Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...