Homeಮುಖಪುಟಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ ಎಂಬ ಮಾಹಿತಿ ಹೊರಬಿದ್ದಿದೆ

- Advertisement -
- Advertisement -

ದೇಶದ ಮೂರು ಸೇನಾ ವಿಭಾಗಗಳಿಂದ ಕೋಟ್ಯಾಂತರ ರೂಪಾಯಿಗಳನ್ನು ಪಿಎಂ-ಕೇರ್ಸ್‌(PM-CARES)ಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ಮಾತ್ರವಲ್ಲದೆ ಮೂರು ಸಶಸ್ತ್ರ ಪಡೆಗಳೂ ಪಿಎಂ-ಕೇರ್ಸ್‌ಗೆ ಹಣವನ್ನು ನೀಡಿವೆ ಎಂದು ತಿಳಿದು ಬಂದಿದೆ.

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ. ವಾಯುಪಡೆಯು ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ ಒಟ್ಟು 29.18 ಕೋಟಿ ರೂ. ಗಳನ್ನು ನೀಡಿರುವುದಾಗಿ ವಾಯುಪಡೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಂ.ಕಾಮ್ ವರದಿ ಮಾಡಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಈ ಹಿಂದೆ ಆರ್‌ಟಿಐ ಸಿಕ್ಕಿದ ದಾಖಲೆಗಳ ಪ್ರಕಾರ, ರಿಸರ್ವ್ ಬ್ಯಾಂಕ್‌ ಹಾಗೂ ಏಳು ಸಾರ್ವಜನಿಕ ವಲಯದ ಬ್ಯಾಂಕುಗಳು ಸೇರಿದಂತೆ ಇತರ ಹಣಕಾಸು ಸಂಸ್ಥೆಗಳಿಂದ 204.75 ಕೋಟಿ ರೂ. ಹಣವನ್ನು PM-CARES ‌ಗೆ ನೀಡಲಾಗಿತ್ತು. ಅನೇಕ ಕೇಂದ್ರ ಶಿಕ್ಷಣ ಸಂಸ್ಥೆಗಳು ತಮ್ಮ ನೌಕರರ ವೇತನದಿಂದ 21.81 ಕೋಟಿ ರೂ.ಗಳನ್ನು PM-CARES ‌ಗೆ ನೀಡಲಾಗಿತ್ತು. ಈ ಹಣವನ್ನು ಮಾಸಿಕ ದೇಣಿಗೆಯ ರೂಪದಲ್ಲಿ ಪಾವತಿಸಲಾಗಿದೆ ಎನ್ನಲಾಗಿದೆ.

ಏಪ್ರಿಲ್‌ನಲ್ಲಿ 25.03 ಕೋಟಿ, ಮೇ ತಿಂಗಳಲ್ಲಿ 75.24 ಲಕ್ಷ, ಜೂನ್‌ನಲ್ಲಿ 1.08 ಕೋಟಿ, ಜುಲೈನಲ್ಲಿ 73.93 ಲಕ್ಷ, ಆಗಸ್ಟ್‌ನಲ್ಲಿ 61.18 ಲಕ್ಷ, ಸೆಪ್ಟೆಂಬರ್‌ನಲ್ಲಿ 50.27 ಲಕ್ಷ ಮತ್ತು ಅಕ್ಟೋಬರ್‌ನಲ್ಲಿ 46.70 ಲಕ್ಷ ರೂ. ಗಳನ್ನಾಗಿದೆ ವಾಯುಸೇನೆ PM-CARES ‌ಗೆ ನೀಡಿದೆ.

ಡಿಸೆಂಬರ್ 9 ರಂದು ನೌಕಾಪಡೆ ನೀಡಿದ ಪ್ರತಿಕ್ರಿಯೆಯಲ್ಲಿ, ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ 12.41 ಕೋಟಿ ಪಾವತಿಸಿದೆ. ಭಾರತೀಯ ಸೇನೆಯ ಎಡಿಜಿ ಪಿಐ (ಸಾರ್ವಜನಿಕ ಮಾಹಿತಿ ಹೆಚ್ಚುವರಿ ನಿರ್ದೇಶನಾಲಯ) ಮಾಡಿರುವ ಟ್ವೀಟ್ ಪ್ರಕಾರ, ಸೇನಾ ಸಿಬ್ಬಂದಿ 2020 ರ ಏಪ್ರಿಲ್‌ನಲ್ಲಿ 157.71 ಕೋಟಿ. ರೂ. ಗಳನ್ನು ಸ್ವಯಂಪ್ರೇರಣೆಯಿಂದ ನೀಡಿದ್ದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?

ಮಾರ್ಚ್ 29 ರಂದು ರಕ್ಷಣಾ ಸಚಿವಾಲಯ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, “ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವಾಲಯದ ನೌಕರರು ಪ್ರಧಾನಮಂತ್ರಿಗೆ ಒಂದು ದಿನದ ವೇತನವನ್ನು ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದ್ದಾರೆ” ಎಂದು ಹೇಳಲಾಗಿತ್ತು. ಕೊರೊನಾ ವಿರುದ್ದ ಹೋರಾಡಲು PM-CARES ‌ಗೆ ಭೂಸೇನೆ, ನೌಕಾಪಡೆ, ವಾಯುಪಡೆ ಮತ್ತು ಇತರ ರಕ್ಷಣಾ ವಿಭಾಗಗಳ ವಿವಿಧ ಕ್ಷೇತ್ರಗಳಿಂದ ಸುಮಾರು 500 ಕೋಟಿ ರೂ.ಗಳನ್ನು ಸ್ವಯಂಪ್ರೇರಿತವಾಗಿ ಸಂಗ್ರಹಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ PM-CARES ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ.

ಇದನ್ನೂ ಓದಿ: ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...