Homeಮುಖಪುಟಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ ಎಂಬ ಮಾಹಿತಿ ಹೊರಬಿದ್ದಿದೆ

- Advertisement -
- Advertisement -

ದೇಶದ ಮೂರು ಸೇನಾ ವಿಭಾಗಗಳಿಂದ ಕೋಟ್ಯಾಂತರ ರೂಪಾಯಿಗಳನ್ನು ಪಿಎಂ-ಕೇರ್ಸ್‌(PM-CARES)ಗೆ ವರ್ಗಾಯಿಸಲಾಗಿದೆ ಎಂದು ವರದಿಯಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ಮಾತ್ರವಲ್ಲದೆ ಮೂರು ಸಶಸ್ತ್ರ ಪಡೆಗಳೂ ಪಿಎಂ-ಕೇರ್ಸ್‌ಗೆ ಹಣವನ್ನು ನೀಡಿವೆ ಎಂದು ತಿಳಿದು ಬಂದಿದೆ.

ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆ ಸೇರಿ ತಮ್ಮ ನೌಕರರ ದೈನಂದಿನ ವೇತನದಿಂದ 203.67 ಕೋಟಿ ರೂ.ಗಳನ್ನು ನೀಡಿದೆ. ವಾಯುಪಡೆಯು ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ ಒಟ್ಟು 29.18 ಕೋಟಿ ರೂ. ಗಳನ್ನು ನೀಡಿರುವುದಾಗಿ ವಾಯುಪಡೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಂ.ಕಾಮ್ ವರದಿ ಮಾಡಿದೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ಈ ಹಿಂದೆ ಆರ್‌ಟಿಐ ಸಿಕ್ಕಿದ ದಾಖಲೆಗಳ ಪ್ರಕಾರ, ರಿಸರ್ವ್ ಬ್ಯಾಂಕ್‌ ಹಾಗೂ ಏಳು ಸಾರ್ವಜನಿಕ ವಲಯದ ಬ್ಯಾಂಕುಗಳು ಸೇರಿದಂತೆ ಇತರ ಹಣಕಾಸು ಸಂಸ್ಥೆಗಳಿಂದ 204.75 ಕೋಟಿ ರೂ. ಹಣವನ್ನು PM-CARES ‌ಗೆ ನೀಡಲಾಗಿತ್ತು. ಅನೇಕ ಕೇಂದ್ರ ಶಿಕ್ಷಣ ಸಂಸ್ಥೆಗಳು ತಮ್ಮ ನೌಕರರ ವೇತನದಿಂದ 21.81 ಕೋಟಿ ರೂ.ಗಳನ್ನು PM-CARES ‌ಗೆ ನೀಡಲಾಗಿತ್ತು. ಈ ಹಣವನ್ನು ಮಾಸಿಕ ದೇಣಿಗೆಯ ರೂಪದಲ್ಲಿ ಪಾವತಿಸಲಾಗಿದೆ ಎನ್ನಲಾಗಿದೆ.

ಏಪ್ರಿಲ್‌ನಲ್ಲಿ 25.03 ಕೋಟಿ, ಮೇ ತಿಂಗಳಲ್ಲಿ 75.24 ಲಕ್ಷ, ಜೂನ್‌ನಲ್ಲಿ 1.08 ಕೋಟಿ, ಜುಲೈನಲ್ಲಿ 73.93 ಲಕ್ಷ, ಆಗಸ್ಟ್‌ನಲ್ಲಿ 61.18 ಲಕ್ಷ, ಸೆಪ್ಟೆಂಬರ್‌ನಲ್ಲಿ 50.27 ಲಕ್ಷ ಮತ್ತು ಅಕ್ಟೋಬರ್‌ನಲ್ಲಿ 46.70 ಲಕ್ಷ ರೂ. ಗಳನ್ನಾಗಿದೆ ವಾಯುಸೇನೆ PM-CARES ‌ಗೆ ನೀಡಿದೆ.

ಡಿಸೆಂಬರ್ 9 ರಂದು ನೌಕಾಪಡೆ ನೀಡಿದ ಪ್ರತಿಕ್ರಿಯೆಯಲ್ಲಿ, ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ PM-CARES ‌ಗೆ 12.41 ಕೋಟಿ ಪಾವತಿಸಿದೆ. ಭಾರತೀಯ ಸೇನೆಯ ಎಡಿಜಿ ಪಿಐ (ಸಾರ್ವಜನಿಕ ಮಾಹಿತಿ ಹೆಚ್ಚುವರಿ ನಿರ್ದೇಶನಾಲಯ) ಮಾಡಿರುವ ಟ್ವೀಟ್ ಪ್ರಕಾರ, ಸೇನಾ ಸಿಬ್ಬಂದಿ 2020 ರ ಏಪ್ರಿಲ್‌ನಲ್ಲಿ 157.71 ಕೋಟಿ. ರೂ. ಗಳನ್ನು ಸ್ವಯಂಪ್ರೇರಣೆಯಿಂದ ನೀಡಿದ್ದಾಗಿ ಮಾಹಿತಿ ನೀಡಿದೆ.

ಇದನ್ನೂ ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?

ಮಾರ್ಚ್ 29 ರಂದು ರಕ್ಷಣಾ ಸಚಿವಾಲಯ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, “ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವಾಲಯದ ನೌಕರರು ಪ್ರಧಾನಮಂತ್ರಿಗೆ ಒಂದು ದಿನದ ವೇತನವನ್ನು ನೀಡುವ ಪ್ರಸ್ತಾಪವನ್ನು ಅಂಗೀಕರಿಸಿದ್ದಾರೆ” ಎಂದು ಹೇಳಲಾಗಿತ್ತು. ಕೊರೊನಾ ವಿರುದ್ದ ಹೋರಾಡಲು PM-CARES ‌ಗೆ ಭೂಸೇನೆ, ನೌಕಾಪಡೆ, ವಾಯುಪಡೆ ಮತ್ತು ಇತರ ರಕ್ಷಣಾ ವಿಭಾಗಗಳ ವಿವಿಧ ಕ್ಷೇತ್ರಗಳಿಂದ ಸುಮಾರು 500 ಕೋಟಿ ರೂ.ಗಳನ್ನು ಸ್ವಯಂಪ್ರೇರಿತವಾಗಿ ಸಂಗ್ರಹಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಕೊರೊನಾ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ PM-CARES ನಿಧಿ ಖಾಸಗಿಯೆ ಅಥವಾ ಸರ್ಕಾರಿ ಟ್ರಸ್ಟ್‌‌ ಆಗಿದೆಯೆ ಎಂಬ ಬಗ್ಗೆ ಇದೀಗ ವಿರೋಧಾಭಾಸಗಳು ಎದ್ದಿದೆ. ನಿಧಿಗೆ ಕಾರ್ಪೊರೇಟ್‌ ಸಂಸ್ಥೆಗಳು ದೇಣಿಗೆ ನೀಡಿರುವುದಕ್ಕಾಗಿ ಇದನ್ನು ಸರ್ಕಾರಿ ಟ್ರಸ್ಟ್ ಎಂದು ವ್ಯಾಖ್ಯಾನಿಸಲಾಗಿದ್ದರೂ, ಟ್ರಸ್ಟ್ ದಾಖಲೆಗಳಲ್ಲಿನ ಒಂದು ಷರತ್ತು ಇದನ್ನು ”ಖಾಸಗಿ” ಎಂದು ಕರೆಯುತ್ತದೆ.

ಇದನ್ನೂ ಓದಿ: ಪಾನ್ ಮಸಾಲ ಬ್ಯಾನ್ ಮಾಡಲು PIL: PM ಕೇರ್ಸ್‌ಗೆ 10 ಕೋಟಿ ದಾನ ನೀಡಿದ್ದೇವೆ ಎಂದ ಕಂಪನಿ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...