Homeಮುಖಪುಟಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಅದಾನಿ ಗ್ರೂಪ್ಸ್‌ನ ರಹಸ್ಯ ಕಾರ್ಯಾಚರಣೆಗಳ ಕುರಿತು ಅನ್ವೇಷಣೆ ಮಾಡಿದ ಇವರು ಈಗ ಐಸಿಯುನಲ್ಲಿದ್ದಾರೆ. ಇವರ ಮೇಲೆ ಕಬ್ಬಿಣದ ರಾಡ್ ಮತ್ತು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ.

- Advertisement -
- Advertisement -

“ಅದಾನಿ ಕಂಪನಿಯು ನೂರಾರು ಎಕರೆ ಭೂಮಿಯನ್ನು ಖರೀದಿಸಿ, ಅಲ್ಲಿ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸಲು ಕೋಲ್ಡ್‌ ಸ್ಟೋರೇಜ್ ಮತ್ತು ಮೂಲ ಸೌಕರ್ಯಗಳನ್ನು ನಿರ್ಮಿಸಿದೆ” ಎಂಬ ವಿಷಯವನ್ನು ಬಹಿರಂಗಪಡಿಸಿದ ‘IBN24’ನ ಪತ್ರಕರ್ತ ಆಕರ್ಷನ್ ಉಪ್ಪಲ್ ಮೇಲೆ ಹರಿಯಾಣದಲ್ಲಿ ಇತ್ತೀಚೆಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಹೊಸ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೊದಲು ನೂರಾರು ಎಕರೆ ಭೂಮಿಯನ್ನು ಖರೀದಿಸಿರುವ ಅದಾನಿ ಗುಂಪಿನ ರಹಸ್ಯ ಮಾರ್ಗಗಳನ್ನು ಪತ್ರಕರ್ತ ಆಕರ್ಷನ್ ಉಪ್ಪಲ್ ಬಹಿರಂಗಪಡಿಸಿದ್ದರು. ಕೇಂದ್ರ ಸರ್ಕಾರ ಈಗ ಜಾರಿಗೆ ತಂದಿರುವ ಕೃಷಿ ಕಾನೂನುಗಳು ನಿಜಕ್ಕೂ ಅಂಬಾನಿ-ಅದಾನಿಯ ಪರವಾಗಿವೆ ಎಂಬುದಕ್ಕೆ ಇದು ಬಲವಾದ ಸಾಕ್ಷ್ಯವಾಗಿತ್ತು. ಈ ಸಾಕ್ಷ್ಯವನ್ನು ಬಹಿರಂಗಪಡಿಸಿದ ಪತ್ರಕರ್ತನ ಮೇಲೆ ಹರಿಯಾಣದ ಕರ್ನಾಲ್‌ನಲ್ಲಿ ಅಪರಿಚಿತರು ಹಲ್ಲೆ ನಡೆಸಿದ್ದು, ಪ್ರಸ್ತುತ ಪತ್ರಕರ್ತರ ಸ್ಥಿತಿ ಗಂಭೀರವಾಗಿದೆ ಎಂದು ಇನ್‌ಫೀಡ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ವಿರೋಧಿ ಶಾಸನಗಳು ಮತ್ತು ಬಿಜೆಪಿಯ ಹತ್ತು ಸುಳ್ಳುಗಳು: ಶಿವಸುಂದರ್

ಅದಾನಿ ಗ್ರೂಪ್ಸ್‌ನ ರಹಸ್ಯ ಕಾರ್ಯಾಚರಣೆಗಳ ಕುರಿತು ಅನ್ವೇಷಣೆ ಮಾಡಿದ ಇವರು ಈಗ ಐಸಿಯುನಲ್ಲಿದ್ದಾರೆ. ಇವರ ಮೇಲೆ ಕಬ್ಬಿಣದ ರಾಡ್ ಮತ್ತು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದೆ. ಇದರಿಂದ ತಲೆಗೆ ತೀವ್ರವಾದ ಪೆಟ್ಟಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, “ಪತ್ರಕರ್ತನನ್ನು ಕೊಲ್ಲುವ ಸಲುವಾಗಿ ಕಾಲುವೆಗೆ ಎಸೆಯಲು ಪ್ರಯತ್ನಿಸಿದರು. ಆದರೆ ಜನಸಮೂಹ ಸೇರುತ್ತಿದ್ದಂತೆ ಹಲ್ಲೆಕೋರರು ಓಡಿಹೋದರು” ಎಂದು ಹಲವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

ಸುರೇಖ ಗುಪ್ತ ಎಂಬುವವರು ಟ್ವೀಟ್ ಮಾಡಿ, “ಹರಿಯಾಣದ ಕರ್ನಾಲ್‌ನ ಪತ್ರಕರ್ತರಾದ ಆಕರ್ಷ್‌ ಉಪ್ಪಲ್ ಎಂಬುವವರು 2 ದಿನಗಳ ಹಿಂದೆ, ಅದಾನಿ ಗ್ರೂಪ್ 100 ಎಕರೆ ಭೂಮಿಯನ್ನು ಖರೀದಿಸಿದ್ದು, ಇಲ್ಲಿ 4 ಕೃಷಿ ಉತ್ಪನ್ನಗಳ ಗೋದಾಮುಗಳನ್ನು ನಿರ್ಮಿಸಲಾಗುತ್ತಿದೆ. ಅದಾನಿಯ ಸೈಟ್‌ವರೆಗೆ ರೈಲ್ವೆ ಮಾರ್ಗವನ್ನು ನಿರ್ಮಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿದ್ದರು. ಈಗ ಅವರು ಕ್ರೂರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ರೈತ ಹೋರಾಟವನ್ನು ಹತ್ತಿಕ್ಕಲು ಹಿಂದೂ-ಸಿಖ್ಖರ ನಡುವೆ ಕೋಮುದ್ವೇಷ ಹರಡಲು ಪ್ರಯತ್ನ – ಸುಖ್‌ಬೀರ್ ಸಿಂಗ್

ಈ ಕೃಷಿ ಕಾನೂನುಗಳು ನೇರವಾಗಿ ಕಾರ್ಪೊರೇಟ್‌ಗಳಿಗೆ ಸಹಕಾರಿಯಾಗಿವೆ ಎಂಬುದನ್ನು ದೇಶದಾದ್ಯಂತ ಇರುವ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಕೇಂದ್ರ ಸರ್ಕಾರ ಇದನ್ನು ತಿರಸ್ಕರಿಸುತ್ತಲೇ ಇತ್ತು. ಜೊತೆಗೆ ಇದನ್ನು ವಿರೋಧ ಪಕ್ಷಗಳ ರಾಜಕೀಯ ಕುತಂತ್ರ ಎಂದು ಬಿಂಬಿಸುತ್ತಿದೆ.


ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...