Homeಮುಖಪುಟಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

- Advertisement -
- Advertisement -

ಆಂಧ್ರಪ್ರದೇಶದ ಏಲೂರಿನಲ್ಲಿ ನೂರಾರು ಜನರ ಅನಾರೋಗ್ಯಕ್ಕೆ ಕಾರಣವಾಗಿದ್ದ ನಿಗೂಢ ಕಾಯಿಲೆಯ ಹಿಂದೆ  ಕೀಟನಾಶಕಗಳಿಂದ ಬಿಡುಗಡೆಯಾಗಿರುವ ರಾಸಾಯನಿಕ ಪದಾರ್ಥಗಳು ಇರಬಹುದು ಎಂದು ದೆಹಲಿಯ ಏಮ್ಸ್ ಮತ್ತು ದೇಶದ ಇತರ ವೈಜ್ಞಾನಿಕ ಸಂಸ್ಥೆಗಳ ಪರೀಕ್ಷೆಗಳು ತಿಳಿಸಿವೆ.

ಏಲೂರು ನಿಗೂಢ ಕಾಯಿಲೆಯ ಘಟನೆ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಅಲಾನಾನಿ, ಎಲೂರು ಜಿಲ್ಲಾಧಿಕಾರಿ ರೇವು ಮುತ್ಯಲರಾಜು, ಜಂಟಿ ಕಲೆಕ್ಟರ್ ಹಿಮಾಂಶು ಶುಕ್ಲಾ, ಡಿಎಂಹೆಚ್‌ಒ ಡಾ.ಸುನಂದಾ, ಡಿಸಿಎಚ್‌ಎಂಒ ಡಾ. ಎವಿಆರ್ ಮೋಹನ್ ಮತ್ತು ಇತರರು ಭಾಗವಹಿಸಿದ್ದರು.

ಈ ವೇಳೆ ಏಮ್ಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳು ಕೀಟನಾಶಕಗಳ ಅವಶೇಷಗಳು, ತ್ಯಾಜ್ಯಗಳು ಏಲೂರು ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿವೆ. ಆದರೆ, ಈ ಅವಶೇಷಗಳು ಮಾನವನ ದೇಹಕ್ಕೆ ಹೇಗೆ ಸೇರಿದವು ಎಂಬುದರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಕುರಿತ ಹೆಚ್ಚಿನ ಅಧ್ಯಯನದ ಜವಾಬ್ದಾರಿಯನ್ನು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ,  ನವದೆಹಲಿಯ ಏಮ್ಸ್ ನ ರಾಷ್ಟ್ರೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಗೆ ವಹಿಸಿದ್ದಾರೆ. ಸದ್ಯ ಎಲೂರಿನಲ್ಲಿ ಕಾಯಿಲೆ ಬೀಳುವ ಪ್ರಕರಣಗಳು ಕಡಿಮೆಯಾಗಿವೆ.

ಮುಂದಿನ ಕೆಲವು ತಿಂಗಳುಗಳು ಜಿಲ್ಲೆಯಲ್ಲಿ ಆಹಾರ, ನೀರು ಮತ್ತು ತರಕಾರಿ ಮಾದರಿಗಳನ್ನು ಮತ್ತೆ ಮತ್ತೆ ವಿಶ್ಲೇಷಿಸಿದ ನಂತರವೇ ಕಾಯಿಲೆಗೆ ನಿಖರವಾದ ಕಾರಣಗಳನ್ನು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಹಿಂದೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಕಾಯಿಲೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಂತಹ ಘಟನೆಗಳು ಮತ್ತೆ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನು ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಆಹಾರ, ನೀರು ಮತ್ತು ತರಕಾರಿ ಯಾವುದನ್ನೂ ಬಿಟ್ಟುಬಿಡದೆ ಎಲ್ಲಾ ಪರೀಕ್ಷೆಗಳನ್ನು ಸಾಧ್ಯವಾದಷ್ಟು ಮಾಡಬೇಕು. ಡಂಪಿಂಗ್ ಯಾರ್ಡ್‌ಗಳ ನಿರ್ವಹಣೆಗೆ ಗಮನ ಕೊಡಿ. ಏಲೂರು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಯಾದ್ಯಂತ ಇದೇ ರೀತಿಯ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲಾ ಜಿಲ್ಲೆಗಳ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ. ಮಾದರಿಗಳನ್ನು ವಿಧಾನದ ಪ್ರಕಾರ ತೆಗೆದುಕೊಳ್ಳಬೇಕು ಮತ್ತು ತಜ್ಞರು ವಿಶ್ಲೇಷಿಸಬೇಕು ಎಂದು ಮುಖ್ಯಮಂತ್ರಿ ಜಗನ್ ತಿಳಿಸಿದ್ದಾರೆ.

ಜೊತೆಗೆ ರೈತರು ಹಾನಿಕಾರಕ ಕೀಟನಾಶಕಗಳ ಬಳಕೆಯನ್ನು ಬಿಟ್ಟು, ಸಾವಯವ ಪರ್ಯಾಯಗಳನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸಲು ಕೃಷಿ ಇಲಾಖೆಗೆ ತಿಳಿಸಲಾಯಿತು. ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇದನ್ನು ರಾಜ್ಯದ “ಭತ್ತದ ಬಟ್ಟಲು” ಎಂದು ಪರಿಗಣಿಸಲಾಗಿದೆ. ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...