Homeಮುಖಪುಟಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

- Advertisement -
- Advertisement -

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಿಜೆಪಿ ಆಡಳಿತವಿರುವ ಗೋವಾ ರಾಜ್ಯವು ಭಾರೀ ಪ್ರಮಾಣದಲ್ಲಿ ಗೋಮಾಂಸದ ಕೊರತೆ ಅನುಭವಿಸುತ್ತಿದೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ತೀಕ್ಷ್ಣ ರೀತಿಯಲ್ಲಿ ಪ್ರತಿಕ್ರಿಯಿಸಿದೆ.

ಕರ್ನಾಟಕದ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಮಸೂದೆ- 2020 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಹಾಗಾಗಿ ಕೆಲವೆಡೆ ಗೋಮಾಂಸದ ಮಾರಾಟ ಮತ್ತು ರಫ್ತು ನಿಲ್ಲಿಸಲಾಗಿದೆ. ಇದು ಗೋವಾ ರಾಜ್ಯದ ಮೇಲೆ ಪರಿಣಾಮ ಬೀರಿದೆ. ಗೋವಾದಲ್ಲಿ ಹಬ್ಬಗಳು ಆರಂಭವಾಗಿದ್ದು ಗೋಮಾಂಸ ಅವರ ಪ್ರಮುಖ ಖಾದ್ಯವಾಗಿದೆ. ಗೋಮಾಂಸ ಮಾರಾಟಗಾರರು ಬುಧವಾರ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಕೂಡಲೇ ಕರ್ನಾಟಕದಿಂದ ಆಮದು ಮಾಡಿಕೊಳ್ಳಲು ವ್ಯವಸ್ಥೆ ಮಾಡುವುದಾಗಿ ಸಿಎಂ ಪ್ರಮೋದ್ ಸಾವಂತ್ ಗೋಮಾಂಸ ಮಾರಾಟಗಾರರಿಗೆ ಭರವಸೆ ನೀಡಿದ್ದಾರೆ.

ಗೋವುಗಳು ಬಿಜೆಪಿ ಬಯಸಿದ ರಾಜ್ಯಗಳಲ್ಲಿ ಮಾತ್ರ ಮಾತೆ! ಉಳಿದ ಕಡೆಯಲ್ಲಿಲ್ಲ ಅವರ ಕ್ಯಾತೆ! ಮೋದಿ ಆಳ್ವಿಕೆಯಲ್ಲಿ ಬೀಫ್ ರಫ್ತಿನಲ್ಲಿ ಭಾರತ ಉತ್ತುಂಗಕ್ಕೇರಿದೆ. ಗೋವಾದ ಬಿಜೆಪಿ ಸರ್ಕಾರ ಗೋಮಾಂಸದ ಕೊರತೆ ನೀಗಿಸಲು ರಾಜ್ಯದಿಂದಾಗುವ ಪೂರೈಕೆಯ ಕಡೆ ಆಸೆಯಿಂದ ನೋಡುತ್ತಿದೆ! ಇದಕ್ಕೆ ಬಿಜೆಪಿ ಕರ್ನಾಟಕದ
ಅಭಿಪ್ರಾಯ ಮತ್ತು ಉತ್ತರ ಏನು? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಆಳ್ವಿಕೆಯಿರುವ ಗೋವಾ ರಾಜ್ಯವು ಪ್ರತಿದಿನ ಸುಮಾರು 15-20 ಟನ್ ಗೋಮಾಂಸವನ್ನು ಬಳಸುತ್ತದೆ. ಅಲ್ಲಿ ಗೋಹತ್ಯೆ, ಗೋಮಾಂಸ ನಿಷೇಧವಿಲ್ಲ. ಆದರೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ಸರ್ಕಾರದ ಮಾಂಸ ಸಂಕೀರ್ಣವನ್ನು ಸ್ಥಗಿತಗೊಳಿಸಿದ್ದರಿಂದ, ರಾಜ್ಯದ ಗೋಮಾಂಸ ವ್ಯಾಪಾರಿಗಳು ಮುಖ್ಯವಾಗಿ ಕರ್ನಾಟಕದಿಂದ ಮಾಂಸವನ್ನು ಆಮದು ಮಾಡಿಕೊಳ್ಳುತ್ತಾರೆ.

“ಅಂಗಡಿಗಳನ್ನು ಮುಚ್ಚಲಾಗಿದೆ. ಆದಾಯವಿಲ್ಲ. ಸಾವಿರಾರು ಕಾರ್ಮಿಕರು ಮತ್ತು ಕುಟುಂಬಗಳು ಈ ವ್ಯಾಪಾರವನ್ನು ಅವಲಂಬಿಸಿವೆ. ಇದಲ್ಲದೆ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಬೇಕರಿಗಳಿವೆ. ಈ ಋತುವಿನಲ್ಲಿ ಮತ್ತು ಹೊಸ ವರ್ಷದಲ್ಲಿ ಪ್ರವಾಸಿಗರಿಂದ ಗೋಮಾಂಸಕ್ಕೆ ಸಾಕಷ್ಟು ಬೇಡಿಕೆಯಿದೆ” ಎಂದು ಸ್ಥಳೀಯರೊಬ್ಬರ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಕರ್ನಾಟಕದ ಮಾಂಸ ವ್ಯಾಪಾರಿಗಳ ಸಂಘವು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡಲು ನಾವು ಕಾಯುತ್ತಿದ್ದೇವೆ. ಗೋವಾ ಸರ್ಕಾರ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಪರಿಹರಿಸಬೇಕು. ಗೋವಾ ಗೋಮಾಂಸ ಪೂರೈಕೆಗಾಗಿ ಕರ್ನಾಟಕದ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಆದರೆ ಒಂದು ವಾರದಿಂದ ನಾವು ಕರ್ನಾಟಕದಿಂದ ಮಾಂಸ ಅಥವಾ ಜಾನುವಾರುಗಳನ್ನು ಸ್ವೀಕರಿಸಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳು ಅದಾನಿ ಪರವಾಗಿವೆಯೆಂದು ದಾಖಲೆ ಬಿಡುಗಡೆ ಮಾಡಿದ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...