Homeಕರ್ನಾಟಕರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಕಾರ್ಮಿಕ ಸಂಘದ ಹೋರಾಟ ಇಂದಿಗೆ 40 ನೇ ದಿನಕ್ಕೆ ಕಾಲಿಟ್ಟಿದೆ

- Advertisement -
- Advertisement -

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಮಿಕ ಸಂಘದ ಹೋರಾಟ 40 ನೇ ದಿನಕ್ಕೆ ಕಾಲಿಟ್ಟಿದ್ದು ಇಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕ ಸಂಘದ 3000 ಕ್ಕೂ ಹೆಚ್ಚು ಕಾರ್ಮಿಕರ ಜೊತೆಗೆ ಇತರ ಹಲವಾರು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರಸನ್ನಕುಮಾರ್ ಚಕ್ಕೆರೆ, “ಶೀಘ್ರವಾಗಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು. ಇದು ಕೇವಲ ನಮ್ಮ ಸಮಸ್ಯೆ ಮಾತ್ರ ಅಲ್ಲ ದೇಶದ ಎಲ್ಲಾ ಬಹುರಾಷ್ಟ್ರೀಯ ಕಂಪನಿಗಳ ಸಮಸ್ಯೆ. ಕಾರ್ಮಿಕರನ್ನು ಯಂತ್ರದಂತೆ ದುಡಿಸಿ ಐದತ್ತು ವರ್ಷಗಳಲ್ಲಿ ಮನೆಗೆ ಕಳುಹಿಸುತ್ತಿದ್ದು, ಈ ಶೋಷಣೆ ನಿಲ್ಲಬೇಕಿದೆ. ಕಂಪನಿಯ ಆಡಳಿತ ವರ್ಗ ಯಾವುದೇ ಕಾನೂನುಗಳಿಗೆ ಬೆಲೆ ಕೊಡದೆ, ಸರ್ಕಾರದ ಮಾತಿಗೂ ಬೆಲೆ ಕೊಡದೆ ಕಾರ್ಮಿಕರನ್ನು ಬೀದಿಗೆ ತಳ್ಳಿವೆ. ಜಿಲ್ಲಾಧಿಕಾರಿಗಳು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದು ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಎಐಟಿಯುಸಿ ರಾಜ್ಯಾಧ್ಯಕ್ಷ ಅಪ್ಪಣ್ಣ ಮಾತನಾಡಿ, “ವಿದೇಶಿ ಕಂಪನಿಗಳು ಭಾರತದ ಕಾನೂನುಗಳಿಗೆ ಬೆಲೆಕೊಟ್ಟು ಗೌರವಿಸಬೇಕು ಇಲ್ಲವಾದರೆ ನಮ್ಮ ನೆಲ ಜಲ ವಿದ್ಯುತ್ ವಾಪಸ್ ಪಡೆಯ ಬೇಕಾಗುತ್ತದೆ. ಜೊತೆಗೆ ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ 4 ಸಂಹಿತೆಗಳಾಗಿ ಮಾಡಿರುವುದು ದುರಾದೃಷ್ಟಕರ, ಈ ಕಾಯ್ದೆಗಳು ಕೂಡಾ ವಾಪಸ್ ಆಗಬೇಕು” ಎಂದು ಒತ್ತಾಯಿಸಿದರು.

ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ ಮಾತನಾಡಿ, “ರಾಜ್ಯದ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಆದಷ್ಟು ಬೇಗ ಸಮಸ್ಯೆ ಬಗೆ ಹರಿಸದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಇಲ್ಲವೆಂದರೆ ಕಾರ್ಮಿಕರು ’ರಕ್ತ ಪತ್ರ ಚಳುವಳಿ’ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ. ರಾಜ್ಯ ಸರ್ಕಾರ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿರುವ ಕಾರ್ಮಿಕ ಸಂಘವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ” ಎಂದು ಆರೋಪಿಸಿದರು.

ಮಾರಸಂದ್ರ ಮುನಿಯಪ್ಪ ಮಾತನಾಡಿ, “80 ಪರ್ಸೆಂಟ್ ರಾಜಕಾರಣಿಗಳು ಮತಪಡೆದು ಈಗ ನಿದ್ರಿಸುತ್ತಿದ್ದಾರೆ. ಎಚ್ಚೆತ್ತು ರೈತ-ದಲಿತ-ಕಾರ್ಮಿಕರ ಸಮಸ್ಯೆ ಬಗೆಹರಿಸದಿದ್ದರೆ ಯಾವುದೇ ಸರ್ಕಾರಕ್ಕೆ ಉಳಿಗಾಲವಿಲ್ಲ. ಕೇಂದ್ರ ಸರ್ಕಾರದ ಖಾಸಗೀಕರಣವೇ ಇದಕ್ಕೆ ಕಾರಣ. ಸರ್ಕಾರ ಖಾಸಗೀಕರಣವನ್ನು ಕೈಬಿಡಬೇಕು. ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಬಾರದು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

 

ರಾಮನಗರ ರೈತ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ ಮಾತನಾಡಿ, “ದುಡಿಯುವ ಕೈಗಳು ದೇಶಕ್ಕೆ ಆಧಾರ. ರೈತ-ಕಾರ್ಮಿಕರಿಂದ ದೇಶ ನಡೆಯುತ್ತಿದೆ. ಅವರಿಗೆ ಅನ್ಯಾಯವಾದರೆ ರೈತ ಸಂಘ ಸದಾ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಶೀಘ್ರವಾಗಿ ಸಮಸ್ಯೆ ಬಗೆಹರಿಯದಿದ್ದರೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ” ಎಚ್ಚರಿಸಿದರು.

ಪ್ರತಿಭಟನೆಗೆ ಜಿಗಣೆ ಕಾರ್ಮಿಕ ಸಂಘದ ಒಕ್ಕೂಟ ಮತ್ತು ಫೆಡೆರಲ್ ಮೊಗುಲ್ ಕಾರ್ಮಿಕ ಸಂಘಟನೆ ತನ್ನ ಸಂಪೂರ್ಣ ಬೆಂಬಲ ನೀಡಿತು.

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಆಡಳಿತ ಮಂಡಳಿ ತಮ್ಮ ಮೇಲೆ ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿದ ಕಾರಣಕ್ಕಾಗಿ, ಕಂಪೆನಿಯು ಕಾರ್ಮಿಕರು ಮುಷ್ಕರ ಹೂಡಿದ್ದಾರೆ ಎಂದು ಆರೋಪಿಸಿ ಲಾಕೌಟ್ ಘೋಷಿಸಿತ್ತು. ಈ ನಡುವೆ ರಾಜ್ಯ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬೈರೇಗೌಡ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉಪಾಧ್ಯಕ್ಷರಾದ ಅನುಸೂಯ, ಜಿಲ್ಲಾಧ್ಯಕ್ಷರಾದ ಬೈರೇಗೌಡ, ಬಿಎಸ್ಪಿ ರಾಜ್ಯಾಧ್ಯಕ್ಷರಾದ ಕೃಷ್ಣಮೂರ್ತಿ, ಬಿಎಸ್ಪಿ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ, ಅನ್ನದಾತ ರಕ್ಷಣಾ ವೇದಿಕೆ ಮುತ್ತುರಾಜ್, ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಅಪ್ಪಣ್ಣ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಉಮೇಶ್ ಸೇರಿದಂತೆ ಇನ್ನೂ ಹಲವಾರು ನಾಯಕರು ಪ್ರತಿಭಟನೆಗೆ ನೇತೃತ್ವ ನೀಡಿದ್ದರು.

ಇದನ್ನೂ ಓದಿ:ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...