Homeಮುಖಪುಟಟಿಆರ್‌ಪಿ ಹಗರಣ: BARC ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ಟಿಆರ್‌ಪಿ ಹಗರಣ: BARC ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

"ಪ್ರಕರಣದ ತನಿಖೆಯ ವೇಳೆ ಹಗರಣದಲ್ಲಿ ಇವರ ಪಾತ್ರವೂ ಇರುವುದು ತಿಳಿದುಬಂದಿತ್ತು. ಹಾಗಾಗಿ ಬಂಧಿಸಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು" ಎಂದು ಪೊಲೀಸರು ತಿಳಿಸಿದರು.

- Advertisement -
- Advertisement -

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಂದು ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ (BARC) ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಅವರನ್ನು ಬಂಧಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 14 ಜನರನ್ನು ಬಂಧಿಸಲಾಗಿದೆ.

“ಪ್ರಕರಣದ ತನಿಖೆಯ ವೇಳೆ ಹಗರಣದಲ್ಲಿ ಇವರ ಪಾತ್ರವೂ ಇರುವುದು ತಿಳಿದುಬಂದಿತ್ತು. ಹಾಗಾಗಿ ಬಂಧಿಸಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಭಾನುವಾರ ರಿಪಬ್ಲಿಕ್‌ ಮೀಡಿಯಾ ನೆಟ್‌ವರ್ಕ್‌ನ ಸಿಇಒ ವಿಕಾಸ್‌ ಖಾನ್‌ಚಂದಾನಿರನ್ನು ಬಂಧಿಸಲಾಗಿತ್ತು. ಆದರೆ ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿತ್ತು.

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದರು.


ಇದನ್ನೂ ಓದಿ: ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...