HomeಮುಖಪುಟBJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

"ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ"

- Advertisement -
- Advertisement -

ದೆಹಲಿಯ ಸಿಂಘು ಗಡಿಯಲ್ಲಿ “ರೈತರಿಗಾಗಿ ನಾನು ನನ್ನ ಜೀವವನ್ನೇ ತ್ಯಾಗ ಮಾಡುತ್ತಿದ್ದೇನೆ” ಎಂದು ಬರೆದಿಟ್ಟು ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುಂಚೆ ಅವರು ಬರೆದಿಟ್ಟಿದ್ದ ಪತ್ರವೊಂದು ದೊರಕಿದ್ದು, ಅದರಲ್ಲಿ, “ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿಖ್ ಜನಾಂಗವನ್ನೇ ಮುಗಿಸಲು ಪ್ರಯತ್ನಿಸುತ್ತಿದೆ” ಎಂದು ಬರೆದಿರುವುದು ಈಗ ಬಹಿರಂಗವಾಗಿದೆ.

ಈ ಕುರಿತು ವರದಿ ಮಾಡಿರುವ ದಿ ಪ್ರಿಂಟ್, “ಆರ್‌ಎಸ್‌ಎಸ್ ಮತ್ತು ಬಿಜೆಪಿ ಕೇವಲ ರೈತರಿಗೆ ಮಾತ್ರ ಅನ್ಯಾಯ ಮಾಡುತ್ತಿಲ್ಲ. ಸಂಪೂರ್ಣ ಸಿಖ್ ಜನಾಂಗವನ್ನೇ ಮುಗಿಸಲು ಹವಣಿಸುತ್ತಿದೆ. ಇವರಿಂದ ಸಿಖ್ ಸಮುದಾಯವು ಹಲವು ಬಾರಿ ಆಕ್ರಮಣಕ್ಕೊಳಗಾಗಿದೆ ಮತ್ತು ಈಗಲೂ ಅಗುತ್ತಲೆ ಇದೆ. ಕೆಲವು ಸಿಖ್‌ಗಳು ಆರ್‌ಎಸ್‌ಎಸ್‌ನ ಅಂದಾಭಿಮಾನಿಗಳಾಗಿದ್ದಾರೆ. ಆರ್‌ಎಸ್‌ಎಸ್‌ನೊಂದಿಗೆ ಸಿಖ್‌ಗಳು ಸೇರಿಕೊಂಡಿರುವುದು ನಿಜಕ್ಕೂ ನಾಚಿಗೇಡು. ಕೆಲವರು ಅಧಿಕಾರದಾಸೆಯಿಂದ, ಕೆಲವರು ಹಣದಾಸೆಗಾಗಿ ಇನ್ನು ಕೆಲವರು ಬಲಾತ್ಕಾರದಿಂದ ಆರ್‌ಎಸ್‌ಎಸ್ ಮತ್ತು ಬಿಜೆಪಿ ಜೊತೆಗಿದ್ದಾರೆ. ಹಾವಿನಂತೆ ಆರ್‌ಎಸ್‌ಎಸ್ ಸಿಖ್ ಸಮುದಾಯದ ಬಳಿ ಸುಳಿಯುತ್ತಲೇ ಇದೆ” ಎಂದು ಬರೆಯಲಾಗಿದೆ ಎಂಬುದನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ಬಾಬಾ ರಾಮ್ ಸಿಂಗ್ ಒಟ್ಟು 10 ಪುಟಗಳ ಪತ್ರವನ್ನು ಬರೆದಿದ್ದು, ಈ ಪತ್ರದಲ್ಲಿ ಹಲವಾರು ವಿಚಾರಗಳನ್ನು ಉಲ್ಲೇಖಿಸಲಾಗಿದೆ. “ಈ ಪತ್ರದಲ್ಲಿರುವ ಕೈಬರಹವು ಬಾಬಾ ರಾಮ್ ಸಿಂಗ್ ಅವರದ್ದೇ ಎಂದು ನಾನು ಸ್ಪಷ್ಟಪಡಿಸುತ್ತಿದ್ದೇನೆ. ಈ ಕುರಿತು ಯಾರಿಗಾದರೂ ಸಂಶಯಗಳಿದ್ದರೆ ಯಾವುದೇ ರೀತಿಯ ಪರೀಕ್ಷೆಯನ್ನೂ ನಡೆಸಬಹುದು” ಎಂದು ರಾಮ್ ಸಿಂಗ್ ಅವರ ಅನುಯಾಯಿ ಸಂತ್ ಭೋಲಾ ಹೇಳಿದ್ದಾರೆ.

“ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದಿದ್ದರು.

ಇದನ್ನೂ ಓದಿ: ’ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾದುದು’: ಮಾಜಿ ಮುಖ್ಯ ನ್ಯಾಯಮೂರ್ತಿ ಎಪಿ ಶಾ

ಈ ಕುರಿತು ಟ್ವೀಟ್ ಮಾಡಿರುವ ಶಿರೋಮಣಿ ಅಕಾಲಿ ದಳದ ಮುಖಂಡ ಸುಖ್‌ಬೀರ್ ಸಿಂಗ್ “ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿನ ರೈತರ ಸಂಕಟವನ್ನು ನೋಡುತ್ತಿದ್ದ ಸಂತ ಬಾಬಾ ರಾಮ್ ಸಿಂಗ್ ಜಿ ನಾನಕ್ಸರ್ ಸಿಂಗ್ರಾ ವಾಲೆ, ಸ್ವತಃ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸಂತ ಜಿ ಅವರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಪರಿಸ್ಥಿತಿ ಹದಗೆಡುವ ಮುನ್ನ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...