Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...