Homeಕರ್ನಾಟಕಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ ಎನ್ನುತ್ತಾರೆ ಹಿರಿಯ ಬರಹಗಾರ ಡಾ.ಬಿ.ಎಲ್ ವೇಣು

- Advertisement -
- Advertisement -

ರಾಜ್ಯದಲ್ಲಿನ ಕೆಲವು ಸ್ವಾಮೀಜಿಗಳು ರಾಜಕಾರಣದ ಉಸಾಬರಿಗೆ ಬಿದ್ದಿರುವ ಕುರಿತು ಓದಿದೆ. ನನಗೂ ಬರೆಯಬೇಕೆನಿಸಿತು. ಮಠಾಧೀಶರುಗಳ ಕುರಿತು ನಾನೇನು ಹೊಸದಾಗಿ ಬರೆಯುತ್ತಿರುವವನಲ್ಲ. “ಮಠಗಳು ದೇಶಕ್ಕೆ ಶಾಪ” ಎಂಬ ಕೃತಿ ಬರೆದು ವಿವಾದಕ್ಕೀಡಾದವನು ನಾನು. ಇತ್ತೀಚೆಗಂತೂ ಮಠಾಧೀಶರುಗಳು ಅದರಲ್ಲಿಯೂ ಸುಪ್ರೀಂ ಪವರ್ ಮುಖ್ಯಮಂತ್ರಿಗಳ ಎದುರೇ ಗೂಳಿಗಳಂತೆ ಗುಟುರು ಹಾಕಿ ತಮ್ಮ ಮಠಕ್ಕೆ ಬೇಕಾದ ಸವಲತ್ತು, ಕೋಟಿಗಟ್ಟಲೆ ಅನುದಾನವನ್ನು ಬೇಡದೆ ಪಡೆಯುವಷ್ಟು ಪ್ರಭಾವಿತರಾಗಿಬಿಟ್ಟಿದ್ದಾರೆ. ಧರ್ಮಾಂಧ ಸರ್ಕಾರವು ಮತಗಳಿಕೆಗಾಗಿ ಮಠಗಳನ್ನು ಓಲೈಸುವ ಗೀಳಿಗೆ ಬಿದ್ದಂತಿದೆ.

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ. ಇದೆಲ್ಲಾ ಹಾಳಾಗಿಹೋಗಲಿ ಎಂದರೆ ಮುಖ್ಯಮಂತ್ರಿಗಳ ಎದುರೇ ತಮ್ಮ ಜಾತಿಯವರನ್ನೆ ಮಂತ್ರಿಗಳನ್ನಾಗಿ ಮಾಡಿರೆಂದು ಶಿಪಾರಸ್ ಮಾಡುವುದು, ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಒಬ್ಬ ಸ್ವಾಮೀಜಿ ಗರಂ ಆದ್ರೆ, ಮತ್ತೊಬ್ಬ, ವೀರಶೈವ ಲಿಂಗಾಯಿತರನ್ನು ’ಪ್ರವರ್ಗ-2ಎ’ಕ್ಕೆ ಸೇರಿಸಿ ಎಂದು ಹುಕುಂ ಮಾಡುತ್ತಾರೆ. ಮಠಾಧೀಶರಿಗೆ ರಾಜಕಾರಣವೇಕೆಂದಿರೋ? ಹಿಂದೆಯೂ ರಾಜರುಗಳಿಗೆ ರಾಜಗುರುಗಳಿದ್ದು ಮಾರ್ಗದರ್ಶನ ಮಾಡುತ್ತಿರಲಿಲ್ಲವೆ ಎಂಬ ಸಬೂಬು ಬೇರೆ.
ನಿಜ ಹಕ್ಕಬುಕ್ಕರಿಗೆ ವಿದ್ಯಾರಣ್ಯ, ಚಂದ್ರಗುಪ್ತನಿಗೆ ಚಾಣಕ್ಯ, ಮದಕರಿನಾಯಕರಿಗೆ ಮರುಘೇಸ್ವಾಮಿಗಳಂಥವರು ಇದ್ದರು. ಅವರೆಂದೂ ತಾವಾಗಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದವರಲ್ಲ.

ತಮ್ಮ ಜಾತಿಮತ ಸಮುದಾಯಗಳ ಹಿತಾಕಾಂಕ್ಷಿಗಳಾದವರೂ ಅಲ್ಲ. ಜಾತಿ ಮೀಸಲಾತಿಗಾಗಿ ಒಬ್ಬ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಲ್ಲದೆ, ಕೇಳಿದಷ್ಟು ಮೀಸಲಾತಿಗೆ ಸಮ್ಮತಿಸದಿದ್ದರೆ ಸಚಿವರಿಂದ ರಾಜಿನಾಮೆ ಕೊಡಿಸುತ್ತೇನೆಂದು ಬೆದರಿಸುತ್ತಾರೆ. ನಿರ್ದಿಷ್ಟ ಸಮುದಾಯಗಳನ್ನು ’ಒಬಿಸಿ’ ಪಟ್ಟಿಗೆ ಸೇರಿಸಿಬಿಡಿ, ’ನಿಮಗೇನೂ ಆಗದು, ಧೈರ್ಯದಿಂದಿರಿ. ನೀವೇ ಮುಂದುವರೆಯುತ್ತೀರಿ’ ಎಂದೆಲ್ಲಾ ಮುಖ್ಯಮಂತ್ರಿಗಳಿಗೆ ಬಹಿರಂಗ ಸಭೆಯಲ್ಲೇ ಸ್ವಾಮೀಜಿಯೊಬ್ಬರು ಅಭಯಹಸ್ತ ತೋರಿದರೆ ಅಲ್ಲಿದ್ದ ಇಬ್ಬರು ಕಾವಿಗಳದ್ದೂ ಕುಮ್ಮಕ್ಕು ಕಂಡು ಬಂತು! ಕೆಲವರಂತೂ ಇಂತಹ ಪಕ್ಷಕ್ಕೆ ಓಟು ಹಾಕಿರೆಂದು ಫರಮಾನು ಹೊರಡಿಸಿ ಗೆಲ್ಲಿಸುವಷ್ಟು ಪ್ರಭಾವಿಗಳು. ಸರ್ಕಾರವನ್ನು ಉರುಳಿಸಬಲ್ಲವೆಂಬಷ್ಟು ಪ್ರಭಾವಿ ಮಠಾಧೀಶರೂ ಹುಟ್ಟಿಕೊಳ್ಳುತ್ತಿರುವಲ್ಲಿ ಇದೇನು ಸರ್ಕಾರದಲ್ಲಿನ ದೌರ್ಬಲ್ಯವೋ? ಮಠಾಧೀಶರುಗಳೇ ಧರ್ಮಾಧರ್ಮಗಳನ್ನು ಮರೆತು ರಾಜಕೀಯ ಲಾಭ ಹಾಗೂ ಬರುವ ಅನುದಾನಕ್ಕಾಗಿ ನಿರ್ಲಜ್ಜರಾಗುತ್ತಿದ್ದಾರೋ ತೋಚದಂತಾಗಿದೆ.

ಸಾಮಾಜಿಕ ನ್ಯಾಯ, ಜನಪರ ಹೋರಾಟಗಳಲ್ಲಿ ತೊಡಗದ ಸ್ವಾಮೀಜಿಯೊಬ್ಬರು ತಮ್ಮ ಜಾತಿ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು – ಮೀಸಲಾತಿ ನೀಡಬೇಕೆಂದು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇನೆಂದು ಜಬರ್ ಮಾಡಿದರೆ, ಮತ್ತೊಬ್ಬ ಸ್ವಾಮೀಜಿ ಕಾಗಿನೆಲೆಯಿಂದ ಪಾದಯಾತ್ರೆ ನಡೆಸುತ್ತೇನೆಂದು ಸರ್ಕಾರದ ಪ್ರಾಣ ಹಿಂಡುತ್ತಿದ್ದಾರೆ! ಜಗದಹಿತವನ್ನು ಬಯಸುವವ ಜಗದ್ಗುರು ಎನ್ನುವುದಾದರೆ ಇವರುಗಳಲ್ಲಿ ಯಾರೂ ಜಗದ್ಗುರುಗಳಲ್ಲ. ಎಲ್ಲರೂ ಜಾತಿ ಗುರುಗಳೆ. ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ. ಜಾತಿಗೊಂದು ಮಠಕಟ್ಟಿ ಸರ್ವರಿಗೂ ಸಮಾನತೆ ದೊರಕಿಸಿಕೊಟ್ಟನೆಂದು ಬೀಗುವವರು ಬಸವಣ್ಣ ಜಾತಿವಿನಾಶಕ್ಕೆ ಪಣತೊಟ್ಟು ಸರ್ವ ಜಾತಿಯ ಜನರನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಂತರ್ಜಾತೀಯ ವಿವಾಹಕ್ಕೆ ನಾಂದಿ ಹಾಡಿದ್ದನ್ನೇ ಮರೆತುಬಿಡುತ್ತಾರೆ.

ಮರೆಯಲಿ ಬಿಡಿ. ತಮ್ಮ ಸಮುದಾಯಗಳ ಶ್ರೇಯಸ್ಸಿಗೆ ಬಹಿರಂಗವಾಗಿಯೇ ಬ್ಲಾಕ್‌ಮೇಲ್‌ಗಿಳಿದ ಈ ಕಾವಿಧಾರಿಗಳ ಕಾವಿ ಕಿತ್ತೆಸೆದು ಖಾದಿ ಧರಿಸಿ ಕಣಕ್ಕಿಳಿದು ತಮ್ಮ ತಮ್ಮ ಸಮುದಾಯವನ್ನು ಸಂರಕ್ಷಿಸಲಿ. ಕಾವಿಗೆ ಮಾತ್ರ ಕಳಂಕ ತರುವುದು ಬೇಡ, ಬೇಕಾದರೆ ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಇದ್ದಾರೆ, ಉಮಾಭಾರತಿ, ಸಾಕ್ಷಿ ಮಹಾರಾಜರಂತೆ ಚುನಾವಣೆಗೇ ಇಳಿದುಬಿಡಲಿ. ಎಡಬಿಡಂಗಿತನ ತೋರದೆ ನೇರವಾಗಿ ರಾಜಕೀಯಕ್ಕೆ ಜಂಪ್ ಮಾಡಿ ಸರ್ಕಾರ ರಚಿಸುವ ಹಂತಕ್ಕೇ ಹೋಗಲಿ.

ರಾಜ್ಯದಲ್ಲಿನ ಕಾವಿ ಮತ್ತು ಖಾದಿಗಳು ಕನಿಷ್ಟ ಅಂತರವನ್ನಾದರೂ ಕಾಯ್ದುಕೊಂಡರೆ ಉಭಯತ್ರರಿಗೂ, ನಾಡಿಗೂ ಶುಭ. ಇಷ್ಟಾದರೂ ಇವರುಗಳಲ್ಲಾದರೂ ಒಗ್ಗಟ್ಟು ಉಂಟೋ! ಕಾವಿಗಳ ಕೈಗೇ ಸದ್ಭಕ್ತರು ಅಧಿಕಾರ ಕೊಟ್ಟರೆ ಸರ್ಕಾರ ನಡೆಸಿಯಾರೆ? ಸ್ವಾಮಿಗಳ ನಡೆ ಪ್ರಜಾಪ್ರಭುತ್ವದಲ್ಲಿ ನೋಡುವರ ಎದುರು ನಗೆಪಾಟಲಾಗದೆ ಮಾದರಿಯಾಗಿರಬೇಕಲ್ಲವೆ.

  • ಡಾ. ಬಿ. ಎಲ್. ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...