Homeಮುಖಪುಟಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ)‌ ನೇತೃತ್ವದ LDF ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್‌ ನೇತೃತ್ವದ UDF ಎರಡನೇ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರಸ್ತುತ ಈ ಚುನಾವಣೆಯು 2021 ರ ಕೇರಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ಕೇರಳ ಚುನಾವಣೆಯು LDF‌ ಮತ್ತು UDF ‌ಗಳ ನಡುವೆ ಭಾರೀ ಸ್ಪರ್ಧೆಯನ್ನು ಏರ್ಪಡಿಸಲಿದ್ದು, ಬಿಜೆಪಿ ಹೆಚ್ಚುವರಿ ಆಟಗಾರನಂತೆ ಕಣಕ್ಕಿಯಲಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೇರಳ ರಾಜಕೀಯದ ಸಂಪ್ರದಾಯದಂತೆ ಒಂದು ಬಾರಿ LDF ಬಂದರೆ ಇನ್ನೊಂದು ಬಾರಿ UDF ಅಧಿಕಾರ ಹಿಡಿಯುತ್ತಿತ್ತು. ಒಂದು ವೇಳೆ ಮುಂದಿನ ಬಾರಿ LDF ಅಧಿಕಾರ ಹಿಡಿದರೆ ಕೇರಳ ರಾಜಕೀಯದ ಎಲ್ಲಾ ದಾಖಲೆಗಳನ್ನು ಮುರಿದಂತಾಗುತ್ತದೆ.

ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಒಟ್ಟು 941 ರಲ್ಲಿ 514 ಮತ್ತು ಯುಡಿಎಫ್‌ 375 ಗ್ರಾಮ ಪಂಚಾಯಿತಿಗಳನ್ನು ಗೆದ್ದಿದ್ದು, ಇದು ಭಾರೀ ಸ್ಪರ್ಧೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಕೇವಲ 23 ಗ್ರಾಮ ಪಂಚಾಯಿತಿಗಳನ್ನು ಮಾತ್ರ ಗೆಲ್ಲುವಲ್ಲಿ ಸಫಲವಾಗಿದೆ. ವಿರೋಧ ಪಕ್ಷಗಳ ನಿರಂತರ ಆರೋಪಗಳ ಮಧ್ಯೆಯೂ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಜನಮನ್ನಣೆ ಪಡೆಯಲು ಯಶಸ್ವಿಯಾಗಿದೆ.

ಇದನ್ನೂ ಓದಿ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವು ಕಂಡ ಎಡಪಕ್ಷಗಳು

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ
PC: Peoples Democracy

ಎಲ್ಲರಿಗೂ ಸುರಕ್ಷಿತ ವಸತಿ ಒದಗಿಸುವ ಗುರಿಯನ್ನು ಹೊಂದಿರುವ ವಸತಿ ಯೋಜನೆ, ಲೈಫ್ ಮಿಷನ್ ಸೇರಿದಂತೆ ರಾಜ್ಯ ಸರ್ಕಾರದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಹಳಿ ತಪ್ಪಿಸಲು ಯುಡಿಎಫ್ ಮತ್ತು ಎನ್‌ಡಿಎ ಪ್ರಯತ್ನಿಸಿದ್ದವು. ಆದಾಗ್ಯೂ, ಎಲ್‌ಡಿಎಫ್‌ ಅಭಿವೃದ್ಧಿ ಚಟುವಟಿಕೆಗಳತ್ತ ಗಮನ ಹರಿಸಿ, ಯಶಸ್ವಿ ಕಂಡಿದೆ.

ಬಿಜೆಪಿ ನೀಡಬಲ್ಲುದೆ ಪೈಪೋಟಿ?

ಮೇಲ್ನೋಟಕ್ಕೆ ಎಲ್‌ಡಿಎಫ್‌ ಮತ್ತು ಬಿಜೆಪಿ ನಡುವೆ ಹೋರಾಟ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದರೂ, ಕೇರಳದಲ್ಲಿ ಬಿಜೆಪಿ ಅಂತಹ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಸ್ಥಳೀಯ ಚುನಾವಣೆಯಲ್ಲಿ ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿದ್ದ ಬಿಜೆಪಿ ಉನ್ನತ ನಾಯಕರನ್ನೇ ಕಣಕ್ಕಿಳಿಸಿತ್ತು. ಅದರೂ, 2015 ಕ್ಕಿಂತ ಸ್ವಲ್ಪ ಪ್ರಾಮಾಣದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದರೂ, ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕೇವಲ 23 ಗ್ರಾಮ ಪಂಚಾಯತಿಗಳನ್ನು ಗೆದ್ದರೂ, ಯಾವುದೇ ಬ್ಲಾಕ್ ಪಂಚಾಯತ್, ಜಿಲ್ಲಾ ಪಂಚಾಯತಿಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಕೇವಲ ಒಂದು ಪುರಸಭೆ (ಪಾಲಕ್ಕಾಡ್)ಯನ್ನು ಗೆದ್ದಿರುವ ಎನ್‌ಡಿಎ, ಪಂದಲಂನಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನೆಲ್ಲಿಯೂ ತೀವ್ರ ಪೈಪೋಟಿಯನ್ನು ನೀಡಿಲ್ಲ. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿರುದ್ಧ ಜನರನ್ನು ಸಂಘಟಿಸುತ್ತಿದ್ದ ಬಿಜೆಪಿ/ಆರ್‌ಎಸ್‌ಎಸ್‌ ಸಂಘಟನೆಗಳು 2018 ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ಪಥನಂತಿಟ್ಟ ಜಿಲ್ಲೆಯ ಪಂದಲಂನಲ್ಲಿಯೂ ತಮ್ಮ ನೆಲೆಯನ್ನು ಕಳೆದುಕೊಂಡಿದೆ.

ಕೇರಳ

ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ತನ್ನ ರಾಜ್ಯ ನಾಯಕರನ್ನೇ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದ್ದ ತಿರುವನಂತಪುರಂ ಕಾರ್ಪೊರೇಶನ್‌ನಲ್ಲಿ, ಈ ಹಿಂದೆ ಪಡೆದಿದ್ದಷ್ಟೂ ಸ್ಥಾನಗಳನ್ನೂ ಕೂಡ ಉಳಿಸಿಕೊಳ್ಳಲಷ್ಟೇ ಸೀಮಿತವಾಗಿದೆ. ತಿರುವನಂತಪುರಂ ಪಾಲಿಕೆಯ 100 ಸ್ಥಾನಗಳಲ್ಲಿ ಎಲ್‌ಡಿಎಫ್‌ 51 ಸ್ಥಾನಗಳನ್ನು ಪಡೆದರೆ, ಎನ್‌ಡಿಎ 34, ಯುಡಿಎಫ್ 10 ಮತ್ತು ಇತರರು 5 ಸ್ಥಾನಗಳನ್ನು ಗೆದ್ದಿದ್ದಾರೆ. 2015 ರಲ್ಲಿ ಎಲ್‌ಡಿಎಫ್ 42 ವಾರ್ಡ್‌ಗಳನ್ನು ಗೆದ್ದಿತ್ತು ಮತ್ತು ಆಗ ಬಿಜೆಪಿ ಮೈತ್ರಿಕೂಟವು ಅದೇ 34 ಸ್ಥಾನಗಳನ್ನು ಹೊಂದಿತ್ತು.

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಮತ್ತು ಯುಡಿಎಫ್‌ ಎರಡೂ ಮೈತ್ರಿಕೂಟಗಳು ಎಲ್‌ಡಿಎಫ್‌ ವಿರುದ್ಧ ಪ್ರಚಾರ ಮಾಡಿದರೂ, ಅವುಗಳು ಎಲ್‌ಡಿಎಫ್‌ನ ಸ್ಥಾನಗಳನ್ನ ಕಸಿದುಕೊಳ್ಳಲು ಅಂತಹ ಸಫಲತೆ ಕಂಡಿಲ್ಲ. ಬದಲಾಗಿದೆ, ಈ ಎರಡು ಮೈತ್ರಿಕೂಟಗಳ ಸ್ಥಾನಗಳೇ ಚದುರಿ ಹೋಗಿದೆ.

ಇದನ್ನೂ ಓದಿ: ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...