Homeಕರ್ನಾಟಕಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ಗ್ರಾಮ ಪಂಚಾಯತ್‌ ಚುನಾವಣೆ: ಇವರು ಸೋತರೆ ಮಾಡುವ ಕೆಲಸವೇನು ಗೊತ್ತೆ?

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ.

- Advertisement -
- Advertisement -

ಗ್ರಾಮ ಪಂಚಾಯತ್‌ ಚುನಾವಣೆ ಪ್ರಾರಂಭವಾಗಲು ಇನ್ನೇನು ಎರಡೇ ದಿನವಿದೆ. ರಾಜ್ಯದಾದ್ಯಂತ ಗ್ರಾಮಗಳಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಸ್ಥಳೀಯ ವಿಷಯಗಳ ಬಗ್ಗೆ ಮಾತನಾಡುತ್ತಿದೆ. ಜೊತೆಗೆ ಆಶ್ವಾಸನೆ, ಭರವಸೆ, ತಂತ್ರ, ಕುತಂತ್ರಗಳು ಗ್ರಾಮ ಮಟ್ಟದಲ್ಲೇ ನಡೆಯುತ್ತಿದೆ. ಆದರೆ ಹೆಬ್ಬೂರು ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸ್ಪರ್ಧಿಯೊಬ್ಬರ ಪ್ರಣಾಳಿಕೆ ಪತ್ರವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚುನಾವಣೆಯ ಮೊದಲ ಹಂತವಾದ ಡಿಸೆಂಬರ್‌ 22 ನಡೆಯಲಿರುವ ಚುನಾವಣೆಯಲ್ಲಿ ಹೆಬ್ಬೂರು ಗ್ರಾಮ ಪಂಚಾಯತ್‌‌ನ 7 ನೇ ಕಲ್ಕೆರೆ ಕ್ಷೇತ್ರದಿಂದ ಸ್ಫರ್ಧಿಸಿರುವ ಗಂಗಮ್ಮ ಹೆಚ್‌ ತಮ್ಮ ಚುನಾವಣಾ ಪ್ರಣಾಳಿಕೆ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಪ್ರಣಾಳಿಕೆಯಲ್ಲಿ ತಾನು ಗೆದ್ದರೆ ಮಾತ್ರ ಏನು ಮಾಡುತ್ತೇನೆ ಎಂದು ಮಾತ್ರವಲ್ಲದೆ, ಸೋತರೆ ಏನು ಮಾಡುತ್ತೇನೆ ಎಂದು ಕೂಡಾ ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ; ಚುನಾವಣಾ ಆಯೋಗ

ತಾನು ಗೆದ್ದರೆ ಮಾಡಿಸುವ ಕೆಲಸಕ್ಕಿಂತ ಸೋತರೆ ಏನು ಮಾಡುತ್ತೇನೆ ಎಂಬ ಘೋಷಣೆಯಲ್ಲೇ ಅವರು ಅಚ್ಚರಿ ಮೂಡಿಸಿದ್ದಾರೆ. ತಾನು ಸೋತರೆ “‌ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡಿಸುವುದು, ಸರ್ಕಾರಕ್ಕೆ ಸುಳ್ಳು ಮಾಹಿತಿ ಕೊಟ್ಟು ಹಣ ಪಡೆಯುತ್ತಿರುವ ಮೈತ್ರಿ, ಮನಸ್ವಿನಿ, ವಿಧವಾ ವೇತನ ಹಣವನ್ನು ನಿಲ್ಲಿಸುವುದು, ಸರ್ವೇ ನಂ. 86 ರಲ್ಲಿ ಹಳೇ ದಾಖಲೆಯಂತೆ ಸ್ವಶಾನ ಮಾಡಿಸುವುದು, ಕಲ್ಕೆರೆ ಗ್ರಾಮದ ಜಾಗವನ್ನು ಯಾವುದೆ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಲು ಹೋರಾಟ ಮಾಡವುದು” ಎಂದಿದ್ದಾರೆ.

ಜೊತೆಗೆ ತನ್ನ ಆಶ್ವಾಸನೆಗೆ ಅವರು ಸಾಕ್ಷಿಯಾಗಿ, ಅಕ್ರಮವಾಗಿ ಕಾನೂನಿಗೆ ವಿರುದ್ದವಾಗಿದ್ದ 6 ಮನೆಗಳ ಬಿಲ್ ನಿಲ್ಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಣಾಳಿಕೆಯ ಕರಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇವರು ಗೆಲ್ಲುವುದಕ್ಕಿಂತ ಸೋಲುವುದೇ ಒಳ್ಳೆಯದು. ಇವರ ವಿರುದ್ದ ಗೆದ್ದವರಿಂದ ಇತರ ಕೆಲಸವನ್ನು ಮಾಡಿಸಬಹುದು ಮತ್ತು ಇವರಿಂದ, ಸೋತರೆ ಮಾಡುವ ಕೆಲಸವನ್ನು ಮಾಡಿಸಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ:  ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...