Homeಚಳವಳಿಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗ: BJP ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯನನ್ನು ಬಂಧಿಸಿ!

ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗ: BJP ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯನನ್ನು ಬಂಧಿಸಿ!

ಒಂದು ವೇಳೆ ಬಂಧನ ಆಗದಿದ್ದರೆ, ಮುಂದಿನ ವಾರ ನ್ಯಾಯಾಲಯದಲ್ಲಿ ಕೇಸು ದಾಖಲಿಸುತ್ತೇನೆ ಎಂದು ಸಾಕೇತ್ ಗೋಖಲೆ ಎಚ್ಚರಿಸಿದ್ದಾರೆ

- Advertisement -
- Advertisement -

ದೇಶದಾದ್ಯಂತ ಭಾರಿ ಆಕ್ರೋಶ ಹುಟ್ಟುಹಾಕಿದ್ದ ಹತ್ರಾಸ್‌ನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯಾದ ದಲಿತ ಯುವತಿಯ ಗುರುತು ಬಹಿರಂಗಪಡಿಸಿದ್ದ ಬಿಜೆಪಿ ಐಟಿ ಸೆಲ್‌‌ ಮುಖ್ಯಸ್ಥ ಅಮಿತ್‌ ಮಾಳವಿಯ ಅವರನ್ನು 7 ದಿನದೊಳಗೆ ಬಂಧಿಸುವಂತೆ ಸಾಮಾಜಿಕ ಕಾರ್ಯಕರ್ತ ಸಾಕೇತ್‌ ಗೋಖಲೆ ಆಗ್ರಹಿಸಿದ್ದಾರೆ.

ಈ ಬಗ್ಗೆ ತನ್ನ ಟ್ವಿಟ್ಟರ್‌‌ನಲ್ಲಿ ಬರೆದುಕೊಂಡಿರುವ ಸಾಕೇತ್‌ ಗೋಖಲೆ, “ಅಕ್ಟೋಬರ್‌ನಲ್ಲಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹತ್ರಾಸ್ ಸಂತ್ರಸ್ತೆಯ ಗುರುತು ಬಹಿರಂಗಪಡಿಸುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಈ ಬಗ್ಗೆ ನಾನು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‌ಸಿಡಬ್ಲ್ಯು) ದೂರು ನೀಡಿದಾಗ, ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅಮಿತ್ ಮಾಳವಿಯ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ, ’ಪ್ರಕರಣವು ಅತ್ಯಾಚಾರ ಪ್ರಕರಣ ಎಂದು ಸಾಬೀತಾದರೆ ಮಾತ್ರ ಇದು ಅಪರಾಧ’ ಎಂದು ಉತ್ತರಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ 

“ಈಗ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಅದರಲ್ಲಿ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನಲೆಯಲ್ಲಿ ಅಮಿತ್ ಮಾಳವೀಯ ಮೇಲೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನಾನು ನೋಟಿಸು ಕಳುಹಿಸಿದ್ದೇನೆ” ಎಂದು ಸಾಕೇತ್ ತಿಳಿಸಿದ್ದಾರೆ.

“ಅಲ್ಲದೆ ಹತ್ರಾಸ್‌ ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿದ್ದರೂ ಕೂಡಾ, ರೇಖಾ ಶರ್ಮಾ ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ಬಿಜೆಪಿ ಮತ್ತು ಉತ್ತರಪ್ರದೇಶ ಸರಕಾರದ ಬೆಂಬಲಕ್ಕೆ ನಿಂತಂತೆ ವರ್ತಿಸಿದ್ದಾರೆ. ಇದೀಗ ಪ್ರಕರಣ ಸ್ಪಷ್ಟವಾಗಿದೆ, ಆದ್ದರಿಂದ ಭಾರತೀಯ ದಂಡ ಸಂಹಿತೆ ಪ್ರಕಾರ ಅಮಿತ್ ಮಾಳವಿಯ ಅವರನ್ನು 7 ದಿನಗಳ ಒಳಗಾಗಿ ಬಂಧಿಸಬೇಕು. ಒಂದು ವೇಳೆ ಬಂಧನ ಆಗದಿದ್ದರೆ, ಮುಂದಿನ ವಾರ ನ್ಯಾಯಾಲಯದಲ್ಲಿ ಕೇಸು ದಾಖಲಿಸುತ್ತೇನೆ” ಎಂದು ಎಚ್ಚರಿಸಿದ್ದಾರೆ.

ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸೆ.14 ರಂದು ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆ.29 ರಂದು ಯುವತಿ ಸಾವನ್ನಪ್ಪಿದಳು. ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಪೊಲೀಸರು ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಬಲವಂತವಾಗಿ ಶವಸಂಸ್ಕಾರ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿತ್ತು. ಈ ಘಟನೆ ಖಂಡಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ದಾಖಲಾಗಿದ್ದವು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು.

ಇದನ್ನೂ ಓದಿ:ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...