Homeಕರ್ನಾಟಕಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ ಎನ್ನುತ್ತಾರೆ ಹಿರಿಯ ಬರಹಗಾರ ಡಾ.ಬಿ.ಎಲ್ ವೇಣು

- Advertisement -
- Advertisement -

ರಾಜ್ಯದಲ್ಲಿನ ಕೆಲವು ಸ್ವಾಮೀಜಿಗಳು ರಾಜಕಾರಣದ ಉಸಾಬರಿಗೆ ಬಿದ್ದಿರುವ ಕುರಿತು ಓದಿದೆ. ನನಗೂ ಬರೆಯಬೇಕೆನಿಸಿತು. ಮಠಾಧೀಶರುಗಳ ಕುರಿತು ನಾನೇನು ಹೊಸದಾಗಿ ಬರೆಯುತ್ತಿರುವವನಲ್ಲ. “ಮಠಗಳು ದೇಶಕ್ಕೆ ಶಾಪ” ಎಂಬ ಕೃತಿ ಬರೆದು ವಿವಾದಕ್ಕೀಡಾದವನು ನಾನು. ಇತ್ತೀಚೆಗಂತೂ ಮಠಾಧೀಶರುಗಳು ಅದರಲ್ಲಿಯೂ ಸುಪ್ರೀಂ ಪವರ್ ಮುಖ್ಯಮಂತ್ರಿಗಳ ಎದುರೇ ಗೂಳಿಗಳಂತೆ ಗುಟುರು ಹಾಕಿ ತಮ್ಮ ಮಠಕ್ಕೆ ಬೇಕಾದ ಸವಲತ್ತು, ಕೋಟಿಗಟ್ಟಲೆ ಅನುದಾನವನ್ನು ಬೇಡದೆ ಪಡೆಯುವಷ್ಟು ಪ್ರಭಾವಿತರಾಗಿಬಿಟ್ಟಿದ್ದಾರೆ. ಧರ್ಮಾಂಧ ಸರ್ಕಾರವು ಮತಗಳಿಕೆಗಾಗಿ ಮಠಗಳನ್ನು ಓಲೈಸುವ ಗೀಳಿಗೆ ಬಿದ್ದಂತಿದೆ.

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ. ಇದೆಲ್ಲಾ ಹಾಳಾಗಿಹೋಗಲಿ ಎಂದರೆ ಮುಖ್ಯಮಂತ್ರಿಗಳ ಎದುರೇ ತಮ್ಮ ಜಾತಿಯವರನ್ನೆ ಮಂತ್ರಿಗಳನ್ನಾಗಿ ಮಾಡಿರೆಂದು ಶಿಪಾರಸ್ ಮಾಡುವುದು, ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಒಬ್ಬ ಸ್ವಾಮೀಜಿ ಗರಂ ಆದ್ರೆ, ಮತ್ತೊಬ್ಬ, ವೀರಶೈವ ಲಿಂಗಾಯಿತರನ್ನು ’ಪ್ರವರ್ಗ-2ಎ’ಕ್ಕೆ ಸೇರಿಸಿ ಎಂದು ಹುಕುಂ ಮಾಡುತ್ತಾರೆ. ಮಠಾಧೀಶರಿಗೆ ರಾಜಕಾರಣವೇಕೆಂದಿರೋ? ಹಿಂದೆಯೂ ರಾಜರುಗಳಿಗೆ ರಾಜಗುರುಗಳಿದ್ದು ಮಾರ್ಗದರ್ಶನ ಮಾಡುತ್ತಿರಲಿಲ್ಲವೆ ಎಂಬ ಸಬೂಬು ಬೇರೆ.
ನಿಜ ಹಕ್ಕಬುಕ್ಕರಿಗೆ ವಿದ್ಯಾರಣ್ಯ, ಚಂದ್ರಗುಪ್ತನಿಗೆ ಚಾಣಕ್ಯ, ಮದಕರಿನಾಯಕರಿಗೆ ಮರುಘೇಸ್ವಾಮಿಗಳಂಥವರು ಇದ್ದರು. ಅವರೆಂದೂ ತಾವಾಗಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದವರಲ್ಲ.

ತಮ್ಮ ಜಾತಿಮತ ಸಮುದಾಯಗಳ ಹಿತಾಕಾಂಕ್ಷಿಗಳಾದವರೂ ಅಲ್ಲ. ಜಾತಿ ಮೀಸಲಾತಿಗಾಗಿ ಒಬ್ಬ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಲ್ಲದೆ, ಕೇಳಿದಷ್ಟು ಮೀಸಲಾತಿಗೆ ಸಮ್ಮತಿಸದಿದ್ದರೆ ಸಚಿವರಿಂದ ರಾಜಿನಾಮೆ ಕೊಡಿಸುತ್ತೇನೆಂದು ಬೆದರಿಸುತ್ತಾರೆ. ನಿರ್ದಿಷ್ಟ ಸಮುದಾಯಗಳನ್ನು ’ಒಬಿಸಿ’ ಪಟ್ಟಿಗೆ ಸೇರಿಸಿಬಿಡಿ, ’ನಿಮಗೇನೂ ಆಗದು, ಧೈರ್ಯದಿಂದಿರಿ. ನೀವೇ ಮುಂದುವರೆಯುತ್ತೀರಿ’ ಎಂದೆಲ್ಲಾ ಮುಖ್ಯಮಂತ್ರಿಗಳಿಗೆ ಬಹಿರಂಗ ಸಭೆಯಲ್ಲೇ ಸ್ವಾಮೀಜಿಯೊಬ್ಬರು ಅಭಯಹಸ್ತ ತೋರಿದರೆ ಅಲ್ಲಿದ್ದ ಇಬ್ಬರು ಕಾವಿಗಳದ್ದೂ ಕುಮ್ಮಕ್ಕು ಕಂಡು ಬಂತು! ಕೆಲವರಂತೂ ಇಂತಹ ಪಕ್ಷಕ್ಕೆ ಓಟು ಹಾಕಿರೆಂದು ಫರಮಾನು ಹೊರಡಿಸಿ ಗೆಲ್ಲಿಸುವಷ್ಟು ಪ್ರಭಾವಿಗಳು. ಸರ್ಕಾರವನ್ನು ಉರುಳಿಸಬಲ್ಲವೆಂಬಷ್ಟು ಪ್ರಭಾವಿ ಮಠಾಧೀಶರೂ ಹುಟ್ಟಿಕೊಳ್ಳುತ್ತಿರುವಲ್ಲಿ ಇದೇನು ಸರ್ಕಾರದಲ್ಲಿನ ದೌರ್ಬಲ್ಯವೋ? ಮಠಾಧೀಶರುಗಳೇ ಧರ್ಮಾಧರ್ಮಗಳನ್ನು ಮರೆತು ರಾಜಕೀಯ ಲಾಭ ಹಾಗೂ ಬರುವ ಅನುದಾನಕ್ಕಾಗಿ ನಿರ್ಲಜ್ಜರಾಗುತ್ತಿದ್ದಾರೋ ತೋಚದಂತಾಗಿದೆ.

ಸಾಮಾಜಿಕ ನ್ಯಾಯ, ಜನಪರ ಹೋರಾಟಗಳಲ್ಲಿ ತೊಡಗದ ಸ್ವಾಮೀಜಿಯೊಬ್ಬರು ತಮ್ಮ ಜಾತಿ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು – ಮೀಸಲಾತಿ ನೀಡಬೇಕೆಂದು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇನೆಂದು ಜಬರ್ ಮಾಡಿದರೆ, ಮತ್ತೊಬ್ಬ ಸ್ವಾಮೀಜಿ ಕಾಗಿನೆಲೆಯಿಂದ ಪಾದಯಾತ್ರೆ ನಡೆಸುತ್ತೇನೆಂದು ಸರ್ಕಾರದ ಪ್ರಾಣ ಹಿಂಡುತ್ತಿದ್ದಾರೆ! ಜಗದಹಿತವನ್ನು ಬಯಸುವವ ಜಗದ್ಗುರು ಎನ್ನುವುದಾದರೆ ಇವರುಗಳಲ್ಲಿ ಯಾರೂ ಜಗದ್ಗುರುಗಳಲ್ಲ. ಎಲ್ಲರೂ ಜಾತಿ ಗುರುಗಳೆ. ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ. ಜಾತಿಗೊಂದು ಮಠಕಟ್ಟಿ ಸರ್ವರಿಗೂ ಸಮಾನತೆ ದೊರಕಿಸಿಕೊಟ್ಟನೆಂದು ಬೀಗುವವರು ಬಸವಣ್ಣ ಜಾತಿವಿನಾಶಕ್ಕೆ ಪಣತೊಟ್ಟು ಸರ್ವ ಜಾತಿಯ ಜನರನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಂತರ್ಜಾತೀಯ ವಿವಾಹಕ್ಕೆ ನಾಂದಿ ಹಾಡಿದ್ದನ್ನೇ ಮರೆತುಬಿಡುತ್ತಾರೆ.

ಮರೆಯಲಿ ಬಿಡಿ. ತಮ್ಮ ಸಮುದಾಯಗಳ ಶ್ರೇಯಸ್ಸಿಗೆ ಬಹಿರಂಗವಾಗಿಯೇ ಬ್ಲಾಕ್‌ಮೇಲ್‌ಗಿಳಿದ ಈ ಕಾವಿಧಾರಿಗಳ ಕಾವಿ ಕಿತ್ತೆಸೆದು ಖಾದಿ ಧರಿಸಿ ಕಣಕ್ಕಿಳಿದು ತಮ್ಮ ತಮ್ಮ ಸಮುದಾಯವನ್ನು ಸಂರಕ್ಷಿಸಲಿ. ಕಾವಿಗೆ ಮಾತ್ರ ಕಳಂಕ ತರುವುದು ಬೇಡ, ಬೇಕಾದರೆ ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಇದ್ದಾರೆ, ಉಮಾಭಾರತಿ, ಸಾಕ್ಷಿ ಮಹಾರಾಜರಂತೆ ಚುನಾವಣೆಗೇ ಇಳಿದುಬಿಡಲಿ. ಎಡಬಿಡಂಗಿತನ ತೋರದೆ ನೇರವಾಗಿ ರಾಜಕೀಯಕ್ಕೆ ಜಂಪ್ ಮಾಡಿ ಸರ್ಕಾರ ರಚಿಸುವ ಹಂತಕ್ಕೇ ಹೋಗಲಿ.

ರಾಜ್ಯದಲ್ಲಿನ ಕಾವಿ ಮತ್ತು ಖಾದಿಗಳು ಕನಿಷ್ಟ ಅಂತರವನ್ನಾದರೂ ಕಾಯ್ದುಕೊಂಡರೆ ಉಭಯತ್ರರಿಗೂ, ನಾಡಿಗೂ ಶುಭ. ಇಷ್ಟಾದರೂ ಇವರುಗಳಲ್ಲಾದರೂ ಒಗ್ಗಟ್ಟು ಉಂಟೋ! ಕಾವಿಗಳ ಕೈಗೇ ಸದ್ಭಕ್ತರು ಅಧಿಕಾರ ಕೊಟ್ಟರೆ ಸರ್ಕಾರ ನಡೆಸಿಯಾರೆ? ಸ್ವಾಮಿಗಳ ನಡೆ ಪ್ರಜಾಪ್ರಭುತ್ವದಲ್ಲಿ ನೋಡುವರ ಎದುರು ನಗೆಪಾಟಲಾಗದೆ ಮಾದರಿಯಾಗಿರಬೇಕಲ್ಲವೆ.

  • ಡಾ. ಬಿ. ಎಲ್. ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...