Homeಫ್ಯಾಕ್ಟ್‌ಚೆಕ್ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಸಂಶಯಗಳನ್ನು ನಿವಾರಿಸಿದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮಧ್ಯೆ, ಪ್ರಧಾನಿ ಮೋದಿ ಗುಜರಾತ್‌ನ ಕಚ್‌ನಲ್ಲಿನ ರೈತರ ನಿಯೋಗದೊಂದಿಗೆ ಭೇಟಿಯಾಗಿದ್ದಾರೆ ಎಂದು ಮಾಧ್ಯಮದಲ್ಲಿ ಸುದ್ದಿಯಾಗಿದ್ದ ವರದಿಯ ಸತ್ಯಾಸತ್ಯತೆ ಹೊರಬಿದ್ದಿದೆ. ವಾಸ್ತವದಲ್ಲಿ ಪ್ರಧಾನಿಯು ಬಿಜೆಪಿ ಕಾರ್ಯಕರ್ತರ ನಿಯೋಗವನ್ನು ಭೇಟಿ ಮಾಡಿದ್ದು ಅದನ್ನು ಮಾಧ್ಯಮಗಳು ರೈತರೊಂದಿಗಿನ ಭೇಟಿಯೆಂದು ಬಿಂಬಿಸಿದ್ದಾರೆ ಎನ್ನಲಾಗಿದೆ.

“ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕಚ್ಛ್‌ನ ಕೆಲ ರೈತರ ಜತೆ ಮಾತುಕತೆ ನಡೆಸಿ ಕೃಷಿ ಕಾನೂನಿನ ಕುರಿತಂತೆ ಅವರಿಗೆ ಮನವರಿಕೆ ಮಾಡಿ ಅವರ ಸಂಶಯಗಳನ್ನು ನಿವಾರಿಸಿದರು” ಎಂದು ಮಾಧ್ಯಮಗಲ್ಲಿ ವರದಿಯಾಗಿದ್ದವು.

ಆದರೆ ಈ ವರದಿಗಳು ಸುಳ್ಳಾಗಿದ್ದು, ಇದು ಕೇವಲ ರೈತ ಪ್ರತಿಭಟನೆಯಿಂದ ಜನರ ಗಮನ ಬೇರೆಡೆ ಸೆಳೆಯುವ ತಂತ್ರಗಾರಿಕೆಯಾಗಿತ್ತು ಹಾಗೂ ಪ್ರಧಾನಿಗೆ ರೈತರ ಪ್ರತಿಭಟನೆ ಕುರಿತು ಕಳವಳವಿದೆ ಎಂದು ತೋರಿಸುವ ಯತ್ನವಾಗಿತ್ತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ. ಈ ಬಗ್ಗೆ ತನಿಖಾ ಲೇಖನ ಪ್ರಕಟಸಿರುವ ಪತ್ರಿಕೆಯು ಪ್ರಧಾನಿ ಕಚ್ಛ್ ಗೆ ಭೇಟಿ ನೀಡಿದಾಗ ಅವರು ಮಾತುಕತೆ ನಡೆಸಿದ ರೈತರು ವಾಸ್ತವವಾಗಿ ರೈತರಲ್ಲ ಬದಲು ಸಿಖ್ ಸಮುದಾಯಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತರು ಎಂದು ತಿಳಿದು ಬಂದಿದೆ ಎಂದಿದೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಪ್ ಮುಖಂಡರು

ರೈತರೆಂದು ಕರೆಯಲ್ಪಡುವ ನಿಯೋಗವನ್ನು ಮುನ್ನಡೆಸಿದ ವ್ಯಕ್ತಿ ರಾಜು ಭಾಯಿ ಸರ್ದಾರ್ ಕಚ್ ವಲಯದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದು, ಅವರು ಡಿಸೆಂಬರ್ 15 ರಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ ಚಿತ್ರದಲ್ಲಿ ಪ್ರಧಾನಿ ಎದುರು ಕೇಸರಿ ರುಮಾಲು ಧರಿಸಿ ಕುಳಿತಿರುವುದನ್ನು ಕಾಣಬಹುದು.

ಗುಜರಾತ್ ಮುಖ್ಯಮಂತ್ರಿಯ ಟ್ವಿಟ್ಟರ್ ಹ್ಯಾಂಡಲ್ ಚಿತ್ರವನ್ನು ಟ್ವೀಟ್ ಮಾಡುವಾಗ, “ಕರಕುಶಲ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಸ್ಥಳೀಯ ಕಚ್ಚಿ ಮಹಿಳೆಯರ ಗುಂಪುಗಳನ್ನು ಮತ್ತು ಕಚ್‌‌ನಲ್ಲಿ ನೆಲೆ ನಿಂತಿರುವ ’ಸಿಖ್ ರೈತ’ರನ್ನು ಭೇಟಿಯಾದರು” ಎಂದು ಹೇಳಿದೆ. ಅಲ್ಲದೆ ಸ್ವತಃ ರಾಜು ಭಾಯಿ ಕೂಡಾ ತಾನು ರೈತರ ನಿಯೋಗವನ್ನು ಮುನ್ನಡೆಸಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

 

ಆದರೆ ಆಜ್‌ತಕ್ ಟಿವಿ ನ್ಯೂಸ್ ಚಾನೆಲ್‌ನ ವರದಿಗಾರ್ತಿ, ಸಭೆಯಲ್ಲಿ ಚರ್ಚಿಸಲಾದ ವಿಷಯದ ಬಗ್ಗೆ ವ್ಯಕ್ತಿಯೊಬ್ಬರೊಂದಿಗೆ ಪ್ರಶ್ನಿಸಿದಾಗ, ಗುರುದ್ವಾರದ ಬಗ್ಗೆ ಚರ್ಚೆಯನ್ನು ಕೇಂದ್ರೀಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಈ ನಡುವೆ, ಪ್ರಧಾನಿ ಮೋದಿ ರೈತರು ಎಂದು ಕರೆಯಲ್ಪಡುವವರೊಂದಿಗೆ ಸಭೆ ನಡೆಸುತ್ತಿದ್ದ ಅದೇ ಸಮಯದಲ್ಲಿ, ನಿಜವಾದ ರೈತರ ಗುಂಪು ಕೃಷಿ ಕಾನೂನುಗಳ ವಿರುದ್ಧ ಕಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಪ್ರತಿಭಟನಾ ನಿರತ ರೈತರ ಸುದ್ದಿಯನ್ನು ಗುಜರಾತಿ ಮತ್ತು ರಾಷ್ಟ್ರೀಯ ಮಾಧ್ಯಮಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಕಚ್ ರಾಜಕೀಯವನ್ನು ತಿಳಿದಿರುವವರು ಹೇಳುವಂತೆ, ರಾಜು ಭಾಯ್ ಸರ್ದಾರ್ ಅವರ ನಿಜವಾದ ಹೆಸರು ಜುಗರಾಜ್ ಸಿಂಗ್. ಅವರು ನಾರಾ ಗ್ರಾಮಕ್ಕೆ ಸೇರಿದವರಾಗಿದ್ದು, ರೆಸ್ಟೋರೆಂಟ್ ನಡೆಸುತ್ತಿದ್ದಾರೆ. ಬಿಜೆಪಿಯ ವಲಯ ಕಾರ್ಯದರ್ಶಿಯಾಗುವ ಮೊದಲು ಅವರು ಬಿಜೆಪಿ ಬೆಂಬಲದೊಂದಿಗೆ ನಾರಾದ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು.

ಸಿಖ್ ಸಮುದಾಯದ ಹೆಚ್ಚಿನ ಜನಸಂಖ್ಯೆಯಿಂದಾಗಿ ನಾರಾವನ್ನು ಕಚ್ ಪ್ರದೇಶದ ಮಿನಿ-ಪಂಜಾಬ್ ಎಂದು ಕರೆಯಲಾಗುತ್ತದೆ. ಈ ಪ್ರದೇಶದ ನಾರಾ ಮತ್ತು ಕೊಠಾರಾ ಗ್ರಾಮಗಳಲ್ಲಿ ಸಿಖ್ ಸಮುದಾಯವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.

ಅಲ್ಲದೆ ರಾಜು ಭಾಯ್ ”ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 15 ಅಂಶಗಳ ಕಾರ್ಯಕ್ರಮ ಸಮಿತಿ”ಯ ಸದಸ್ಯರಾಗಿದ್ದಾರೆ ಎಂದು ಅವರ ವೆಬ್‌ಸೈಟ್ ಹೇಳಿಕೊಂಡಿದೆ. ಪ್ರಸ್ತುತ ಲಖಪತ್ ಸರೈನಲ್ಲಿ 18 ಕೊಠಡಿಗಳ ರೆಸಾರ್ಟ್ ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ರಾಜು ಭಾಯ್ ಸರ್ದಾರ್ ಲಖಪತ್ ತಾಲ್ಲೂಕು ಗುರುದ್ವಾರದ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: BJP ಮತ್ತು RSS ಸಿಖ್ ಜನಾಂಗವನ್ನು ಮುಗಿಸಲು ಪ್ರಯತ್ನಿಸುತ್ತಿದೆ: ಸಿಖ್ ಧರ್ಮಗುರುವಿನ ಆತ್ಮಹತ್ಯಾ ಟಿಪ್ಪಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...