದ್ದಾರೆ. ಇವರ ಮೇಲೆ ಕಬ್ಬಿಣದ ರಾಡ್ ಮತ್ತು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ. ಇದರಿಂದ ತಲೆಗೆ ತೀವ್ರವಾದ ಪೆಟ್ಟಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, “ಪತ್ರಕರ್ತನನ್ನು ಕೊಲ್ಲುವ ಸಲುವಾಗಿ ಕಾಲುವೆಗೆ ಎಸೆಯಲು ಪ್ರಯತ್ನಿಸಿದರು. ಆದರೆ ಜನಸಮೂಹ ಸೇರುತ್ತಿದ್ದಂತೆ ಹಲ್ಲೆಕೋರರು ಓಡಿಹೋದರು” ಎಂದು ಹಲವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ಸುರೇಖ ಗುಪ್ತ ಎಂಬುವವರು ಟ್ವೀಟ್ ಮಾಡಿ, “ಹರಿಯಾಣದ ಕರ್ನಾಲ್‌ನ ಪತ್ರಕರ್ತರಾದ ಆಕರ್ಷ್‌ ಉಪ್ಪಲ್ ಎಂಬುವವರು 2 ದಿನಗಳ ಹಿಂದೆ, ಅದಾನಿ ಗ್ರೂಪ್ 100 ಎಕರೆ ಭೂಮಿಯನ್ನು ಖರೀದಿಸಿದ್ದು, ಇಲ್ಲಿ 4 ಕೃಷಿ ಉತ್ಪನ್ನಗಳ ಗೋದಾಮುಗಳನ್ನು ನಿರ್ಮಿಸಲಾಗುತ್ತಿದೆ. ಅದಾನಿಯ ಸೈಟ್‌ವರೆಗೆ ರೈಲ್ವೆ ಮಾರ್ಗವನ್ನು ನಿರ್ಮಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿದ್ದರು. ಈಗ ಅವರು ಕ್ರೂರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ರೈತ ಹೋರಾಟವನ್ನು ಹತ್ತಿಕ್ಕಲು ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷ ಹರಡಲು ಪ್ರಯತ್ನ – ಸುಖ್‌ಬೀರ್ ಸಿಂಗ್

ಈ ಕೃಷಿ ಕಾನೂನುಗಳು ನೇರವಾಗಿ ಕಾರ್ಪೊರೇಟ್‌ಗಳಿಗೆ ಸಹಕಾರಿಯಾಗಿವೆ ಎಂಬುದನ್ನು ದೇಶದಾದ್ಯಂತ ಇರುವ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಕೇಂದ್ರ ಸರ್ಕಾರ ಇದನ್ನು ತಿರಸ್ಕರಿಸುತ್ತಲೇ ಇತ್ತು. ಜೊತೆಗೆ ಇದನ್ನು ವಿರೋಧ ಪಕ್ಷಗಳ ರಾಜಕೀಯ ಕುತಂತ್ರ ಎಂದು ಬಿಂಬಿಸುತ್ತಿದೆ.


ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...