Homeಮುಖಪುಟನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು.

- Advertisement -
- Advertisement -

2016ರ ಜನವರಿಯಲ್ಲಿ ಪ್ರಾಣತೆತ್ತ ಮತ್ತು ಆ ಮೂಲಕ ವಿವಿಗಳಲ್ಲಿನ ಜಾತಿ ಮನಸ್ಥಿತಿಯನ್ನು ದೇಶಕ್ಕೆ ಸಾರಿದ ಹುತಾತ್ಮ ರೋಹಿತ್ ವೇಮುಲಾರವರ ಸಹೋದರ ರಾಜಾ ವೇಮುಲಾ ವಕೀಲ ಪದವಿ ಪಡೆದಿದ್ದು, ಜನರ ಹಕ್ಕುಗಳಿಗಾಗಿ ಹೋರಾಡಲು ಸಿದ್ದನಾಗಿದ್ದಾನೆ ಎಂದು ರಾಧಿಕ ವೇಮುಲಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ನನ್ನ ಕಿರಿಯ ಮಗ ರಾಜಾ ವೇಮುಲಾ ಈಗ ವಕೀಲ. ರೋಹಿತ್ ವೇಮುಲಾ ನಂತರ ಈ 5 ವರ್ಷಗಳಲ್ಲಿ ನಮ್ಮ ಜೀವನದಲ್ಲಿ ಸಂಭವಿಸಿದ ಪ್ರಮುಖ ಬದಲಾವಣೆಗಳಲ್ಲಿ ಇದು ಒಂದು. ವಕೀಲ ರಾಜಾ ವೇಮುಲಾ ಈಗ ನ್ಯಾಯಾಲಯದಲ್ಲಿ ಜನರಿಗೆ ಮತ್ತು ಅವರ ಹಕ್ಕುಗಳಿಗಾಗಿ ಕೆಲಸ ಮಾಡುತ್ತಾನೆ ಮತ್ತು ಹೋರಾಡುತ್ತಾನೆ. ಇದು ಸಮಾಜಕ್ಕೆ ನಾನು ಹಿಂತಿರುಗಿಸುತ್ತಿರುವ ಕೊಡುಗೆ. ಅವನನ್ನು ಆಶೀರ್ವದಿಸಿ. ಜೈ ಭೀಮ್” ಎಂದಿದ್ದಾರೆ.

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ರೋಹಿತ್ ವೇಮುಲಾ ಪ್ರಾಣತೆತ್ತಿದ್ದರು. ಇದನ್ನು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯ, ಸಮಾಜ ಮತ್ತು ಜಾತಿ ವ್ಯವಸ್ಥೆ ಮಾಡಿದ ಸಾಂಸ್ಥಿಕ ಕೊಲೆಯೆಂದು ಕರೆದಿದ್ದರು.

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಯಿ ಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ನಂತರ ಪ್ರಾಣತೆತ್ತಿದ್ದು ಇತಿಹಾಸ.

ಅಂದಿನಿಂದ ಸಾಮಾಜಿಕ ಚಳವಳಿಗಳ ಭಾಗವಾಗಿರುವ ಅವರ ತಾಯಿ ರಾಧಿಕಾ ವೇಮುಲಾ ಗುಜರಾತ್‌ನಲ್ಲಿ ನಡೆದ ಊನಾ ಚಲೋ ಚಳವಳಿಯಲ್ಲಿ ಭಾಗವಹಿಸಿದ್ದರು. ದೆಹಲಿಯ ವಿದ್ಯಾರ್ಥಿ ನಜೀಬ್ ಕಾಣೆಯಾದಾಗ ಆತನ ತಾಯಿಯೊಂದಿಗೆ ನಿಂತಿದ್ದರು. ನೂರಾರು ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ಈಗ ತಮ್ಮ ಇನ್ನೊಬ್ಬ ಮಗನನ್ನು ವಕೀಲನಾಗಿ ಸಮಾಜಕ್ಕೆ ಅರ್ಪಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ: ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...