Homeಕರ್ನಾಟಕರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಕಾರ್ಮಿಕ ಸಂಘದ ಹೋರಾಟ ಇಂದಿಗೆ 40 ನೇ ದಿನಕ್ಕೆ ಕಾಲಿಟ್ಟಿದೆ

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಮಿಕ ಸಂಘದ ಹೋರಾಟ 40 ನೇ ದಿನಕ್ಕೆ ಕಾಲಿಟ್ಟಿದ್ದು ಇಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕ ಸಂಘದ 3000 ಕ್ಕೂ ಹೆಚ್ಚು ಕಾರ್ಮಿಕರ ಜೊತೆಗೆ ಇತರ ಹಲವಾರು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರಸನ್ನಕುಮಾರ್ ಚಕ್ಕೆರೆ, “ಶೀಘ್ರವಾಗಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು. ಇದು ಕೇವಲ ನಮ್ಮ ಸಮಸ್ಯೆ ಮಾತ್ರ ಅಲ್ಲ ದೇಶದ ಎಲ್ಲಾ ಬಹುರಾಷ್ಟ್ರೀಯ ಕಂಪನಿಗಳ ಸಮಸ್ಯೆ. ಕಾರ್ಮಿಕರನ್ನು ಯಂತ್ರದಂತೆ ದುಡಿಸಿ ಐದತ್ತು ವರ್ಷಗಳಲ್ಲಿ ಮನೆಗೆ ಕಳುಹಿಸುತ್ತಿದ್ದು, ಈ ಶೋಷಣೆ ನಿಲ್ಲಬೇಕಿದೆ. ಕಂಪನಿಯ ಆಡಳಿತ ವರ್ಗ ಯಾವುದೇ ಕಾನೂನುಗಳಿಗೆ ಬೆಲೆ ಕೊಡದೆ, ಸರ್ಕಾರದ ಮಾತಿಗೂ ಬೆಲೆ ಕೊಡದೆ ಕಾರ್ಮಿಕರನ್ನು ಬೀದಿಗೆ ತಳ್ಳಿವೆ. ಜಿಲ್ಲಾಧಿಕಾರಿಗಳು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಎಐಟಿಯುಸಿ ರಾಜ್ಯಾಧ್ಯಕ್ಷ ಅಪ್ಪಣ್ಣ ಮಾತನಾಡಿ, “ವಿದೇಶಿ ಕಂಪನಿಗಳು ಭಾರತದ ಕಾನೂನುಗಳಿಗೆ ಬೆಲೆಕೊಟ್ಟು ಗೌರವಿಸಬೇಕು ಇಲ್ಲವಾದರೆ ನಮ್ಮ ನೆಲ ಜಲ ವಿದ್ಯುತ್ ವಾಪಸ್ ಪಡೆಯ ಬೇಕಾಗುತ್ತದೆ. ಜೊತೆಗೆ ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ 4 ಸಂಹಿತೆಗಳಾಗಿ ಮಾಡಿರುವುದು ದುರಾದೃಷ್ಟಕರ, ಈ ಕಾಯ್ದೆಗಳು ಕೂಡಾ ವಾಪಸ್ ಆಗಬೇಕು” ಎಂದು ಒತ್ತಾಯಿಸಿದರು.

ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ ಮಾತನಾಡಿ, “ರಾಜ್ಯದ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಆದಷ್ಟು ಬೇಗ ಸಮಸ್ಯೆ ಬಗೆ ಹರಿಸದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಇಲ್ಲವೆಂದರೆ ಕಾರ್ಮಿಕರು ’ರಕ್ತ ಪತ್ರ ಚಳುವಳಿ’ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ. ರಾಜ್ಯ ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವ ಕಾರ್ಮಿಕ ಸಂಘವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ” ಎಂದು ಆರೋಪಿಸಿದರು.

ಮಾರಸಂದ್ರ ಮುನಿಯಪ್ಪ ಮಾತನಾಡಿ, “80 ಪರ್ಸೆಂಟ್ ರಾಜಕಾರಣಿಗಳು ಮತಪಡೆದು ಈಗ ನಿದ್ರಿಸುತ್ತಿದ್ದಾರೆ. ಎಚ್ಚೆತ್ತು ರೈತ-ದಲಿತ-ಕಾರ್ಮಿಕರ ಸಮಸ್ಯೆ ಬಗೆಹರಿಸದಿದ್ದರೆ ಯಾವುದೇ ಸರ್ಕಾರಕ್ಕೆ ಉಳಿಗಾಲವಿಲ್ಲ. ಕೇಂದ್ರ ಸರ್ಕಾರದ ಖಾಸಗೀಕರಣವೇ ಇದಕ್ಕೆ ಕಾರಣ. ಸರ್ಕಾರ ಖಾಸಗೀಕರಣವನ್ನು ಕೈಬಿಡಬೇಕು. ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಬಾರದು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

 

ರಾಮನಗರ ರೈತ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ ಮಾತನಾಡಿ, “ದುಡಿಯುವ ಕೈಗಳು ದೇಶಕ್ಕೆ ಆಧಾರ. ರೈತ-ಕಾರ್ಮಿಕರಿಂದ ದೇಶ ನಡೆಯುತ್ತಿದೆ. ಅವರಿಗೆ ಅನ್ಯಾಯವಾದರೆ ರೈತ ಸಂಘ ಸದಾ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಶೀಘ್ರವಾಗಿ ಸಮಸ್ಯೆ ಬಗೆಹರಿಯದಿದ್ದರೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ” ಎಚ್ಚರಿಸಿದರು.

ಪ್ರತಿಭಟನೆಗೆ ಜಿಗಣೆ ಕಾರ್ಮಿಕ ಸಂಘದ ಒಕ್ಕೂಟ ಮತ್ತು ಫೆಡೆರಲ್ ಮೊಗುಲ್ ಕಾರ್ಮಿಕ ಸಂಘಟನೆ ತನ್ನ ಸಂಪೂರ್ಣ ಬೆಂಬಲ ನೀಡಿತು.

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಆಡಳಿತ ಮಂಡಳಿ ತಮ್ಮ ಮೇಲೆ ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿದ ಕಾರಣಕ್ಕಾಗಿ, ಕಂಪೆನಿಯು ಕಾರ್ಮಿಕರು ಮುಷ್ಕರ ಹೂಡಿದ್ದಾರೆ ಎಂದು ಆರೋಪಿಸಿ ಲಾಕೌಟ್ ಘೋಷಿಸಿತ್ತು. ಈ ನಡುವೆ ರಾಜ್ಯ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೈರೇಗೌಡ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉಪಾಧ್ಯಕ್ಷರಾದ ಅನುಸೂಯ, ಜಿಲ್ಲಾಧ್ಯಕ್ಷರಾದ ಬೈರೇಗೌಡ, ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ, ಬಿಎಸ್ಪಿ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ, ಅನ್ನದಾತ ರಕ್ಷಣಾ ವೇದಿಕೆ ಮುತ್ತುರಾಜ್, ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಅಪ್ಪಣ್ಣ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಉಮೇಶ್ ಸೇರಿದಂತೆ ಇನ್ನೂ ಹಲವಾರು ನಾಯಕರು ಪ್ರತಿಭಟನೆಗೆ ನೇತೃತ್ವ ನೀಡಿದ್ದರು.

ಇದನ್ನೂ ಓದಿ:ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...