Homeಕರೋನಾ ತಲ್ಲಣಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

ಜನವರಿ 1 ರಿಂದ ಶಾಲೆ ಆರಂಭ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ

2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ತೀರ್ಮಾನ"

- Advertisement -
- Advertisement -

ಕೊರೊನಾ ಕಾರಣದಿಂದ ಸುಮಾರು 9 ತಿಂಗಳಿನಿಂದ ಮುಚ್ಚಿದ್ದ ಶಾಲೆಗಳನ್ನು 2021ರ ಜನವರಿ 1 ರಿಂದ ತೆರೆಯಲು ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, 6 ನೇ ತರಗತಿಯಿಂದ ಪಿಯುಸಿಯವರೆಗೆ ತೆರೆಯಲು ಸೂಚನೆ ನೀಡಲಾಗಿದೆ.

ಈ ಕುರಿತು ಮುಖ್ಯಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದ “2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

“ಶಾಲೆಗಳನ್ನು ತೆರೆಯದೆ ಬಡಮಕ್ಕಳ ಹಿತರಕ್ಷಣೆ ಮಾಡಲು ವಿಫಲವಾಗಿರುವ ಮಾನ್ಯ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ” ಮಕ್ಕಳ ನಡೆ -ಶಾಲೆಯ ಕಡೆ ಅಭಿಯಾನದ ಸಮಿತಿಯು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿವೆ.

ಇದೇ ಸಮಿತಿ ಡಿಸೆಂಬರ್ 7ರಂದು ಡಿಸೆಂಬರ್ 15ರೊಳಗೆ ಎಲ್ಲಾ ಶಾಲೆಗಳನ್ನು ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ಗಣನೀಯವಾಗಿ ಇಳಿದಿದ್ದರೂ, ಮಾರ್ಚ್ ತಿಂಗಳಿನಿಂದಲೇ ಮುಚ್ಚಿದ ಶಾಲೆ-ಕಾಲೇಜುಗಳನ್ನು ಪುನರಾರಂಭಿಸದಿರುವ ರಾಜ್ಯ ಸರ್ಕಾರದ  ನಿರ್ಧಾರವನ್ನು ಈ ಸಮಿತಿ ಖಂಡಿಸಿತ್ತು. ಜೊತೆಗೆ ಬಾಲವಾಡಿಯಿಂದ 12ನೇ ತರಗತಿಯವರೆಗೆ ಎಲ್ಲಾ ಶಾಲೆಗಳನ್ನು ಡಿಸೆಂಬರ್ 15ರೊಳಗೆ ಪೂರ್ಣವಾಗಿ ತೆರೆಯಬೇಕೆಂದು ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿತ್ತು.


ಇದನ್ನೂ ಓದಿ: ಶಾಲೆ ಆರಂಭಿಸದ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಸಂಘಟನೆಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...