Homeಕರೋನಾ ತಲ್ಲಣಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

- Advertisement -
- Advertisement -

ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ  ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ. ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.

ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಬೇಕಿರುವ ಸರಕಾರವು ಜನವರಿ 1ರಿಂದ ಸೀಮಿತ ಮಟ್ಟದಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ಶಾಲಾ ಕೊಠಡಿಗಳಲ್ಲೇ ಆರಂಭಿಸುವುದಾಗಿ ಹೇಳಿದೆ. ಈ ನಿರ್ಧಾರಕ್ಕೆ ರಾಜ್ಯದ ಕೊರೋನ ಕಾರ್ಯಪಡೆ – ತಾಂತ್ರಿಕ ಸಲಹಾ ಸಮಿತಿಯು 10 ಮತ್ತು 12ನೆ ತರಗತಿಗಳನ್ನು ಜನವರಿ 1 ರಿಂದ ತೆರೆಯಬಹುದೆಂದೂ, 6 ರಿಂದ 9 ಮತ್ತು 11ನೇ ತರಗತಿಗಳಿಗೆ ಜನವರಿ 14ರಿಂದ ವಿದ್ಯಾಗಮ ಆರಂಭಿಸಬಹುದೆಂದೂ, 6ಕ್ಕಿಂತ ಕೆಳಗಿನ ತರಗತಿಗಳನ್ನು ತೆರೆಯಲೇಬಾರದೆಂದೂ ಸಲಹೆ ನೀಡಿರುವುದನ್ನು ಪರಿಗಣಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಸಂಪೂರ್ಣವಾಗಿ ಅವೈಜ್ಞಾನಿಕವೂ, ಅಪಾಯಕಾರಿಯೂ ಆಗಿದ್ದು, ಮಕ್ಕಳ ಭವಿಷ್ಯವನ್ನು ಶಾಶ್ವತವಾಗಿ ಕೆಡಿಸಲಿದೆ. ಈ ಸಲಹೆಯು ಈ ಶೈಕ್ಷಣಿಕ ವರ್ಷವಿಡೀ ಶಾಲೆಗಳನ್ನು ತೆರೆಯದಿರುವ ಹುನ್ನಾರವೆಂಬುದು ಸ್ಪಷ್ಟವಾಗುತ್ತದೆ ಎಂದು ಸಮಿತಿಯು ಆರೋಪಿಸಿದೆ.

ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಈ ವರದಿಯ ಪ್ರಕಾರ, ಬಡ ವಿದ್ಯಾರ್ಥಿಗಳು ಒಂದು ವರ್ಷ ಕಲಿಕೆಯಿಂದ ವಂಚಿತರಾದರೆ 3-15 ವಯಸ್ಸಿನ ಮಕ್ಕಳು ಹಿಂದಿನದನ್ನು ಮರೆತು, ಮುಂದಿನದನ್ನು ಕಲಿಯಲಾಗದೆ ಕಷ್ಟಕ್ಕೀಡಾಗಲಿದ್ದಾರೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.

ಜೊತೆಗೆ, ಈ ಸಂಕಷ್ಟಕ್ಕೆ ಒಳಗಾಗುವ ಬಹುತೇಕ ಮಕ್ಕಳು ಅತ್ಯಂತ ಕೆಳಸ್ತರದ ಸಮುದಾಯಗಳಿಗೆ ಸೇರಿದವರಾಗಿದ್ದು, ಈಗಾಗಲೇ ಬಾಲ್ಯ ವಿವಾಹ ಮತ್ತು ಮಕ್ಕಳ ಸಾಗಾಣಿಕೆ ಹೆಚ್ಚಿರುವ ಸಂದರ್ಭದಲ್ಲಿ, ಶಾಲೆ ತೊರೆದು ಬಾಲ ಕಾರ್ಮಿಕ ಹಾಗು ಜೀತ ಕಾರ್ಮಿಕರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ರಾಜ್ಯವು ಸೇರಿದಂತೆ ವಿಶ್ವದಾದ್ಯಂತದಿಂದ ಲಭ್ಯವಿರುವ ವರದಿಗಳನುಸಾರ ಕೊರೊನಾ ಸೋಂಕು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಯಾವ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. 10ರಿಂದ 20ರವರೆಗಿನ ಮಕ್ಕಳಲ್ಲೂ ಅತಿ ಸೌಮ್ಯ ಸೋಂಕಾಗಿ, ಯಾವುದೇ ಸಮಸ್ಯೆಯನ್ನುಂಟು ಮಾಡದೆ ವಾಸಿಯಾಗುತ್ತದೆ ಎಂದು ವರದಿಯಾಗಿದೆ ಎಂದು ಮಾಹಿತಿ ನೀಡಿದೆ.

ಚಿತ್ರ: ಮೈಸೂರು ಟುಡೆ

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಇಂತಹ ಸಂದರ್ಭದಲ್ಲಿ ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು ಈ ವೈಜ್ಞಾನಿಕ ಸತ್ಯಕ್ಕೆ ತೀರಾ ತದ್ವಿರುದ್ಧವಾದ, ಅಸಂಬದ್ಧವಾದ ಸಲಹೆಯನ್ನು ನೀಡಿರುವುದು ಖಂಡನೀಯವಾಗಿದ್ದು, ಮಕ್ಕಳ ಹಿತಾಸಕ್ತಿಗಳಿಗೆ ಮಾರಕವಾದ ಸಲಹೆಗಳನ್ನು ನೀಡುವ ತಾಂತ್ರಿಕ ಸಮಿತಿಯನ್ನು ಈ ಕೂಡಲೇ ರದ್ದು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದೆ.

ಕೊರೊನಾ ಸೋಂಕಿನಿಂದ ಯಾವುದೇ ಸಮಸ್ಯೆ ಇಲ್ಲವೆಂದು ಹಲವು ವರದಿಗಳು ಬಂದಿರುವ ಕಾರಣ, ಈ ಕೂಡಲೇ ಶಾಲೆಗಳನ್ನು ತೆರೆಯುವುದರಿಂದ ಜೂನ್ ವರೆಗೆ ಈ ಶೈಕ್ಷಣಿಕ ವರ್ಷದ ಪಾಠಗಳನ್ನು ಕಲಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಸಮಿತಿ ಆಗ್ರಹಿಸಿದೆ.

ಇದಲ್ಲದೇ, ಶಾಲೆಗಳನ್ನು ತೆರೆಯದೇ ಇರುವುದು ಮಕ್ಕಳ ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಮಾನವಾಧಿಕಾರ ಮತ್ತಿತರ ಎಲ್ಲಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅದರಲ್ಲೂ 3-10 ವಯಸ್ಸಿನ ಮಕ್ಕಳ, ದೈಹಿಕ, ಮಾನಸಿಕ, ಶೈಕ್ಷಣಿಕ ಮತ್ತು ಮಿದುಳಿನ ಬೆಳವಣಿಗೆಗಳ ಮೇಲೆ ಶಾಶ್ವತವಾದ ಹಾನಿಯನ್ನುಂಟು ಮಾಡಲಿವೆ ಎಂದು ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಇವುಗಳ ನಡುವೆ, ಶಾಲೆ ಆರಂಭಿಸದಿದ್ದರೇ, ಸಮಿತಿ ಈ ಹಿಂದೆಯೇ ತಿಳಿಸಿರುವಂತೆ ನಮ್ಮೂರ ಶಾಲೆಗಳನ್ನು ನಾವೇ ತೆರೆಯುವ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಲಿದ್ದೇವೆ ಎಂದು ಘೋಷಿದ್ದಾರೆ. ಜೊತೆಗೆ ಕರ್ನಾಟಕದ ಬಡವಿದ್ಯಾರ್ಥಿಗಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Mushroom rasam likely to be included in midday meals at Karnataka government schools- The New Indian Express
PC: EPS

ಮಾವಳ್ಳಿ ಶಂಕರ್, ಜ್ಯೋತಿ ಕೆ, ವಾಸುದೇವ ರೆಡ್ಡಿ ಕೆ, ಸರೋವರ್ ಬೆಂಕೀಕೆರೆ, ಡಾ.ಶ್ರೀನಿವಾಸ್, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ, ಪುಷ್ಪರಾಜ್ ಬೋಳೂರು, ಡಾ. ನಿರಂಜನಾರಾಧ್ಯ ವಿಪಿ, ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಡಾ.ಯೋಗಾನಂದ ರೆಡ್ಡಿ,  ಡಾ. ಸಿದ್ದನಗೌಡ ಪಾಟೀಲ, ಡಾ. ವಡ್ಡಗೆರೆ ನಾಗರಾಜಯ್ಯ, ಶ್ರೀಪಾದ ಭಟ್, ಡಾ. ಬಿಆರ್ ಮಂಜುನಾಥ್, ಬಿ.ಆರ್ ಭಾಸ್ಕರ್ ಪ್ರಸಾದ್, ಡಾ.ಕೆಎಸ್ ಜನಾರ್ಧನ, ಡಾ. ಹೆಚ್ ಜಿ ಜಯಲಕ್ಷ್ಮಿ, ಪ್ರೊ. ನರೇಂದ್ರ ನಾಯಕ್,  ಡಾ. ಪಿವಿ ಭಂಡಾರಿ, ಡಾ. ವಾಣಿ ಕೋರಿ, ಡಾ. ಬಾಲಸರಸ್ವತಿ, ಡಾ. ಭಾನು ಪ್ರಕಾಶ್ ಎಎಸ್, ರಾಜಾರಾಂ ತಲ್ಲೂರು, ಜಿ ರವಿ, ಪಾರ್ಥಸಾರಥಿ ಕೆಎಸ್, ಭಾರತಿ ಪ್ರಶಾಂತ್ ಮುಂತಾದವರು ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...