Homeಕರ್ನಾಟಕಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ ಎನ್ನುತ್ತಾರೆ ಹಿರಿಯ ಬರಹಗಾರ ಡಾ.ಬಿ.ಎಲ್ ವೇಣು

- Advertisement -
- Advertisement -

ರಾಜ್ಯದಲ್ಲಿನ ಕೆಲವು ಸ್ವಾಮೀಜಿಗಳು ರಾಜಕಾರಣದ ಉಸಾಬರಿಗೆ ಬಿದ್ದಿರುವ ಕುರಿತು ಓದಿದೆ. ನನಗೂ ಬರೆಯಬೇಕೆನಿಸಿತು. ಮಠಾಧೀಶರುಗಳ ಕುರಿತು ನಾನೇನು ಹೊಸದಾಗಿ ಬರೆಯುತ್ತಿರುವವನಲ್ಲ. “ಮಠಗಳು ದೇಶಕ್ಕೆ ಶಾಪ” ಎಂಬ ಕೃತಿ ಬರೆದು ವಿವಾದಕ್ಕೀಡಾದವನು ನಾನು. ಇತ್ತೀಚೆಗಂತೂ ಮಠಾಧೀಶರುಗಳು ಅದರಲ್ಲಿಯೂ ಸುಪ್ರೀಂ ಪವರ್ ಮುಖ್ಯಮಂತ್ರಿಗಳ ಎದುರೇ ಗೂಳಿಗಳಂತೆ ಗುಟುರು ಹಾಕಿ ತಮ್ಮ ಮಠಕ್ಕೆ ಬೇಕಾದ ಸವಲತ್ತು, ಕೋಟಿಗಟ್ಟಲೆ ಅನುದಾನವನ್ನು ಬೇಡದೆ ಪಡೆಯುವಷ್ಟು ಪ್ರಭಾವಿತರಾಗಿಬಿಟ್ಟಿದ್ದಾರೆ. ಧರ್ಮಾಂಧ ಸರ್ಕಾರವು ಮತಗಳಿಕೆಗಾಗಿ ಮಠಗಳನ್ನು ಓಲೈಸುವ ಗೀಳಿಗೆ ಬಿದ್ದಂತಿದೆ.

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ. ಇದೆಲ್ಲಾ ಹಾಳಾಗಿಹೋಗಲಿ ಎಂದರೆ ಮುಖ್ಯಮಂತ್ರಿಗಳ ಎದುರೇ ತಮ್ಮ ಜಾತಿಯವರನ್ನೆ ಮಂತ್ರಿಗಳನ್ನಾಗಿ ಮಾಡಿರೆಂದು ಶಿಪಾರಸ್ ಮಾಡುವುದು, ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಒಬ್ಬ ಸ್ವಾಮೀಜಿ ಗರಂ ಆದ್ರೆ, ಮತ್ತೊಬ್ಬ, ವೀರಶೈವ ಲಿಂಗಾಯಿತರನ್ನು ’ಪ್ರವರ್ಗ-2ಎ’ಕ್ಕೆ ಸೇರಿಸಿ ಎಂದು ಹುಕುಂ ಮಾಡುತ್ತಾರೆ. ಮಠಾಧೀಶರಿಗೆ ರಾಜಕಾರಣವೇಕೆಂದಿರೋ? ಹಿಂದೆಯೂ ರಾಜರುಗಳಿಗೆ ರಾಜಗುರುಗಳಿದ್ದು ಮಾರ್ಗದರ್ಶನ ಮಾಡುತ್ತಿರಲಿಲ್ಲವೆ ಎಂಬ ಸಬೂಬು ಬೇರೆ.
ನಿಜ ಹಕ್ಕಬುಕ್ಕರಿಗೆ ವಿದ್ಯಾರಣ್ಯ, ಚಂದ್ರಗುಪ್ತನಿಗೆ ಚಾಣಕ್ಯ, ಮದಕರಿನಾಯಕರಿಗೆ ಮರುಘೇಸ್ವಾಮಿಗಳಂಥವರು ಇದ್ದರು. ಅವರೆಂದೂ ತಾವಾಗಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದವರಲ್ಲ.

ತಮ್ಮ ಜಾತಿಮತ ಸಮುದಾಯಗಳ ಹಿತಾಕಾಂಕ್ಷಿಗಳಾದವರೂ ಅಲ್ಲ. ಜಾತಿ ಮೀಸಲಾತಿಗಾಗಿ ಒಬ್ಬ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಲ್ಲದೆ, ಕೇಳಿದಷ್ಟು ಮೀಸಲಾತಿಗೆ ಸಮ್ಮತಿಸದಿದ್ದರೆ ಸಚಿವರಿಂದ ರಾಜಿನಾಮೆ ಕೊಡಿಸುತ್ತೇನೆಂದು ಬೆದರಿಸುತ್ತಾರೆ. ನಿರ್ದಿಷ್ಟ ಸಮುದಾಯಗಳನ್ನು ’ಒಬಿಸಿ’ ಪಟ್ಟಿಗೆ ಸೇರಿಸಿಬಿಡಿ, ’ನಿಮಗೇನೂ ಆಗದು, ಧೈರ್ಯದಿಂದಿರಿ. ನೀವೇ ಮುಂದುವರೆಯುತ್ತೀರಿ’ ಎಂದೆಲ್ಲಾ ಮುಖ್ಯಮಂತ್ರಿಗಳಿಗೆ ಬಹಿರಂಗ ಸಭೆಯಲ್ಲೇ ಸ್ವಾಮೀಜಿಯೊಬ್ಬರು ಅಭಯಹಸ್ತ ತೋರಿದರೆ ಅಲ್ಲಿದ್ದ ಇಬ್ಬರು ಕಾವಿಗಳದ್ದೂ ಕುಮ್ಮಕ್ಕು ಕಂಡು ಬಂತು! ಕೆಲವರಂತೂ ಇಂತಹ ಪಕ್ಷಕ್ಕೆ ಓಟು ಹಾಕಿರೆಂದು ಫರಮಾನು ಹೊರಡಿಸಿ ಗೆಲ್ಲಿಸುವಷ್ಟು ಪ್ರಭಾವಿಗಳು. ಸರ್ಕಾರವನ್ನು ಉರುಳಿಸಬಲ್ಲವೆಂಬಷ್ಟು ಪ್ರಭಾವಿ ಮಠಾಧೀಶರೂ ಹುಟ್ಟಿಕೊಳ್ಳುತ್ತಿರುವಲ್ಲಿ ಇದೇನು ಸರ್ಕಾರದಲ್ಲಿನ ದೌರ್ಬಲ್ಯವೋ? ಮಠಾಧೀಶರುಗಳೇ ಧರ್ಮಾಧರ್ಮಗಳನ್ನು ಮರೆತು ರಾಜಕೀಯ ಲಾಭ ಹಾಗೂ ಬರುವ ಅನುದಾನಕ್ಕಾಗಿ ನಿರ್ಲಜ್ಜರಾಗುತ್ತಿದ್ದಾರೋ ತೋಚದಂತಾಗಿದೆ.

ಸಾಮಾಜಿಕ ನ್ಯಾಯ, ಜನಪರ ಹೋರಾಟಗಳಲ್ಲಿ ತೊಡಗದ ಸ್ವಾಮೀಜಿಯೊಬ್ಬರು ತಮ್ಮ ಜಾತಿ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು – ಮೀಸಲಾತಿ ನೀಡಬೇಕೆಂದು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇನೆಂದು ಜಬರ್ ಮಾಡಿದರೆ, ಮತ್ತೊಬ್ಬ ಸ್ವಾಮೀಜಿ ಕಾಗಿನೆಲೆಯಿಂದ ಪಾದಯಾತ್ರೆ ನಡೆಸುತ್ತೇನೆಂದು ಸರ್ಕಾರದ ಪ್ರಾಣ ಹಿಂಡುತ್ತಿದ್ದಾರೆ! ಜಗದಹಿತವನ್ನು ಬಯಸುವವ ಜಗದ್ಗುರು ಎನ್ನುವುದಾದರೆ ಇವರುಗಳಲ್ಲಿ ಯಾರೂ ಜಗದ್ಗುರುಗಳಲ್ಲ. ಎಲ್ಲರೂ ಜಾತಿ ಗುರುಗಳೆ. ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ. ಜಾತಿಗೊಂದು ಮಠಕಟ್ಟಿ ಸರ್ವರಿಗೂ ಸಮಾನತೆ ದೊರಕಿಸಿಕೊಟ್ಟನೆಂದು ಬೀಗುವವರು ಬಸವಣ್ಣ ಜಾತಿವಿನಾಶಕ್ಕೆ ಪಣತೊಟ್ಟು ಸರ್ವ ಜಾತಿಯ ಜನರನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಂತರ್ಜಾತೀಯ ವಿವಾಹಕ್ಕೆ ನಾಂದಿ ಹಾಡಿದ್ದನ್ನೇ ಮರೆತುಬಿಡುತ್ತಾರೆ.

ಮರೆಯಲಿ ಬಿಡಿ. ತಮ್ಮ ಸಮುದಾಯಗಳ ಶ್ರೇಯಸ್ಸಿಗೆ ಬಹಿರಂಗವಾಗಿಯೇ ಬ್ಲಾಕ್‌ಮೇಲ್‌ಗಿಳಿದ ಈ ಕಾವಿಧಾರಿಗಳ ಕಾವಿ ಕಿತ್ತೆಸೆದು ಖಾದಿ ಧರಿಸಿ ಕಣಕ್ಕಿಳಿದು ತಮ್ಮ ತಮ್ಮ ಸಮುದಾಯವನ್ನು ಸಂರಕ್ಷಿಸಲಿ. ಕಾವಿಗೆ ಮಾತ್ರ ಕಳಂಕ ತರುವುದು ಬೇಡ, ಬೇಕಾದರೆ ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಇದ್ದಾರೆ, ಉಮಾಭಾರತಿ, ಸಾಕ್ಷಿ ಮಹಾರಾಜರಂತೆ ಚುನಾವಣೆಗೇ ಇಳಿದುಬಿಡಲಿ. ಎಡಬಿಡಂಗಿತನ ತೋರದೆ ನೇರವಾಗಿ ರಾಜಕೀಯಕ್ಕೆ ಜಂಪ್ ಮಾಡಿ ಸರ್ಕಾರ ರಚಿಸುವ ಹಂತಕ್ಕೇ ಹೋಗಲಿ.

ರಾಜ್ಯದಲ್ಲಿನ ಕಾವಿ ಮತ್ತು ಖಾದಿಗಳು ಕನಿಷ್ಟ ಅಂತರವನ್ನಾದರೂ ಕಾಯ್ದುಕೊಂಡರೆ ಉಭಯತ್ರರಿಗೂ, ನಾಡಿಗೂ ಶುಭ. ಇಷ್ಟಾದರೂ ಇವರುಗಳಲ್ಲಾದರೂ ಒಗ್ಗಟ್ಟು ಉಂಟೋ! ಕಾವಿಗಳ ಕೈಗೇ ಸದ್ಭಕ್ತರು ಅಧಿಕಾರ ಕೊಟ್ಟರೆ ಸರ್ಕಾರ ನಡೆಸಿಯಾರೆ? ಸ್ವಾಮಿಗಳ ನಡೆ ಪ್ರಜಾಪ್ರಭುತ್ವದಲ್ಲಿ ನೋಡುವರ ಎದುರು ನಗೆಪಾಟಲಾಗದೆ ಮಾದರಿಯಾಗಿರಬೇಕಲ್ಲವೆ.

  • ಡಾ. ಬಿ. ಎಲ್. ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...