Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...