Homeಮುಖಪುಟನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

ನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

- Advertisement -
- Advertisement -

ನಾನು ಹಿಂದಿಯಲ್ಲಿ ಮಾತನಾಡಲು ಅನುಮತಿ ಕೇಳುತ್ತಿದ್ದೇನೆ.

ನಾವೆಲ್ಲರೂ 2019ರ ಚುನಾವಣೆಯ ಮಿಷನ್ ಬಗ್ಗೆ ಬಹಳ ಮಾತಾಡುತ್ತಿದ್ದೇವೆ. ಆದರೆ, 2019ರ ಚುನಾವಣೆಯಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವಷ್ಟಕ್ಕೆ ನಮ್ಮ ಮಿಷನ್ ಕೊನೆಯಾಗುವುದಿಲ್ಲ. ಇಂದು ಬಿಡುಗಡೆಯಾದ ರಿಕ್ಲೈಮಿಂಗ್ ರಿಪಬ್ಲಿಕ್ ಅನ್ನು ಜಾರಿಗೊಳಿಸುವುದು ಬಹಳ ಮುಖ್ಯ. ಯಾರೇ ಅಧಿಕಾರಕ್ಕೆ ಬಂದರೂ. ಇವೇ ಇಂದಿನ ಚುನಾವಣೆಯಲ್ಲಿ ಪ್ರಮುಖ ಚರ್ಚೆಯಾಗಬೇಕಿತ್ತು. ಆದರೆ ಚರ್ಚೆ ಯಾವುದು ನಡೆಯುತ್ತಿದೆ?

ಮೋದಿ ಎದುರು ಯಾರು ಎಂಬುದು ಇಲ್ಲಿನ ಮುಖ್ಯ ಚರ್ಚೆಯಾಗಿಬಿಟ್ಟಿದೆ. ಹೇಗೋ ಮಾಡಿ ಈ ಚುನಾವಣೆಯನ್ನು ಮೋದಿ ವರ್ಸಸ್ ರಾಹುಲ್ ಗಾಂಧೀ ಮಾಡುತ್ತಿದ್ದಾರೆ. ಇದು ಇಬ್ಬರ ನಡುವಿನ ಪರ್ಸನಾಲಿಟಿ ಕಂಟೆಸ್ಟ್ ಮಾಡುವಂತಹ ಫ್ಯಾಶನ್ ಶೋ ಅಲ್ಲ. ಇದು ಭಗತ್ ಸಿಂಗ್ ಮತ್ತು ಸಾವರ್ಕರ್ ನಡುವಿನ, ಅಂಬೇಡ್ಕರ್ ಮತ್ತು ಗೋಲ್ವಾಳ್ಕರ್ ನಡುವಿನ ಸಂಘರ್ಷ.

ಮೋದಿಯಿದ್ದರೆ ಸಾಧ್ಯ ಎಂಬ ಒಂದು ಘೋಷಣೆಯಡಿ ಪ್ರಚಾರ ನಡೆಯುತ್ತಿದೆ. ಹೌದು, ಈ 5 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಏನೇನಾಗಿದೆಯೋ ಅದು ಎಂದೂ ಹಿಂದೆ ಆಗಿರಲಿಲ್ಲ. ಬಾಬಾಸಾಹೇಬರು ನಮಗೆ ಕೊಟ್ಟ ಸಂವಿಧಾನವನ್ನು ಸಮಾನ ಗಣತಂತ್ರವಾಗಿ ಈ ದೇಶ ಇರಬೇಕೆಂದು ಹೇಳುವ ಸಂವಿಧಾನವನ್ನು ಸಂಸತ್ತಿನಿಂಧ ಕೇವಲ 2 ಕಿಮೀ ದೂರದ ಜಾಗದಲ್ಲಿ 9 ಆಗಸ್ಟ್ 2018ರಂದು ಸುಟ್ಟು ಹಾಕಲಾಯಿತು. ಅವರುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ, ಅವರ ಬಗ್ಗೆ ಯಾವುದೇ ಟಿವಿ ಚರ್ಚೆ ಮಾಡಲಿಲ್ಲ. ಏಕೆ? ಏಕೆಂದರೆ ದೇಶವನ್ನು ಆಳುವವರಿಗೆ ಬೇಕಾಗಿದ್ದನ್ನೇ ಅವರು ಮಾಡಿದ್ದರು.

ಆಸಿಫಾ ಎಂಬ 9 ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ-ಕೊಲೆ ನಡೆದಾಗ ಆ ಪ್ರಕರಣದ ಆರೋಪಿಗಳ ಪರವಾಗಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ಮಾಡಲಾಯಿತು. ಮುಸ್ಲಿಮರನ್ನು ಬೀದಿಗಳಲ್ಲಿ ಸಿಗಿದು ಕೊಂದ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ನಂತರ ಹಾರ ಹಾಕಿ ಅಭಿನಂದಿಸಲು ಒಬ್ಬ ಯೂನಿಯನ್ ಮಿನಿಸ್ಟರ್ ಹೋಗಿದ್ದರು.

ಇದೆಲ್ಲ ಈ ಹಿಂದೆ ಎಂದೂ ನಡೆದಿರಲಿಲ್ಲ. ಮಧ್ಯರಾತ್ರಿ ನೋಟು ರದ್ಧತಿ ಘೋಷಣೆಯಾಗಿ, ಜನರ ಬದುಕನ್ನು ಹಿಂಡಿ ಹಿಪ್ಪೆ ಮಾಡಿದ್ದು. ಹೌದು ನಾವೂ ಹೇಳುತ್ತೇವೆ ಇದು ಮೋದಿ ಇಲ್ಲದಿದ್ದರೆ ನಡೆಯುತ್ತಿರಲಿಲ್ಲ.

ನೀರವ್ ಮೋದಿ, ಮಲ್ಯ ಮೊದಲಾದ ಎಲ್ಲರೂ ಕದ್ದ ದುಡ್ಡು ಹೊತ್ತು ದೇಶ ಬಿಟ್ಟು ಓಡಿಹೋಗಲು ಅವಕಾಶವಾಗುವಂತಹ ಪರಿಸ್ಥಿತಿ ಸೃಷ್ಟಿಸಲಾಯಿತು. ನೀರವ್ ಮೋದಿ ಕೊನೆಯ ಸಲ ಬಹಿರಂಗವಾಗಿ ಕಾಣಿಸಿಕೊಂಡಿದ್ದು ನರೇಂದ್ರ ಮೋದಿಯವರ ಜೊತೆ ದಾವೂಸ್‍ನಲ್ಲಿ. ಮೋದಿಯವರು ಚೌಕಿದಾರರಲ್ಲ, ಅಂಬಾನಿಯ ನಂಬಿಕಸ್ಥ ಮತ್ತು ದೇಶವನ್ನು ಮಾರುವ ಗುತ್ತಿಗೆದಾರ.

ಈ ದೇಶದಲ್ಲಿ 12000 ರೈತರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಮಂತ್ರಿ, ಮೀಡಿಯಾ ಯಾರೂ ಮಾತಾಡದಿದ್ದಾಗ ನಾವು ಅದರ ಬಗ್ಗೆ ಮಾತಾಡಬೇಕು. ಆಹಾರದ ಹಕ್ಕಿನ ಬಗ್ಗೆ ಮಾತಾಡುವುದೂ ಬಹಳ ಮುಖ್ಯ. ಅದನ್ನು ಮಾಡುತ್ತಿದ್ದ ದೊಡ್ಡ ಅರ್ಥಶಾಸ್ತ್ರಜ್ಞ ಜಾನ್ ಡ್ರೀಜ್óರನ್ನು ಜಾರ್ಖಂಡ್‍ನಲ್ಲಿ ಮೊನ್ನೆ ಬಂಧಿಸಲಾಯಿತು, ಪ್ರತಿವರ್ಷ 3000 ಮಕ್ಕಳು ಹಸಿವಿನಿಂದ ಸಾಯುವ ಈ ದೇಶದಲ್ಲಿ ಅದು ಚುನಾವಣೆಯ ಇಶ್ಯೂ ಅಲ್ಲದಿದ್ದರೆ ಇನ್ನು ಯವುದು?

ಪ್ರತಿ ವರ್ಷ ಮ್ಯಾನ್‍ಹೋಲ್‍ನಲ್ಲಿ ಸಾಯುವ ದಲಿತರಿಗಾಗಿ ಒಂದೇ ಒಂದು ರೂಪಾಯಿ ಸಮಾಜ ಕಲ್ಯಾಣ ಇಲಾಖೆ ಖರ್ಚು ಮಾಡಿಲ್ಲ. ಇದು ಇಶ್ಯೂ ಅಲ್ಲದಿದ್ದರೆ ಇನ್ಯಾವುದು?

ನೀವು ಚುನಾವಣಾ ಬಾಂಡ್ ಮತ್ತು ನೋಟುರದ್ದತಿ ಜಿಎಸ್‍ಟಿಯನ್ನು ಜೊತೆಗೆ ಸೇರಿಸಿ ನೋಡಿ. ದೊಡ್ಡ ಬಂಡವಾಳಿಗರಾದ ಅಂಬಾನಿಯಂತಹವರ ಲಾಭದಲ್ಲಿ ಭಾರಿ ಹೆಚ್ಚಳವಾಗಿದೆ. ಅಂದರೆ ಇದು ಸಣ್ಣ ಮೀನುಗಳನ್ನು ದೊಡ್ಡ ಮೀನುಗಳು ನುಂಗಲು ಮಾಡಿರುವ ಅವಕಾಶ.

ಸಾವಿರಾರು ಕೋಟಿಯಷ್ಟು ಹಣ ಚುನಾವಣೆಗೆ ಖರ್ಚಾಗುತ್ತದೆಂದರೆ, ಯಾರ ಬಳಿ ತೋಳ್ಬಲ, ಹಣಬಲ ಇಲ್ಲವೋ ಅವರು ಚುನಾವಣೆಯಲ್ಲಿ ಲೆಕ್ಕಕ್ಕಿಲ್ಲ. ಇದರಿಂದ ನಮ್ಮ ಪ್ರಜಾತಂತ್ರ ನಾಶವಾಗುತ್ತದೆ.

ಅಮಿತ್ ಶಾ ನಾಮಪತ್ರ ಹಾಕಿದಾಗ ಅವರ ಆಸ್ತಿಯ ಪ್ರಮಾಣ ಎಷ್ಟು ಹೆಚ್ಚಳವಾಗಿದೆ ಎಂಬುದು ಗೊತ್ತಾಗಿದೆ. ಅವರ ಮಗನ ಆದಾಯ ಸಾವಿರಾರು ಪಟ್ಟು ಹೆಚ್ಚಾಗಿದೆ. ಆದರೆ, ಕಳೆದ 45 ವರ್ಷಗಳಲ್ಲಿ ಎಂದೂ ಇಲ್ಲದಷ್ಟು ನಿರುದ್ಯೋಗ ಸೃಷ್ಟಿಯಾಗಿದೆ. 24 ಲಕ್ಷ ಖಾಲಿ ಹುದ್ದೆಗಳ್ನು ಕೇಂದ್ರ ಸರ್ಕಾರ ತುಂಬದೆ ಖಾಲಿ ಬಿಟ್ಟಿದೆ. 2014ರಲ್ಲಿ ಇಂಡಿಯಾ ಫಸ್ಟ್ ಎಂಬ ಚುನಾವಣಾ ಘೋಷಣೆ ನೀಡಲಾಗಿತ್ತು. ಈಗ ಸ್ವಲ್ಪ ಸತ್ಯ ಹೇಳಿ, ಅಂಬಾನಿ ಮತ್ತು ಅದಾನಿ ಫಸ್ಟ್, ಇಂಡಿಯಾ ಲಾಸ್ಟ್ ಎಂದು.

ಹರಿಯಾಣಾದ ಗುರ್‍ಗಾಂವ್‍ನಲ್ಲಿ ಒಂದು ಕುಟುಂಬದ ಮನೆಗೆ ನುಗ್ಗಿ ಭಯಂಕರವಾಗಿ ಥಳಿಸಿದರು. ಅವರನ್ನು ಭೇಟಿಯಾದಾಗ ನಾನು ನೋಡಿದೆ. ಅವರಿಗೆ ಹಲವೆಡೆ ಮೂಳೆಮುರಿತಗಳಾಗಿವೆ. ಭಯ ಆತಂಕ ಹುಟ್ಟಿದೆ. ಆದರೆ ಅವರ ಮೇಲೆಯೇ ಕೊಲೆಯತ್ನ ಕೇಸ್ ಹಾಕಲಾಗಿದೆ. ಅಖ್ಲಾಕ್, ಪಹ್ಲೂಖಾನ್ ಎಲ್ಲರ ಪೆಕರಣದಲ್ಲೂ ಸತ್ತವರ ಕುಟುಂಬದವರ ಮೇಲೆಯೇ ಪ್ರಕರಣ ದಾಖಲಾಗಿದೆ.

ಇದು ಒಂದಿಡೀ ಸಮುದಾಯದಲ್ಲಿ ಭೀತಿ ಹುಟ್ಟಿಸಿ ಹಿಂದೆ ತಳ್ಳುವ ಆರೆಸ್ಸೆಸ್‍ನ ಹಳೆಯ ಕುತಂತ್ರ. ಸಾಚಾರ್ ಸಮಿತಿ ವರದಿ ಹೇಳುತ್ತದೆ. ಶಿಕ್ಷಣದಲ್ಲಿ, ಉದ್ಯೋಗದಲ್ಲಿ, ರೈಲ್ವೇಸ್‍ಲ್ಲಿ, ಸೈನ್ಯದಲ್ಲಿ ಎಲ್ಲೂ ಮುಸ್ಲಿಮರಿಲ್ಲ. ಒಂದೇ ಸ್ಥಳದಲ್ಲಿ ಅವರು ತಮ್ಮ ಜನಸಂಖ್ಯೆಗಿಂತ ಹೆಚ್ಚು ಸರಾಸರಿಯಲ್ಲಿದ್ದಾರೆ, ಅದು ಭಾರತದ ಜೈಲುಗಳಲ್ಲಿ! ಈ ಸಮುದಾಯವು ಇಂದು ಇವೇನನ್ನೂ ಕೇಳುವ ಹಾಗಿಲ್ಲ. ನಮ್ಮ ವಿರುದ್ಧ ಗಲಭೆ ಮಾಡಬೇಡಿ, ರಕ್ಷಣೆ ಕೊಡಿ ಎಂದು ಕೇಳಿಕೊಳ್ಳಬೇಕಾಗಿದೆ.

ಯಾವ ಸಂಘಟನೆ ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಅವರಿಗೆ ಕ್ಷಮಾಪಣೆ ಪತ್ರ ಬರೆದು ಕಾಲಕಳೆಯಿತೋ ಅವರ ಇಂದು ದೇಶಪ್ರೇಮದ ಗುತ್ತಿಗೆ ಹಿಡಿದಿದ್ದಾರೆ. ಹೀಗೆ ಹೇಗೆ ಆಯಿತು? ಹೇಗೆಂದರೆ 2014ರಿಗಿಂತ ಹಿಂದೆಯೇ ಪ್ರಜಾತಂತ್ರ ದುರ್ಬಲಗೊಳ್ಳುತ್ತಿತ್ತು. ಇಂದು ಮೋದಿ ವಿರೋಧಿಗಳೆನ್ನುವವರದ್ದೂ ಅದರಲ್ಲಿ ಪಾತ್ರವಿದೆ. 1984ರ ದಂಗೆಯ ಬಗ್ಗೆ ಸರಿಯಾದ ತನಿಖೆ ಆಗಲೇ ಇಲ್ಲ. ಸಾರ್ವಜನಿಕ ಉದ್ದಿಮೆಗಳನು ದುರ್ಬಲಗೊಳಿಸುವುದರಲ್ಲಿ ಅವರ ಪಾತ್ರವಿದೆ. ಶ್ರೀಕೃಷ್ಣ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿ ಮಾಡಿಲ್ಲ. ಜಾಗತೀಕರಣ ನೀತಿಗಳನ್ನು ಜಾರಿಗೆ ತಂದಿದ್ದಾರೆ.

ದೇಶದ ಜನರು ಇವೆಲ್ಲವನ್ನೂ ಅರ್ಥ ಮಾಡಿಕೊಂಡರೆ, 2019ರ ಚುನಾವಣೆಯಲ್ಲಿ ನಾವು ಅವರನ್ನು ಗುಜರಾತ್‍ಗೆ ಘರ್ ವಾಪಸಿ ಮಾಡಿಸುತ್ತೇವೆಂಬ ನಂಬಿಕೆ ನನಗಿದೆ. ಆದರೆ, ಇವರನ್ನು ಚುನಾವಣೆಯಲ್ಲಿ ಸೋಲಿಸುವುದಷ್ಠೆ ನಮ್ಮ ಕೆಲಸವಲ್ಲ. ಆರೆಸ್ಸೆಸ್ಸನ್ನು ಸೈದ್ಧಾಂತಿಕವಾಗಿ ಸೋಲಿಸುವುದು ಮತ್ತು ನಮ್ಮ ಸಂವಿಧಾನದ ಆಶಯವಾದ ಜೀವಪರ ದೇಶವನ್ನು ಕಟ್ಟುವುದು ನಮ್ಮ ಕೆಲಸವಾಗಬೇಕು ಈಗ.

 

ಇಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ. ಧನ್ಯವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...