Homeಮುಖಪುಟಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

- Advertisement -
- Advertisement -

ಆಂಧ್ರಪ್ರದೇಶದ ಏಲೂರಿನಲ್ಲಿ ನೂರಾರು ಜನರ ಅನಾರೋಗ್ಯಕ್ಕೆ ಕಾರಣವಾಗಿದ್ದ ನಿಗೂಢ ಕಾಯಿಲೆಯ ಹಿಂದೆ  ಕೀಟನಾಶಕಗಳಿಂದ ಬಿಡುಗಡೆಯಾಗಿರುವ ರಾಸಾಯನಿಕ ಪದಾರ್ಥಗಳು ಇರಬಹುದು ಎಂದು ದೆಹಲಿಯ ಏಮ್ಸ್ ಮತ್ತು ದೇಶದ ಇತರ ವೈಜ್ಞಾನಿಕ ಸಂಸ್ಥೆಗಳ ಪರೀಕ್ಷೆಗಳು ತಿಳಿಸಿವೆ.

ಏಲೂರು ನಿಗೂಢ ಕಾಯಿಲೆಯ ಘಟನೆ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಅಲಾನಾನಿ, ಎಲೂರು ಜಿಲ್ಲಾಧಿಕಾರಿ ರೇವು ಮುತ್ಯಲರಾಜು, ಜಂಟಿ ಕಲೆಕ್ಟರ್ ಹಿಮಾಂಶು ಶುಕ್ಲಾ, ಡಿಎಂಹೆಚ್‌ಒ ಡಾ.ಸುನಂದಾ, ಡಿಸಿಎಚ್‌ಎಂಒ ಡಾ. ಎವಿಆರ್ ಮೋಹನ್ ಮತ್ತು ಇತರರು ಭಾಗವಹಿಸಿದ್ದರು.

ಈ ವೇಳೆ ಏಮ್ಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳು ಕೀಟನಾಶಕಗಳ ಅವಶೇಷಗಳು, ತ್ಯಾಜ್ಯಗಳು ಏಲೂರು ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿವೆ. ಆದರೆ, ಈ ಅವಶೇಷಗಳು ಮಾನವನ ದೇಹಕ್ಕೆ ಹೇಗೆ ಸೇರಿದವು ಎಂಬುದರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಕುರಿತ ಹೆಚ್ಚಿನ ಅಧ್ಯಯನದ ಜವಾಬ್ದಾರಿಯನ್ನು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ,  ನವದೆಹಲಿಯ ಏಮ್ಸ್ ನ ರಾಷ್ಟ್ರೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಗೆ ವಹಿಸಿದ್ದಾರೆ. ಸದ್ಯ ಎಲೂರಿನಲ್ಲಿ ಕಾಯಿಲೆ ಬೀಳುವ ಪ್ರಕರಣಗಳು ಕಡಿಮೆಯಾಗಿವೆ.

ಮುಂದಿನ ಕೆಲವು ತಿಂಗಳುಗಳು ಜಿಲ್ಲೆಯಲ್ಲಿ ಆಹಾರ, ನೀರು ಮತ್ತು ತರಕಾರಿ ಮಾದರಿಗಳನ್ನು ಮತ್ತೆ ಮತ್ತೆ ವಿಶ್ಲೇಷಿಸಿದ ನಂತರವೇ ಕಾಯಿಲೆಗೆ ನಿಖರವಾದ ಕಾರಣಗಳನ್ನು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಹಿಂದೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಕಾಯಿಲೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಂತಹ ಘಟನೆಗಳು ಮತ್ತೆ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನು ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಆಹಾರ, ನೀರು ಮತ್ತು ತರಕಾರಿ ಯಾವುದನ್ನೂ ಬಿಟ್ಟುಬಿಡದೆ ಎಲ್ಲಾ ಪರೀಕ್ಷೆಗಳನ್ನು ಸಾಧ್ಯವಾದಷ್ಟು ಮಾಡಬೇಕು. ಡಂಪಿಂಗ್ ಯಾರ್ಡ್‌ಗಳ ನಿರ್ವಹಣೆಗೆ ಗಮನ ಕೊಡಿ. ಏಲೂರು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಯಾದ್ಯಂತ ಇದೇ ರೀತಿಯ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲಾ ಜಿಲ್ಲೆಗಳ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ. ಮಾದರಿಗಳನ್ನು ವಿಧಾನದ ಪ್ರಕಾರ ತೆಗೆದುಕೊಳ್ಳಬೇಕು ಮತ್ತು ತಜ್ಞರು ವಿಶ್ಲೇಷಿಸಬೇಕು ಎಂದು ಮುಖ್ಯಮಂತ್ರಿ ಜಗನ್ ತಿಳಿಸಿದ್ದಾರೆ.

ಜೊತೆಗೆ ರೈತರು ಹಾನಿಕಾರಕ ಕೀಟನಾಶಕಗಳ ಬಳಕೆಯನ್ನು ಬಿಟ್ಟು, ಸಾವಯವ ಪರ್ಯಾಯಗಳನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸಲು ಕೃಷಿ ಇಲಾಖೆಗೆ ತಿಳಿಸಲಾಯಿತು. ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇದನ್ನು ರಾಜ್ಯದ “ಭತ್ತದ ಬಟ್ಟಲು” ಎಂದು ಪರಿಗಣಿಸಲಾಗಿದೆ. ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...