Homeಮುಖಪುಟಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

- Advertisement -
- Advertisement -

ನೂತನ ಪಾರ್ಲಿಮೆಂಟ್ ಭೂಮಿ ಪೂಜೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಿಲ್ಲವೆಂಬ ಚರ್ಚೆ ಆರಂಭವಾಗಿದೆ. ನಿಜಕ್ಕೂ ಇಂತಹ ಸಂವಿಧಾನ ವಿರೋಧಿ ನಡೆ ಸಹ್ಯವಲ್ಲ. ರಾಷ್ಟ್ರಪತಿಗಳು ದಲಿತರೆಂಬ ಕಾರಣಕ್ಕೆ ಇಂತಹ ಅಮಾನವೀಯ ಕೃತ್ಯದಲ್ಲಿ ಕೇಂದ್ರ ಸರ್ಕಾರವೇ ಭಾಗಿಯಾಗಿದ್ದು ಖುದ್ದು ಪ್ರಧಾನ ಮಂತ್ರಿಗಳೇ ಇದರ ಸಹಭಾಗಿಯಾಗಿರುವುದು ವಿಷಾದನೀಯ ಸಂಗತಿ.

ಇದರ ಜೊತೆಗೆ ಮತ್ತೊಂದು ಸಂವಿಧಾನ ವಿರೋಧಿ ಕೃತ್ಯವೂ ಅಂದು ನಡೆದು ಹೋಗಿದೆ. ಭಾರತದ ಸಂವಿಧಾನವು ಧರ್ಮ, ಲಿಂಗ, ಜಾತಿ, ಜನಾಂಗ, ಪ್ರದೇಶಗಳ ಅಧಾರದಲ್ಲಿ ತಾರತಮ್ಯ ಸಲ್ಲದು ಎಂದು ಹೇಳಿರುವುದು ನಮಗೆಲ್ಲ ತಿಳಿದ ಸಂಗತಿಯಾಗಿದೆ. ಆದರೆ ನೂತನ ಪಾರ್ಲಿಮೆಂಟ್ ಕಟ್ಟಡದ ಭೂಮಿ ಪೂಜೆಯನ್ನು ಕೇವಲ ಬ್ರಾಹ್ಮಣ ಪುರೋಹಿತರು ನೆರವೇರಿಸಿರುವುದು ಸಂವಿಧಾನ ವಿರೋಧಿಯೇ ಆಗಿದೆ.ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ಹಿಂದೂ ಧರ್ಮದಲ್ಲಿ ಬಹುತ್ವ ಪೂಜಾರಾಧನೆ ಇದೆ. ನೂರಾರು ಪಂಥದ ಪೂಜಾವಿಧಿಗಳಿವೆ. ಅಣ್ಣಮ್ಮ, ಮಾರಮ್ಮ, ಹುಲಿಗೆಮ್ಮ, ಉಕ್ಕಡದಮ್ಮ ಮುಂತಾದ ಮಾತೃಪ್ರಧಾನ ದೇವತೆಗಳಿಗೆ ಮಹಿಳಾ ಪೂಜಾರಿಗಳೂ ಇದ್ದಾರೆ. ಅದಲ್ಲದೆ ನಾಥ-ದತ್ತ ಪಂಥದಲ್ಲಿ ಶೂದ್ರ ಜಾತಿಗಳ ಪೂಜಾರಿಗಳಿದ್ದಾರೆ‌. ಲಿಂಗಾಯತ, ವೀರಶೈವ, ಬುಡಕಟ್ಟು, ದಲಿತ ಪೂಜಾರಿಗಳಿದ್ದಾರೆ. ದಕ್ಷಿಣ, ಈಶಾನ್ಯ, ಮಧ್ಯ ಭಾರತದಲ್ಲಿ ಹಲವು ರೀತಿಯ ಪೂಜಾರಿಕೆ ಇದ್ದು ಅದೆಲ್ಲವೂ ಅಬ್ರಾಹ್ಮಣ ಪೂಜಾ ಪದ್ಧತಿಗಳಾಗಿವೆ. ಹಿಂದೂ ಪೂಜಾವಿಧಿ ಬಹುತ್ವ ಪೂಜಾವಿಧಿಯಾಗಿದ್ದು ಬ್ರಾಹ್ಮಣರ ಪೂಜಾವಿಧಿ ಅದರ ಒಂದು ಸಣ್ಣ ಭಾಗವಷ್ಟೆ. ಅಂತಹದ್ದರಲ್ಲಿ ಕೇವಲ ಬ್ರಾಹ್ಮಣ ವಿಧಿವಿಧಾನಗಳ ಮೂಲಕ ಸಂವಿಧಾನಾತ್ಮಕ ಶಾಸಕಾಂಗದ ಕಟ್ಟಡಕ್ಕೆ ಭೂಮಿ ಪೂಜೆ ಮಾಡಿಸಿದ್ದು ಎಷ್ಟು ಸರಿ?

ಭಾರತದಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಇದ್ದಾರೆಯೇ? ಹಿಂದೂಗಳಲ್ಲಿಯೇ ಸಾವಿರಾರು ಜಾತಿಗಳಿವೆ. ಇವರೆಲ್ಲರನ್ನು ಬ್ರಾಹ್ಮಣರು ಹೇಗೆ ಪ್ರತಿನಿಧಿಸುತ್ತಾರೆ. ಭಾರತೀಯರೆಂದರೆ ಬೌದ್ಧ, ಜೈನ, ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಮುಂತಾದವರು. ಅಷ್ಟೇ ಅಲ್ಲ ಧರ್ಮವನ್ನು ನಂಬದವರೂ ಸಹ ಭಾರತೀಯರೆ. ಭಾರತ ಯಾವೊಂದು ಧರ್ಮದವರ ಸ್ವತ್ತಲ್ಲ. ಭಾರತದಲ್ಲಿರುವ ಸಮಸ್ತ ಜನರೂ ಭಾರತೀಯರೇ. ಎಲ್ಲರಿಗೂ ಇರುವುದು ಒಂದೇ ಸಂವಿಧಾನ. ಇಲ್ಲಿ ಯಾವುದೋ ಒಂದು ಧರ್ಮದವರು ಮಾತ್ರ ತೆರಿಗೆ ಕಟ್ಟುವುದಿಲ್ಲ. ಎಲ್ಲರೂ ತೆರಿಗೆ ಕಟ್ಟುತ್ತಾರೆ. ಆದ್ದರಿಂದ ಪಾರ್ಲಿಮೆಂಟ್ ಭೂಮಿ ಪೂಜೆಗೆ ಬ್ರಾಹ್ಮಣರೊಟ್ಟಿಗೆ, ಬೌದ್ಧ ಭಿಕ್ಕುಗಳು, ಜೈನ ಶ್ರಮಣರು, ಸಿಖ್ ಗುರುಗಳು, ಮೌಲ್ವಿ, ಪಾದ್ರಿ ಹಾಗೂ ನೂರಾರು ಹಿಂದೂ ಜಾತಿಗಳ ಪೂಜಾರಿಗಳು, ಮಹಿಳಾ ಪೂಜಾರಿಗಳು ಅಲ್ಲಿದ್ದು ಭೂಮಿ ಪೂಜೆ ನೆರವೇರಿಸಬೇಕಿತ್ತಲ್ಲವೇ?

ಇದನ್ನೂ ಓದಿ: ಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಇದೇನು ಹೊಸತಲ್ಲ. ಕಾಂಗ್ರೆಸ್ ಪಕ್ಷ ಬಾಬು ರಾಜೇಂದ್ರ ಪ್ರಸಾದರು ರಾಷ್ಟ್ರಪತಿಯಾಗಿದ್ದಾಗ 200 ಜನ ಬ್ರಾಹ್ಮಣರ ಪಾದ ಪೂಜೆ ಮಾಡಿದ್ದರು. ನೆಹರೂರವರು ಸ್ವತಂತ್ರ ಭಾಷಣ ಮಾಡಲು ಶಾಸ್ತ್ರ ಕೇಳಿ ಸಮಯ ನಿಗಧಿಗೊಳಿಸಿದ್ದರು. ಈಗಿನ ಛತ್ತೀಸ್ಗಡದ ಕಾಂಗ್ರೆಸ್ ಮುಖ್ಯಮಂತ್ರಿ ಎರಡು ವರ್ಷದ ಸಾಧನೆ ನೆನಪಿಗೆ ರಾಮ ರಥ ಯಾತ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ಮಾಡಿದ್ದನ್ನೇ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರೆಸಿದ್ದಾರೆ. ಹೊಸದೇನನ್ನೂ ಮಾಡಿಲ್ಲ.

ಅವರನ್ನು ಕೇಳಿದರೆ ಕಾಂಗ್ರೆಸ್ ಮಾಡಿದಾಗ ನೀವು ಕೇಳಿದಿರಾ ಎನ್ನುತ್ತಾರೆ ಅಷ್ಟೆ. ಮೋದಿಯವರು ಕಾಂಗ್ರೆಸ್‌ನವರನ್ನು ಆಪ್ತರಕ್ಷಕ ದಳದಂತೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಭಾರತೀಯರಿಗೆ ಉತ್ತರಿಸಲೇಬೇಕಲ್ಲ? ಭಾರತೀಯರೆಂದರೆ ಕಾಂಗ್ರೆಸ್-ಬಿಜೆಪಿ‌ ಮಾತ್ರವಲ್ಲ. ಧರ್ಮನಿರಪೇಕ್ಷವಾಗಿ ಯಾರೂ ಇಲ್ಲದೆ ಪ್ರಧಾನಿಗಳೇ ಒಂದು ಇಟ್ಟಿಗೆ ಇಟ್ಟಿದ್ದರೆ ನಾವೆಲ್ಲ ಚಪ್ಪಾಳೆ ತಟ್ಟಿ ಅನಂಧಿಸಬಹುದಿತ್ತಲ್ಲವೇ? ಅದು ಬಿಟ್ಟು 60 ವರ್ಷ ಕಾಂಗ್ರೆಸ್ ಮಾಡಿದ್ದನ್ನೇ ಮಾಡಿದ್ದಾರೆ.

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

ಇದನ್ನೂ ಓದಿ: ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...