Homeಮುಖಪುಟಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

- Advertisement -
- Advertisement -

ಆಂಧ್ರಪ್ರದೇಶದ ಏಲೂರಿನಲ್ಲಿ ನೂರಾರು ಜನರ ಅನಾರೋಗ್ಯಕ್ಕೆ ಕಾರಣವಾಗಿದ್ದ ನಿಗೂಢ ಕಾಯಿಲೆಯ ಹಿಂದೆ  ಕೀಟನಾಶಕಗಳಿಂದ ಬಿಡುಗಡೆಯಾಗಿರುವ ರಾಸಾಯನಿಕ ಪದಾರ್ಥಗಳು ಇರಬಹುದು ಎಂದು ದೆಹಲಿಯ ಏಮ್ಸ್ ಮತ್ತು ದೇಶದ ಇತರ ವೈಜ್ಞಾನಿಕ ಸಂಸ್ಥೆಗಳ ಪರೀಕ್ಷೆಗಳು ತಿಳಿಸಿವೆ.

ಏಲೂರು ನಿಗೂಢ ಕಾಯಿಲೆಯ ಘಟನೆ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಅಲಾನಾನಿ, ಎಲೂರು ಜಿಲ್ಲಾಧಿಕಾರಿ ರೇವು ಮುತ್ಯಲರಾಜು, ಜಂಟಿ ಕಲೆಕ್ಟರ್ ಹಿಮಾಂಶು ಶುಕ್ಲಾ, ಡಿಎಂಹೆಚ್‌ಒ ಡಾ.ಸುನಂದಾ, ಡಿಸಿಎಚ್‌ಎಂಒ ಡಾ. ಎವಿಆರ್ ಮೋಹನ್ ಮತ್ತು ಇತರರು ಭಾಗವಹಿಸಿದ್ದರು.

ಈ ವೇಳೆ ಏಮ್ಸ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸೇರಿದಂತೆ ಪ್ರಮುಖ ಸಂಸ್ಥೆಗಳು ಕೀಟನಾಶಕಗಳ ಅವಶೇಷಗಳು, ತ್ಯಾಜ್ಯಗಳು ಏಲೂರು ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿವೆ. ಆದರೆ, ಈ ಅವಶೇಷಗಳು ಮಾನವನ ದೇಹಕ್ಕೆ ಹೇಗೆ ಸೇರಿದವು ಎಂಬುದರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

ಘಟನೆ ಕುರಿತ ಹೆಚ್ಚಿನ ಅಧ್ಯಯನದ ಜವಾಬ್ದಾರಿಯನ್ನು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ,  ನವದೆಹಲಿಯ ಏಮ್ಸ್ ನ ರಾಷ್ಟ್ರೀಯ ರಾಸಾಯನಿಕ ತಂತ್ರಜ್ಞಾನ ಸಂಸ್ಥೆಗೆ ವಹಿಸಿದ್ದಾರೆ. ಸದ್ಯ ಎಲೂರಿನಲ್ಲಿ ಕಾಯಿಲೆ ಬೀಳುವ ಪ್ರಕರಣಗಳು ಕಡಿಮೆಯಾಗಿವೆ.

ಮುಂದಿನ ಕೆಲವು ತಿಂಗಳುಗಳು ಜಿಲ್ಲೆಯಲ್ಲಿ ಆಹಾರ, ನೀರು ಮತ್ತು ತರಕಾರಿ ಮಾದರಿಗಳನ್ನು ಮತ್ತೆ ಮತ್ತೆ ವಿಶ್ಲೇಷಿಸಿದ ನಂತರವೇ ಕಾಯಿಲೆಗೆ ನಿಖರವಾದ ಕಾರಣಗಳನ್ನು ಗುರುತಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಹಿಂದೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಕಾಯಿಲೆಗೆ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜ್ಯದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಇಂತಹ ಘಟನೆಗಳು ಮತ್ತೆ ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನು ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ಆಹಾರ, ನೀರು ಮತ್ತು ತರಕಾರಿ ಯಾವುದನ್ನೂ ಬಿಟ್ಟುಬಿಡದೆ ಎಲ್ಲಾ ಪರೀಕ್ಷೆಗಳನ್ನು ಸಾಧ್ಯವಾದಷ್ಟು ಮಾಡಬೇಕು. ಡಂಪಿಂಗ್ ಯಾರ್ಡ್‌ಗಳ ನಿರ್ವಹಣೆಗೆ ಗಮನ ಕೊಡಿ. ಏಲೂರು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಯಾದ್ಯಂತ ಇದೇ ರೀತಿಯ ಪರೀಕ್ಷೆಗಳನ್ನು ನಡೆಸಬೇಕು. ಎಲ್ಲಾ ಜಿಲ್ಲೆಗಳ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ. ಮಾದರಿಗಳನ್ನು ವಿಧಾನದ ಪ್ರಕಾರ ತೆಗೆದುಕೊಳ್ಳಬೇಕು ಮತ್ತು ತಜ್ಞರು ವಿಶ್ಲೇಷಿಸಬೇಕು ಎಂದು ಮುಖ್ಯಮಂತ್ರಿ ಜಗನ್ ತಿಳಿಸಿದ್ದಾರೆ.

ಜೊತೆಗೆ ರೈತರು ಹಾನಿಕಾರಕ ಕೀಟನಾಶಕಗಳ ಬಳಕೆಯನ್ನು ಬಿಟ್ಟು, ಸಾವಯವ ಪರ್ಯಾಯಗಳನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸಲು ಕೃಷಿ ಇಲಾಖೆಗೆ ತಿಳಿಸಲಾಯಿತು. ಏಲೂರು, ಪಶ್ಚಿಮ ಗೋದಾವರಿ ಜಿಲ್ಲೆಯ ಪ್ರಧಾನ ಕೇಂದ್ರವಾಗಿದ್ದು, ಇದನ್ನು ರಾಜ್ಯದ “ಭತ್ತದ ಬಟ್ಟಲು” ಎಂದು ಪರಿಗಣಿಸಲಾಗಿದೆ. ಇಲ್ಲಿನ ವ್ಯಾಪಕವಾದ ಭತ್ತದ ಕೃಷಿಗೆ ಕೀಟನಾಶಕಗಳು ಮತ್ತು ರಸಗೊಬ್ಬರಗಳ ಬಳಕೆ ಭಾರೀ ಪ್ರಮಾಣದಲ್ಲಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...