Homeಮುಖಪುಟಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ಮಹತ್ವದ ಸಭೆ; NSUI ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಪಕ್ಷದ ಉನ್ನತ ಮಟ್ಟದ ನಾಯಕರೊಂದಿಗೆ ನಿರ್ಣಾಯಕ ಸಭೆ ಆರಂಭಿಸುತ್ತಿದ್ದಂತೆಯೇ ಇತ್ತ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐನ ರಾಷ್ಟ್ರೀಯ ಉಸ್ತುವಾರಿ ರುಚಿಗುಪ್ತ ರಾಜಿನಾಮೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ ಬರೆದು ಬಹಿರಂಗ ವಾಗಿ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಮೊದಲ ಬಾರಿಗೆ ಪಕ್ಷ ಉನ್ನತ ಮಟ್ಟದ ನಾಯಕರೊಂದಿಗೆ ಸೋನಿಯ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಭೆ ಬೆನ್ನಲ್ಲೇ ಎನ್ಎಸ್‌‌ಯುಐನ ರಾಷ್ಟ್ರೀಯ ಉಸ್ತುವಾರಿ ಮತ್ತು ರಾಹುಲ್ ಗಾಂಧಿ ಬಳಗದಲ್ಲಿ ಗುರುತಿಸಿ ಕೊಂಡಿದ್ದ ರುಚಿಗುಪ್ತ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ಕೆ.ಸಿ.ವೇಣುಗೋಪಾಲ್ ರಾಜ್ಯ ಘಟಕಗಳನ್ನು ಮರುಸಂಘಟಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿದ್ದಾರೆ…ಸಂಘಟನೆಯಲ್ಲಿ ಹೊಸ ನಾಯಕತ್ವವನ್ನು ತರಲು ಯತ್ನಿಸಿದರೆ ಅದಕ್ಕೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಎನ್ಎಸ್‌ಯುಐ ಪದಾಧಿಕಾರಿಗಳುಳ್ಳ ವಾಟ್ಸಪ್ ಗುಂಪಿನೊಂದಿಗೆ ಮಾಹಿತಿ ಹಂಚಿಕೊಂಡಿರುವ ರುಚಿಗುಪ್ತ, “ನಾನು ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಲು ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ಪ್ರಮುಖ ಸಾಂಸ್ಥಿಕ ಬದಲಾವಣೆಗಳು ಬಹಳ ಕಾಲದಿಂದಲೂ ಬಾಕಿ ಉಳಿದಿವೆ. ರಾಷ್ಟ್ರೀಯ ಸಮಿತಿ ಒಂದು ವರ್ಷ ಮತ್ತು ಮೂರು ತಿಂಗಳು ತೆಗೆದುಕೊಂಡಿತು. ರಾಜ್ಯ ಅಧ್ಯಕ್ಷರ ಆದೇಶಗಳು ತಿಂಗಳುಗಳಿಂದ ಬಾಕಿ ಉಳಿದಿವೆ. ಹೊಸ ಕಾರ್ಯಕರ್ತರಿಗೆ ಸ್ಥಳಾವಕಾಶ ಕಲ್ಪಿಸಲು ಮರುಸಂಘಟನೆಗಾಗಿ ಇನ್ನೂ ಅನೇಕ ರಾಜ್ಯ ಘಟಕಗಳು ಕಾಯುತ್ತಿವೆ. ಈ ನಿರಂತರ ವಿಳಂಬಗಳು ಸಂಸ್ಥೆಯನ್ನು ಹಾನಿಗೊಳಿಸುತ್ತಿವೆ ಆದರೆ ಪ್ರಸ್ತುತ ಸಂದರ್ಭಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರಿಗೆ ಪದೇ ಪದೇ ಹೇಳಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿ ಒಪ್ಪಲಾಗದು” ಎಂದು ಅವರು ಬರೆದಿದ್ದಾರೆ.

ಈ ವಾಟ್ಸಪ್ ಗುಂಪಿನ ಬಹುತೇಕ ನಾಯಕರು ಸೋನಿಯಾ ಗಾಂಧಿಗೆ ಹತ್ತಿರದವರೆಂದು ಪರಿಗಣಿಸಲ್ಪಟ್ಟಿರುವ ವೇಣುಗೋಪಾಲ್ ಅವರೊಂದಿಗೆ ಅಸಮಾಧಾನ ಹೊಂದಿದ್ದರು. ವೇಣುಗೋಪಾಲ್ ಎನ್‌ಎಸ್‌ಯುಐಗೆ ಸಂಬಂಧಿಸಿದ ಸಾಂಸ್ಥಿಕ ನೇಮಕಾತಿಗಳನ್ನು ದೀರ್ಘಕಾಲದಿಂದ ತಡೆಹಿಡಿದಿದ್ದಾರೆ ಎಂದು ಎನ್‌ಎಸ್‌ಯುಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...