Homeಮುಖಪುಟಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

- Advertisement -
- Advertisement -

‘ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ ಅಜಿತ್‌ ಮೋಹನ್‌ ತಿಳಿಸಿದ್ದು, ಇದನ್ನು ತಮ್ಮ ಕಂಪನಿಯ ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ ಎಂದು ಸಂಸದೀಯ ಸಮಿತಿಗೆ ಬುಧವಾರ ತಿಳಿಸಿದ್ದಾರೆ.

ಈ ಹಿಂದೆ ಜೂನ್‌ ತಿಂಗಳಲ್ಲಿ ದೆಹಲಿಯ ಚರ್ಚ್‌ ಒಂದರ ಮೇಲೆ ದಾಳಿ ನಡೆಸಿದ ವಿಡಿಯೊವನ್ನು ಬಜರಂಗದಳವು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿತ್ತು. ಇದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ತಿಳಿದಿದ್ದರೂ ಸಹ ಬಜರಂಗದಳವನ್ನು ನಿಷೇಧಿಸಲು ಫೇಸ್‌ಬುಕ್‌ ಮುಂದಾಗಿರಲಿಲ್ಲ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಬಜರಂಗದಳವನ್ನು ನಿಷೇಧಿಸಿದರೆ ಕಂಪನಿಯ ವ್ಯವಹಾರದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಆತಂಕ ಫೇಸ್‌ಬುಕ್‌ ಕಂಪನಿಗೆ ಇತ್ತೆಂದು ವಾಲ್‌ಸ್ಟ್ರೀಟ್‌ ಜರ್ನಲ್ ಇತ್ತೀಚೆಗೆ‌ ವರದಿ ಮಾಡಿತ್ತು.

ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಸತ್ತಿನ ಮಾಹಿತಿ ತಂತ್ರಜ್ಞಾನ ಸಮಿತಿಯು ಅಜಿತ್‌ ಮೋಹನ್‌ ಅವರಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

“ಬಜರಂಗದಳದ ಪೋಸ್ಟ್‌ನಲ್ಲಿ ಯಾವುದೇ ವಿವಾದಾತ್ಮಕ ಅಂಶಗಳು ಕಂಡುಬಂದಿಲ್ಲ. ಆ ಕಾರಣ, ಸಂಘಟನೆಯನ್ನು ನಿಷೇಧಿಸಿಸುವ ಅನಿವಾರ್ಯತೆ ಫೇಸ್‌ಬುಕ್‌ ಇಂಡಿಯಾ ಕಂಪನಿಗೆ ಇರಲಿಲ್ಲ” ಎಂದು ಅಜಿತ್‌ ಮೋಹನ್‌ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.


ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...